Advertisement
The Rural Mirror ವಾರದ ವಿಶೇಷ

ಕೃಷಿಕನ ಆವಿಷ್ಕಾರ | ಸೇತುವೆ ಸಮಸ್ಯೆಗೆ ಪರಿಹಾರ ಕಂಡುಹಿಡಿದ ಕಾಸರಗೋಡು ಕೃಷಿಕ…! |

Share

ಇಲ್ಲಿ ಕೃಷಿಕರಿಗೆ ಹೊಳೆ ಸಮಸ್ಯೆ ಅಲ್ಲ. ಕೃಷಿ ನೀರು ಬೇಕು, ಹೊಳೆಯೂ ಬೇಕು. ಆದರೆ ಹೊಳೆ ದಾಟುವುದು ಸಮಸ್ಯೆಯಾಗಿತ್ತು. ಹೊಳೆಯ ಆ ಕಡೆಯ ಕೃಷಿ ವಸ್ತುಗಳು ಈ ಕಡೆಗೆ ಬರುವುದು  ಸಮಸ್ಯೆಯಾಗಿತ್ತು. ಅದಕ್ಕೆ ಪರಿಹಾರ ಕಂಡುಕೊಂಡ ಕೃಷಿಕನ ಸಾಹಸಗಾಥೆ ಬಹು ಕುತೂಹಲ. ಇವರು ಕಾಸರಗೋಡು ಜಿಲ್ಲೆಯ ಪೆರಡಾಲ ಗ್ರಾಮದ ಕೃಷಿ ಭೀಮೇಶ್.

ಕಾಸರಗೋಡು ಜಿಲ್ಲೆಯ ಪೆರಡಾಲ ಗ್ರಾಮವು  ಗುಡ್ಡ ತಟ್ಟುಗಳಿಂದ ಕೂಡಿದ ಪ್ರದೇಶ.‌ ಪೆರಡಾಲ ವರದಾ ನದಿಯ ಸುತ್ತಮುತ್ತ ಸಂಪೂರ್ಣ ಅಡಿಕೆ, ತೆಂಗು, ಕೃಷಿಯಿಂದ ಕೂಡಿದೆ. ಇಲ್ಲಿ ಕೃಷಿಕರು ತಮ್ಮ ಕೃಷಿ ಉತ್ಪನ್ನಗಳನ್ನು ಮನೆಗೆ ಸಾಗಿಸಲು ಹರಸಾಹಸವನ್ನು ಪಡುತ್ತಿರುವುದು  ಅನೇಕ ವರ್ಷಗಳಿಂದಲೂ ಇದೆ. ಇಂತಹ ಸಮಸ್ಯೆಯ ಸುಳಿಯಲ್ಲಿ ಪೆರಡಾಲದ ಮಿಂಚಿನಡ್ಕದಲ್ಲಿ ಪರಂಪರಾಗತವಾಗಿ ಕೃಷಿಯನ್ನೇ ನೆಚ್ಚಿಕೊಂಡ ಕುಟುಂಬದಿಂದ ಬಂದ ಭೀಮೇಶ್ ಅವರು ತಮ್ಮ ಪ್ರಯತ್ನದಿಂದ ಈ ಸಮಸ್ಯೆಗೆ ವಿರಾಮವನ್ನು ನೀಡಿದ್ದಾರೆ. ಇವರು ತಮ್ಮ ಪ್ರಯತ್ನದ ಮೂಲಕ ಹೊಳೆಯ ಎರಡೂ ಬದಿಗೆ ಸಾಗಲು ರೋಪ್‌ವೇ ಟ್ರಾಲಿ ನಿರ್ಮಿಸಿದ್ದಾರೆ.ಈಗ ಸಮಸ್ಯೆಯಿಂದ ಮುಕ್ತರಾಗಿದ್ದಾರೆ.

ಚಿತ್ರ : ಶ್ಯಾಮ ಪ್ರಸಾದ್‌ ಸರಳಿ

ಕ್ಯಾಂಪ್ಕೋ ಸಂಸ್ಥೆಯ ನೇತೃತ್ವದಲ್ಲಿ ಪುತ್ತೂರಿನಲ್ಲಿ ನಡೆದ ಕೃಷಿ ಮೇಳಕ್ಕೆ ತೆರಳಿದ ವೇಳೆ ಭೀಮೇಶ್‌ ಅವರಿಗೆ ರೂಪ್‌ವೇ ನಿರ್ಮಾಣ ಮಾಡಿದರೆ ಹೇಗೆ ಎಂಬ ಆಲೋಚನೆ ಬಂತು. ಇದರಂತೆ ಅವರು ಪುತ್ತೂರು ವಿವೇಕಾನಂದ ಕಾಲೇಜಿನ ಮೆಕ್ಯಾನಿಕ್ ವಿಭಾಗದಲ್ಲಿ 8 ವರ್ಷ ಉಪನ್ಯಾಸಕರಾಗಿ ಅನುಭವವಿರುವ ಶಿವಮೊಗ್ಗ ಮೂಲದ ಸುನಿಲ್ ಬಿ. ಲಕ್ಕುಂಡಿ ಜತೆ ಮಾತಾಡಿ, ಅವರ ಸಲಹೆಯ ಮೇರೆಗೆ ಈ ರೂಪ್‌ವೇ ನಿರ್ಮಾಣವಾಗಿದೆ.

ಮಂಗಳೂರು ಬಂದರಿನಲ್ಲಿ ಹಡಗಿನ ಉಪಯೋಗಕ್ಕಿರುವ ತುಕ್ಕು ಹಿಡಿಯದಂತಹ ಕಬ್ಬಿಣದ ಕಂಬಗಳು ರೋಪ್ ಹಾಗೂ ಇನ್ನಿತರ ಅಗತ್ಯ ವಸ್ತುಗಳನ್ನು ತರಿಸಿಕೊಂಡು.  ಸುಮಾರು 60 ಸಾವಿರ ರೂ ವೆಚ್ಚದಲ್ಲಿ ಈ ರೋಪ್‌ವೇ ನಿರ್ಮಾಣಗೊಂಡಿತು. ತೊಟ್ಟಿಗೆ ನೈಲಾನ್ ಬಳ್ಳಿಯನ್ನು ಕಟ್ಟಿ ರಾಟೆಯ ಮೂಲಕ ಕುಳಿತಲ್ಲಿಂದಲೇ ಎರಡೂ ಬದಿಗೆ ಸಾಗಬಹುದಾದಂತಹ ವ್ಯವಸ್ಥೆಯನ್ನೂ ಅಳವಡಿಸಿದ್ದಾರೆ. ಅಡಿಕೆ ಕೊಯ್ಲು ನಡೆಸಿ ತೋಟದಲ್ಲೇ ಅಡಿಕೆಯನ್ನು ಗೊನೆಯಿಂದ ಬೇರ್ಪಡಿಸಿ ಗೋಣಿ ಚೀಲದಲ್ಲಿ ತುಂಬಿಸಿ ರೋಪ್ ವೇ ಮೂಲಕ ಸಾಗಿಸಬಹುದು ಮಾತ್ರವಲ್ಲ ತೋಟಕ್ಕೆ ಗೊಬ್ಬರ ಸಾಗಾಟಕ್ಕೂ ಇದನ್ನು ಬಳಸಬಹುದು. ಯಾವುದೇ ಕೃಷಿ ಉತ್ಪನ್ನವನ್ನು ತೊಟ್ಟಿನಲ್ಲಿ ಇಟ್ಟು ಹಗ್ಗವನ್ನು ಎಳೆಯುವುದು ಅಥವಾ ಅಳವಡಿಸಲಾದ ಚಕ್ರವನ್ನು ತಿರುಗಿಸಿದರೆ ಅಲ್ಲಿಂದ ಮುಂದಕ್ಕೆ ಸರಾಗವಾಗಿ ಟ್ರಾಲಿ ಓಡಾಡುತ್ತದೆ. ಒಮ್ಮೆಗೆ ಸುಮಾರು ಎರಡೂವರೆ ಕ್ವಿಂಟಾಲ್‌ ಸಾಗಾಟ ಮಾಡಲು ಈಗ ಸಾಧ್ಯವಾಗುತ್ತದೆ.

ಚಿತ್ರ : ಶ್ಯಾಮ ಪ್ರಸಾದ್‌ ಸರಳಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

10 hours ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

1 day ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

1 day ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

3 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago