ಗದಗ ಜಿಲ್ಲೆಯ ಮುಂಡರಗಿಯ ಬಸಾಪುರದಲ್ಲಿ ರೈತರೊಬ್ಬರು ತಮ್ಮ ಬಂಜರು ಭೂಮಿಯನ್ನು ಕೆರೆಯನ್ನಾಗಿಸಿ ಮೀನುಗಾರಿಕೆಗೆ ಮುಂದಾಗಿದ್ದಾರೆ. ಇದೇ ಮೊದಲ ಬಾರಿಗೆ ಮುಂಡರಗಿ ತಾಲೂಕಿನಲ್ಲಿ ಕಲ್ಲು ಪುಡಿ ಮಾಡಿ ಐದು ಸಣ್ಣ ಕೆರೆಗಳನ್ನಾಗಿ ಮಾಡಲಾಗಿದ್ದು, ಅಲ್ಲಿ 25 ಲಕ್ಷ ಸಣ್ಣ ಮೀನುಗಳ ಸಾಕಾಣಿಕೆಯನ್ನು ಮಾಡಿದ್ದಾರೆ.
ಜಮೀನು ಫಲವತ್ತಾಗಿಲ್ಲ ಎಂಬ ಕಾರಣದಿಂದಾಗಿ 57 ವರ್ಷದ ಹನುಮಂತಪ್ಪ ಆ ಭೂಮಿಯನ್ನು ಸುಮ್ಮನೆ ಬಿಡಲಿಲ್ಲ, ತಜ್ಞರನ್ನು ಭೇಟಿ ಮಾಡಿ ಏನಾದರೂ ಮಾಡಲು ನಿರ್ಧರಿಸಿದರು. ಮೀನುಗಾರಿಕೆ ಇಲಾಖೆ ಸಿಬ್ಬಂದಿ ಹನುಮಂಪ್ಪ ಅವರಿಗೆ ಈಗ ಮಾರ್ಗದರ್ಶನ ನೀಡುತ್ತಿದ್ದಾರೆ.
ಬೋರ್ವೇಲ್ ಅಳವಡಿಸಿ ನೀರಿನ ಮೂಲ ಮಾಡಿಕೊಂಡು ಮೀನು ಸಾಕಾಣಿಕೆ ಆರಂಭಿಸಿದೆ. ಈ ವೇಳೆ ಮೀನುಗಳನ್ನು ತಿನ್ನಲು ಪಕ್ಷಿಗಳು ಬರಲು ಆರಂಭಿಸಿದ್ದವು. ಆಗ ಪಕ್ಷಿಗಳಿಂದ ಮೀನುಗಳನ್ನು ಉಳಿಸಲು ಅವರು ಕನ್ನಡಿಗಳಿಂದ ಕೆಲವು ಬುಟ್ಟಿಗಳನ್ನು ಸಹ ಮಾಡಿದರು. ಇದೀಗ ಬಿಸಿಲು ನಾಡಿನಲ್ಲೂ ಮೀನುಗಾರಿಕೆ ಸಾಧ್ಯವೆಂದು ಮಾಡಿ ತೋರಿಸಿದ್ದಾರೆ.
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…