Advertisement
The Rural Mirror ವಾರದ ವಿಶೇಷ

ಕೃಷಿಕನ ಆವಿಷ್ಕಾರ | ಸೇತುವೆ ಸಮಸ್ಯೆಗೆ ಪರಿಹಾರ ಕಂಡುಹಿಡಿದ ಕಾಸರಗೋಡು ಕೃಷಿಕ…! |

Share

ಇಲ್ಲಿ ಕೃಷಿಕರಿಗೆ ಹೊಳೆ ಸಮಸ್ಯೆ ಅಲ್ಲ. ಕೃಷಿ ನೀರು ಬೇಕು, ಹೊಳೆಯೂ ಬೇಕು. ಆದರೆ ಹೊಳೆ ದಾಟುವುದು ಸಮಸ್ಯೆಯಾಗಿತ್ತು. ಹೊಳೆಯ ಆ ಕಡೆಯ ಕೃಷಿ ವಸ್ತುಗಳು ಈ ಕಡೆಗೆ ಬರುವುದು  ಸಮಸ್ಯೆಯಾಗಿತ್ತು. ಅದಕ್ಕೆ ಪರಿಹಾರ ಕಂಡುಕೊಂಡ ಕೃಷಿಕನ ಸಾಹಸಗಾಥೆ ಬಹು ಕುತೂಹಲ. ಇವರು ಕಾಸರಗೋಡು ಜಿಲ್ಲೆಯ ಪೆರಡಾಲ ಗ್ರಾಮದ ಕೃಷಿ ಭೀಮೇಶ್.

ಕಾಸರಗೋಡು ಜಿಲ್ಲೆಯ ಪೆರಡಾಲ ಗ್ರಾಮವು  ಗುಡ್ಡ ತಟ್ಟುಗಳಿಂದ ಕೂಡಿದ ಪ್ರದೇಶ.‌ ಪೆರಡಾಲ ವರದಾ ನದಿಯ ಸುತ್ತಮುತ್ತ ಸಂಪೂರ್ಣ ಅಡಿಕೆ, ತೆಂಗು, ಕೃಷಿಯಿಂದ ಕೂಡಿದೆ. ಇಲ್ಲಿ ಕೃಷಿಕರು ತಮ್ಮ ಕೃಷಿ ಉತ್ಪನ್ನಗಳನ್ನು ಮನೆಗೆ ಸಾಗಿಸಲು ಹರಸಾಹಸವನ್ನು ಪಡುತ್ತಿರುವುದು  ಅನೇಕ ವರ್ಷಗಳಿಂದಲೂ ಇದೆ. ಇಂತಹ ಸಮಸ್ಯೆಯ ಸುಳಿಯಲ್ಲಿ ಪೆರಡಾಲದ ಮಿಂಚಿನಡ್ಕದಲ್ಲಿ ಪರಂಪರಾಗತವಾಗಿ ಕೃಷಿಯನ್ನೇ ನೆಚ್ಚಿಕೊಂಡ ಕುಟುಂಬದಿಂದ ಬಂದ ಭೀಮೇಶ್ ಅವರು ತಮ್ಮ ಪ್ರಯತ್ನದಿಂದ ಈ ಸಮಸ್ಯೆಗೆ ವಿರಾಮವನ್ನು ನೀಡಿದ್ದಾರೆ. ಇವರು ತಮ್ಮ ಪ್ರಯತ್ನದ ಮೂಲಕ ಹೊಳೆಯ ಎರಡೂ ಬದಿಗೆ ಸಾಗಲು ರೋಪ್‌ವೇ ಟ್ರಾಲಿ ನಿರ್ಮಿಸಿದ್ದಾರೆ.ಈಗ ಸಮಸ್ಯೆಯಿಂದ ಮುಕ್ತರಾಗಿದ್ದಾರೆ.

ಚಿತ್ರ : ಶ್ಯಾಮ ಪ್ರಸಾದ್‌ ಸರಳಿ

ಕ್ಯಾಂಪ್ಕೋ ಸಂಸ್ಥೆಯ ನೇತೃತ್ವದಲ್ಲಿ ಪುತ್ತೂರಿನಲ್ಲಿ ನಡೆದ ಕೃಷಿ ಮೇಳಕ್ಕೆ ತೆರಳಿದ ವೇಳೆ ಭೀಮೇಶ್‌ ಅವರಿಗೆ ರೂಪ್‌ವೇ ನಿರ್ಮಾಣ ಮಾಡಿದರೆ ಹೇಗೆ ಎಂಬ ಆಲೋಚನೆ ಬಂತು. ಇದರಂತೆ ಅವರು ಪುತ್ತೂರು ವಿವೇಕಾನಂದ ಕಾಲೇಜಿನ ಮೆಕ್ಯಾನಿಕ್ ವಿಭಾಗದಲ್ಲಿ 8 ವರ್ಷ ಉಪನ್ಯಾಸಕರಾಗಿ ಅನುಭವವಿರುವ ಶಿವಮೊಗ್ಗ ಮೂಲದ ಸುನಿಲ್ ಬಿ. ಲಕ್ಕುಂಡಿ ಜತೆ ಮಾತಾಡಿ, ಅವರ ಸಲಹೆಯ ಮೇರೆಗೆ ಈ ರೂಪ್‌ವೇ ನಿರ್ಮಾಣವಾಗಿದೆ.

ಮಂಗಳೂರು ಬಂದರಿನಲ್ಲಿ ಹಡಗಿನ ಉಪಯೋಗಕ್ಕಿರುವ ತುಕ್ಕು ಹಿಡಿಯದಂತಹ ಕಬ್ಬಿಣದ ಕಂಬಗಳು ರೋಪ್ ಹಾಗೂ ಇನ್ನಿತರ ಅಗತ್ಯ ವಸ್ತುಗಳನ್ನು ತರಿಸಿಕೊಂಡು.  ಸುಮಾರು 60 ಸಾವಿರ ರೂ ವೆಚ್ಚದಲ್ಲಿ ಈ ರೋಪ್‌ವೇ ನಿರ್ಮಾಣಗೊಂಡಿತು. ತೊಟ್ಟಿಗೆ ನೈಲಾನ್ ಬಳ್ಳಿಯನ್ನು ಕಟ್ಟಿ ರಾಟೆಯ ಮೂಲಕ ಕುಳಿತಲ್ಲಿಂದಲೇ ಎರಡೂ ಬದಿಗೆ ಸಾಗಬಹುದಾದಂತಹ ವ್ಯವಸ್ಥೆಯನ್ನೂ ಅಳವಡಿಸಿದ್ದಾರೆ. ಅಡಿಕೆ ಕೊಯ್ಲು ನಡೆಸಿ ತೋಟದಲ್ಲೇ ಅಡಿಕೆಯನ್ನು ಗೊನೆಯಿಂದ ಬೇರ್ಪಡಿಸಿ ಗೋಣಿ ಚೀಲದಲ್ಲಿ ತುಂಬಿಸಿ ರೋಪ್ ವೇ ಮೂಲಕ ಸಾಗಿಸಬಹುದು ಮಾತ್ರವಲ್ಲ ತೋಟಕ್ಕೆ ಗೊಬ್ಬರ ಸಾಗಾಟಕ್ಕೂ ಇದನ್ನು ಬಳಸಬಹುದು. ಯಾವುದೇ ಕೃಷಿ ಉತ್ಪನ್ನವನ್ನು ತೊಟ್ಟಿನಲ್ಲಿ ಇಟ್ಟು ಹಗ್ಗವನ್ನು ಎಳೆಯುವುದು ಅಥವಾ ಅಳವಡಿಸಲಾದ ಚಕ್ರವನ್ನು ತಿರುಗಿಸಿದರೆ ಅಲ್ಲಿಂದ ಮುಂದಕ್ಕೆ ಸರಾಗವಾಗಿ ಟ್ರಾಲಿ ಓಡಾಡುತ್ತದೆ. ಒಮ್ಮೆಗೆ ಸುಮಾರು ಎರಡೂವರೆ ಕ್ವಿಂಟಾಲ್‌ ಸಾಗಾಟ ಮಾಡಲು ಈಗ ಸಾಧ್ಯವಾಗುತ್ತದೆ.

ಚಿತ್ರ : ಶ್ಯಾಮ ಪ್ರಸಾದ್‌ ಸರಳಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಮುಂಗಾರು ಅಬ್ಬರ | ಕರ್ನಾಟಕ ಸೇರಿ ದೇಶದ ಹಲವೆಡೆ ಭಾರೀ ಮಳೆ – ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಕೇರಳದಲ್ಲಿ ರೆಡ್ ಅಲರ್ಟ್

ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…

34 minutes ago

ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!

ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…

12 hours ago

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…

14 hours ago

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…

20 hours ago

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

1 day ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

1 day ago