The Rural Mirror ವಾರದ ವಿಶೇಷ

ಕೃಷಿಕನ ಆವಿಷ್ಕಾರ | ಸೇತುವೆ ಸಮಸ್ಯೆಗೆ ಪರಿಹಾರ ಕಂಡುಹಿಡಿದ ಕಾಸರಗೋಡು ಕೃಷಿಕ…! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಇಲ್ಲಿ ಕೃಷಿಕರಿಗೆ ಹೊಳೆ ಸಮಸ್ಯೆ ಅಲ್ಲ. ಕೃಷಿ ನೀರು ಬೇಕು, ಹೊಳೆಯೂ ಬೇಕು. ಆದರೆ ಹೊಳೆ ದಾಟುವುದು ಸಮಸ್ಯೆಯಾಗಿತ್ತು. ಹೊಳೆಯ ಆ ಕಡೆಯ ಕೃಷಿ ವಸ್ತುಗಳು ಈ ಕಡೆಗೆ ಬರುವುದು  ಸಮಸ್ಯೆಯಾಗಿತ್ತು. ಅದಕ್ಕೆ ಪರಿಹಾರ ಕಂಡುಕೊಂಡ ಕೃಷಿಕನ ಸಾಹಸಗಾಥೆ ಬಹು ಕುತೂಹಲ. ಇವರು ಕಾಸರಗೋಡು ಜಿಲ್ಲೆಯ ಪೆರಡಾಲ ಗ್ರಾಮದ ಕೃಷಿ ಭೀಮೇಶ್.

Advertisement

ಕಾಸರಗೋಡು ಜಿಲ್ಲೆಯ ಪೆರಡಾಲ ಗ್ರಾಮವು  ಗುಡ್ಡ ತಟ್ಟುಗಳಿಂದ ಕೂಡಿದ ಪ್ರದೇಶ.‌ ಪೆರಡಾಲ ವರದಾ ನದಿಯ ಸುತ್ತಮುತ್ತ ಸಂಪೂರ್ಣ ಅಡಿಕೆ, ತೆಂಗು, ಕೃಷಿಯಿಂದ ಕೂಡಿದೆ. ಇಲ್ಲಿ ಕೃಷಿಕರು ತಮ್ಮ ಕೃಷಿ ಉತ್ಪನ್ನಗಳನ್ನು ಮನೆಗೆ ಸಾಗಿಸಲು ಹರಸಾಹಸವನ್ನು ಪಡುತ್ತಿರುವುದು  ಅನೇಕ ವರ್ಷಗಳಿಂದಲೂ ಇದೆ. ಇಂತಹ ಸಮಸ್ಯೆಯ ಸುಳಿಯಲ್ಲಿ ಪೆರಡಾಲದ ಮಿಂಚಿನಡ್ಕದಲ್ಲಿ ಪರಂಪರಾಗತವಾಗಿ ಕೃಷಿಯನ್ನೇ ನೆಚ್ಚಿಕೊಂಡ ಕುಟುಂಬದಿಂದ ಬಂದ ಭೀಮೇಶ್ ಅವರು ತಮ್ಮ ಪ್ರಯತ್ನದಿಂದ ಈ ಸಮಸ್ಯೆಗೆ ವಿರಾಮವನ್ನು ನೀಡಿದ್ದಾರೆ. ಇವರು ತಮ್ಮ ಪ್ರಯತ್ನದ ಮೂಲಕ ಹೊಳೆಯ ಎರಡೂ ಬದಿಗೆ ಸಾಗಲು ರೋಪ್‌ವೇ ಟ್ರಾಲಿ ನಿರ್ಮಿಸಿದ್ದಾರೆ.ಈಗ ಸಮಸ್ಯೆಯಿಂದ ಮುಕ್ತರಾಗಿದ್ದಾರೆ.

ಚಿತ್ರ : ಶ್ಯಾಮ ಪ್ರಸಾದ್‌ ಸರಳಿ

ಕ್ಯಾಂಪ್ಕೋ ಸಂಸ್ಥೆಯ ನೇತೃತ್ವದಲ್ಲಿ ಪುತ್ತೂರಿನಲ್ಲಿ ನಡೆದ ಕೃಷಿ ಮೇಳಕ್ಕೆ ತೆರಳಿದ ವೇಳೆ ಭೀಮೇಶ್‌ ಅವರಿಗೆ ರೂಪ್‌ವೇ ನಿರ್ಮಾಣ ಮಾಡಿದರೆ ಹೇಗೆ ಎಂಬ ಆಲೋಚನೆ ಬಂತು. ಇದರಂತೆ ಅವರು ಪುತ್ತೂರು ವಿವೇಕಾನಂದ ಕಾಲೇಜಿನ ಮೆಕ್ಯಾನಿಕ್ ವಿಭಾಗದಲ್ಲಿ 8 ವರ್ಷ ಉಪನ್ಯಾಸಕರಾಗಿ ಅನುಭವವಿರುವ ಶಿವಮೊಗ್ಗ ಮೂಲದ ಸುನಿಲ್ ಬಿ. ಲಕ್ಕುಂಡಿ ಜತೆ ಮಾತಾಡಿ, ಅವರ ಸಲಹೆಯ ಮೇರೆಗೆ ಈ ರೂಪ್‌ವೇ ನಿರ್ಮಾಣವಾಗಿದೆ.

ಮಂಗಳೂರು ಬಂದರಿನಲ್ಲಿ ಹಡಗಿನ ಉಪಯೋಗಕ್ಕಿರುವ ತುಕ್ಕು ಹಿಡಿಯದಂತಹ ಕಬ್ಬಿಣದ ಕಂಬಗಳು ರೋಪ್ ಹಾಗೂ ಇನ್ನಿತರ ಅಗತ್ಯ ವಸ್ತುಗಳನ್ನು ತರಿಸಿಕೊಂಡು.  ಸುಮಾರು 60 ಸಾವಿರ ರೂ ವೆಚ್ಚದಲ್ಲಿ ಈ ರೋಪ್‌ವೇ ನಿರ್ಮಾಣಗೊಂಡಿತು. ತೊಟ್ಟಿಗೆ ನೈಲಾನ್ ಬಳ್ಳಿಯನ್ನು ಕಟ್ಟಿ ರಾಟೆಯ ಮೂಲಕ ಕುಳಿತಲ್ಲಿಂದಲೇ ಎರಡೂ ಬದಿಗೆ ಸಾಗಬಹುದಾದಂತಹ ವ್ಯವಸ್ಥೆಯನ್ನೂ ಅಳವಡಿಸಿದ್ದಾರೆ. ಅಡಿಕೆ ಕೊಯ್ಲು ನಡೆಸಿ ತೋಟದಲ್ಲೇ ಅಡಿಕೆಯನ್ನು ಗೊನೆಯಿಂದ ಬೇರ್ಪಡಿಸಿ ಗೋಣಿ ಚೀಲದಲ್ಲಿ ತುಂಬಿಸಿ ರೋಪ್ ವೇ ಮೂಲಕ ಸಾಗಿಸಬಹುದು ಮಾತ್ರವಲ್ಲ ತೋಟಕ್ಕೆ ಗೊಬ್ಬರ ಸಾಗಾಟಕ್ಕೂ ಇದನ್ನು ಬಳಸಬಹುದು. ಯಾವುದೇ ಕೃಷಿ ಉತ್ಪನ್ನವನ್ನು ತೊಟ್ಟಿನಲ್ಲಿ ಇಟ್ಟು ಹಗ್ಗವನ್ನು ಎಳೆಯುವುದು ಅಥವಾ ಅಳವಡಿಸಲಾದ ಚಕ್ರವನ್ನು ತಿರುಗಿಸಿದರೆ ಅಲ್ಲಿಂದ ಮುಂದಕ್ಕೆ ಸರಾಗವಾಗಿ ಟ್ರಾಲಿ ಓಡಾಡುತ್ತದೆ. ಒಮ್ಮೆಗೆ ಸುಮಾರು ಎರಡೂವರೆ ಕ್ವಿಂಟಾಲ್‌ ಸಾಗಾಟ ಮಾಡಲು ಈಗ ಸಾಧ್ಯವಾಗುತ್ತದೆ.

Advertisement
ಚಿತ್ರ : ಶ್ಯಾಮ ಪ್ರಸಾದ್‌ ಸರಳಿ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಆನೆ ದಾಳಿಗೆ ಮೂರು ವರ್ಷದಲ್ಲಿ 129 ರೈತರು ಬಲಿ | ವಿಧಾನಪರಿಷತ್‌ನಲ್ಲಿ ಮಾಹಿತಿ ನೀಡಿದ ಅರಣ್ಯ ಇಲಾಖೆ

ಕಳೆದ ಮೂರು ವರ್ಷಗಳಿಂದ ಕಾಡಾನೆ ದಾಳಿಗೆ ಒಟ್ಟು 129 ಮಂದಿ ರೈತರು ಬಲಿಯಾಗಿದ್ದಾರೆ.…

7 hours ago

ಹವಾಮಾನ ವರದಿ | 11-08-2025 | ಇಂದು ಸಾಮಾನ್ಯ ಮಳೆ | ಆ-12 ರಿಂದ ಆ-20 ರವರಗೆ ರಾಜ್ಯದ ವಿವಿದೆಡೆ ಮಳೆ |

ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…

14 hours ago

ವೈಜ್ಞಾನಿಕ ಶಿಫಾರಸ್ಸಿನಂತೆ ರಸಗೊಬ್ಬರದ ಬಳಕೆ ಸೂಕ್ತ – ರೈತರಿಗೆ ಸಲಹೆ

ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…

19 hours ago

ರಾಜ್ಯದ ಹಲವೆಡೆ ಮುಂದಿನ 7 ದಿನಗಳ ಕಾಲ ವ್ಯಾಪಕ ಮಳೆ | ಬೆಂಗಳೂರಿಗೆ ಎಲ್ಲೋ ಅಲರ್ಟ್

ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…

21 hours ago

ಬದುಕು ಪುರಾಣ | ಜ್ಞಾನದ ಪ್ರತಿನಿಧಿ ಗಂಗಾಪುತ್ರ

ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…

2 days ago

ಬೆಳೆ ಹಾನಿ ಕುರಿತು ಸಮಗ್ರವಾಗಿ ಸಮೀಕ್ಷೆಗೆ ಸೂಚನೆ

ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…

2 days ago