Advertisement
The Rural Mirror ವಾರದ ವಿಶೇಷ

ಕೃಷಿಕನ ಆವಿಷ್ಕಾರ | ಸೇತುವೆ ಸಮಸ್ಯೆಗೆ ಪರಿಹಾರ ಕಂಡುಹಿಡಿದ ಕಾಸರಗೋಡು ಕೃಷಿಕ…! |

Share

ಇಲ್ಲಿ ಕೃಷಿಕರಿಗೆ ಹೊಳೆ ಸಮಸ್ಯೆ ಅಲ್ಲ. ಕೃಷಿ ನೀರು ಬೇಕು, ಹೊಳೆಯೂ ಬೇಕು. ಆದರೆ ಹೊಳೆ ದಾಟುವುದು ಸಮಸ್ಯೆಯಾಗಿತ್ತು. ಹೊಳೆಯ ಆ ಕಡೆಯ ಕೃಷಿ ವಸ್ತುಗಳು ಈ ಕಡೆಗೆ ಬರುವುದು  ಸಮಸ್ಯೆಯಾಗಿತ್ತು. ಅದಕ್ಕೆ ಪರಿಹಾರ ಕಂಡುಕೊಂಡ ಕೃಷಿಕನ ಸಾಹಸಗಾಥೆ ಬಹು ಕುತೂಹಲ. ಇವರು ಕಾಸರಗೋಡು ಜಿಲ್ಲೆಯ ಪೆರಡಾಲ ಗ್ರಾಮದ ಕೃಷಿ ಭೀಮೇಶ್.

ಕಾಸರಗೋಡು ಜಿಲ್ಲೆಯ ಪೆರಡಾಲ ಗ್ರಾಮವು  ಗುಡ್ಡ ತಟ್ಟುಗಳಿಂದ ಕೂಡಿದ ಪ್ರದೇಶ.‌ ಪೆರಡಾಲ ವರದಾ ನದಿಯ ಸುತ್ತಮುತ್ತ ಸಂಪೂರ್ಣ ಅಡಿಕೆ, ತೆಂಗು, ಕೃಷಿಯಿಂದ ಕೂಡಿದೆ. ಇಲ್ಲಿ ಕೃಷಿಕರು ತಮ್ಮ ಕೃಷಿ ಉತ್ಪನ್ನಗಳನ್ನು ಮನೆಗೆ ಸಾಗಿಸಲು ಹರಸಾಹಸವನ್ನು ಪಡುತ್ತಿರುವುದು  ಅನೇಕ ವರ್ಷಗಳಿಂದಲೂ ಇದೆ. ಇಂತಹ ಸಮಸ್ಯೆಯ ಸುಳಿಯಲ್ಲಿ ಪೆರಡಾಲದ ಮಿಂಚಿನಡ್ಕದಲ್ಲಿ ಪರಂಪರಾಗತವಾಗಿ ಕೃಷಿಯನ್ನೇ ನೆಚ್ಚಿಕೊಂಡ ಕುಟುಂಬದಿಂದ ಬಂದ ಭೀಮೇಶ್ ಅವರು ತಮ್ಮ ಪ್ರಯತ್ನದಿಂದ ಈ ಸಮಸ್ಯೆಗೆ ವಿರಾಮವನ್ನು ನೀಡಿದ್ದಾರೆ. ಇವರು ತಮ್ಮ ಪ್ರಯತ್ನದ ಮೂಲಕ ಹೊಳೆಯ ಎರಡೂ ಬದಿಗೆ ಸಾಗಲು ರೋಪ್‌ವೇ ಟ್ರಾಲಿ ನಿರ್ಮಿಸಿದ್ದಾರೆ.ಈಗ ಸಮಸ್ಯೆಯಿಂದ ಮುಕ್ತರಾಗಿದ್ದಾರೆ.

ಚಿತ್ರ : ಶ್ಯಾಮ ಪ್ರಸಾದ್‌ ಸರಳಿ

ಕ್ಯಾಂಪ್ಕೋ ಸಂಸ್ಥೆಯ ನೇತೃತ್ವದಲ್ಲಿ ಪುತ್ತೂರಿನಲ್ಲಿ ನಡೆದ ಕೃಷಿ ಮೇಳಕ್ಕೆ ತೆರಳಿದ ವೇಳೆ ಭೀಮೇಶ್‌ ಅವರಿಗೆ ರೂಪ್‌ವೇ ನಿರ್ಮಾಣ ಮಾಡಿದರೆ ಹೇಗೆ ಎಂಬ ಆಲೋಚನೆ ಬಂತು. ಇದರಂತೆ ಅವರು ಪುತ್ತೂರು ವಿವೇಕಾನಂದ ಕಾಲೇಜಿನ ಮೆಕ್ಯಾನಿಕ್ ವಿಭಾಗದಲ್ಲಿ 8 ವರ್ಷ ಉಪನ್ಯಾಸಕರಾಗಿ ಅನುಭವವಿರುವ ಶಿವಮೊಗ್ಗ ಮೂಲದ ಸುನಿಲ್ ಬಿ. ಲಕ್ಕುಂಡಿ ಜತೆ ಮಾತಾಡಿ, ಅವರ ಸಲಹೆಯ ಮೇರೆಗೆ ಈ ರೂಪ್‌ವೇ ನಿರ್ಮಾಣವಾಗಿದೆ.

ಮಂಗಳೂರು ಬಂದರಿನಲ್ಲಿ ಹಡಗಿನ ಉಪಯೋಗಕ್ಕಿರುವ ತುಕ್ಕು ಹಿಡಿಯದಂತಹ ಕಬ್ಬಿಣದ ಕಂಬಗಳು ರೋಪ್ ಹಾಗೂ ಇನ್ನಿತರ ಅಗತ್ಯ ವಸ್ತುಗಳನ್ನು ತರಿಸಿಕೊಂಡು.  ಸುಮಾರು 60 ಸಾವಿರ ರೂ ವೆಚ್ಚದಲ್ಲಿ ಈ ರೋಪ್‌ವೇ ನಿರ್ಮಾಣಗೊಂಡಿತು. ತೊಟ್ಟಿಗೆ ನೈಲಾನ್ ಬಳ್ಳಿಯನ್ನು ಕಟ್ಟಿ ರಾಟೆಯ ಮೂಲಕ ಕುಳಿತಲ್ಲಿಂದಲೇ ಎರಡೂ ಬದಿಗೆ ಸಾಗಬಹುದಾದಂತಹ ವ್ಯವಸ್ಥೆಯನ್ನೂ ಅಳವಡಿಸಿದ್ದಾರೆ. ಅಡಿಕೆ ಕೊಯ್ಲು ನಡೆಸಿ ತೋಟದಲ್ಲೇ ಅಡಿಕೆಯನ್ನು ಗೊನೆಯಿಂದ ಬೇರ್ಪಡಿಸಿ ಗೋಣಿ ಚೀಲದಲ್ಲಿ ತುಂಬಿಸಿ ರೋಪ್ ವೇ ಮೂಲಕ ಸಾಗಿಸಬಹುದು ಮಾತ್ರವಲ್ಲ ತೋಟಕ್ಕೆ ಗೊಬ್ಬರ ಸಾಗಾಟಕ್ಕೂ ಇದನ್ನು ಬಳಸಬಹುದು. ಯಾವುದೇ ಕೃಷಿ ಉತ್ಪನ್ನವನ್ನು ತೊಟ್ಟಿನಲ್ಲಿ ಇಟ್ಟು ಹಗ್ಗವನ್ನು ಎಳೆಯುವುದು ಅಥವಾ ಅಳವಡಿಸಲಾದ ಚಕ್ರವನ್ನು ತಿರುಗಿಸಿದರೆ ಅಲ್ಲಿಂದ ಮುಂದಕ್ಕೆ ಸರಾಗವಾಗಿ ಟ್ರಾಲಿ ಓಡಾಡುತ್ತದೆ. ಒಮ್ಮೆಗೆ ಸುಮಾರು ಎರಡೂವರೆ ಕ್ವಿಂಟಾಲ್‌ ಸಾಗಾಟ ಮಾಡಲು ಈಗ ಸಾಧ್ಯವಾಗುತ್ತದೆ.

ಚಿತ್ರ : ಶ್ಯಾಮ ಪ್ರಸಾದ್‌ ಸರಳಿ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

5 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

14 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

17 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

22 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

2 days ago