ದಕ್ಷಿಣ ಭಾರತದಲ್ಲಿ ರಸಗೊಬ್ಬರಗಳ ನಿರ್ವಹಣಾ ವೆಚ್ಚ ಹೆಚ್ಚಳ

February 9, 2022
9:04 AM

ಭತ್ತದ ನಾಟಿಗೆ ಬಳಸುವ ರಸಗೊಬ್ಬರದ ದರಗಳು ವಿಪರೀತವಾಗಿ ಹೆಚ್ಚಳವಾಗಿರುವುದು ರೈತರಲ್ಲಿ ಆತಂಕ ಮನೆಮಾಡಿದೆ. ರಸಗೊಬ್ಬರ ದರ ಹೆಚ್ಚಳವು ಇತ್ತೀಚಿಗೆ ಕೃಷಿ ವೆಚ್ಚ ಹೆಚ್ಚಳಕ್ಕೆ ಪ್ರಮುಖ ಕಾರಣವಾಗುತ್ತಿದೆ.

ಸರ್ಕಾರಿ ಮೂಲಗಳನ್ನು ಉಲ್ಲೇಖಿಸಿ ಇಂಡಿಯಾ ಡೇಟಾ ಪೋರ್ಟಲ್ ನಡೆಸಿರುವ ಅಧ್ಯಯನದ ಪ್ರಕಾರ 2008 ಮತ್ತು 2018 ರ ನಡುವೆ ಕರ್ನಾಟಕ ಸೇರಿದಂತೆ ಆಂಧ್ರ ಪ್ರದೇಶ ಮತ್ತು ತಮಿಳುನಾಡು ರಾಜ್ಯಗಳಲ್ಲಿ ರಸಗೊಬ್ಬರದ ದರಗಳ ಏರಿಕೆಯಿಂದ ಭತ್ತದ ಬೆಳೆ ವೆಚ್ಚ ಶೇ. 200 ರಷ್ಟು ಏರಿಕೆ ಕಂಡಿದೆ. ಕರ್ನಾಟಕದಲ್ಲಿ 2008 ರಲ್ಲಿ ಒಂದು ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯುವ ಭತ್ತದ ಬೆಳೆಗೆ ಅಗತ್ಯವಿದ್ದ ರಸಗೊಬ್ಬರದ ಕಾರ್ಯಕಾರಿ ವೆಚ್ಚ 4,000 ರೂಪಾಯಿಗಿಂತ ಕಡಿಮೆಯಿತು. ಆದರೆ ಅದು 018 ರ ವೇಳೆಗೆ ಬಹುತೇಕ 10,000 ರೂಪಾಯಿ ಗಡಿಯತ್ತ ನುಸುಳಿದೆ. ಗರಿಷ್ಠ ಪ್ರಮಾಣದಲ್ಲಿ ಶೇ. ೦3 ರಷ್ಟು ಭತ್ತದ ಬೆಳೆಗೆ ಬಳಸುವ ರಸಗೊಬ್ಬರ ನಿರ್ವಹಣಾ ದರ ಏರಿಕೆಯಾಗಿದೆ.

ದಕ್ಷಿಣ ಭಾರತದ ರಾಜ್ಯಗಳಲ್ಲಿ ಭತ್ತದ ಬೆಳೆಗೆ ಬಳಸುವ ರಸಗೊಬ್ಬ ನಿರ್ವಹಣಾ ದರಗಳು ಹೆಚ್ಚಳವಾಗಿದ್ದ ಕಾರಣದಿಂದ ಬೆಳೆ ಬೆಲೆ ಸಹ ಅಧಿಕವಾಗುತ್ತಿದೆ ಎಂದು ಮೂಲಗಳು ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು
September 13, 2026
8:13 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?
September 12, 2026
7:08 AM
by: ದ ರೂರಲ್ ಮಿರರ್.ಕಾಂ
ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು
September 11, 2026
10:42 AM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror