ಗದಗ ಜಿಲ್ಲೆಯ ಮುಂಡರಗಿಯ ಬಸಾಪುರದಲ್ಲಿ ರೈತರೊಬ್ಬರು ತಮ್ಮ ಬಂಜರು ಭೂಮಿಯನ್ನು ಕೆರೆಯನ್ನಾಗಿಸಿ ಮೀನುಗಾರಿಕೆಗೆ ಮುಂದಾಗಿದ್ದಾರೆ. ಇದೇ ಮೊದಲ ಬಾರಿಗೆ ಮುಂಡರಗಿ ತಾಲೂಕಿನಲ್ಲಿ ಕಲ್ಲು ಪುಡಿ ಮಾಡಿ ಐದು ಸಣ್ಣ ಕೆರೆಗಳನ್ನಾಗಿ ಮಾಡಲಾಗಿದ್ದು, ಅಲ್ಲಿ 25 ಲಕ್ಷ ಸಣ್ಣ ಮೀನುಗಳ ಸಾಕಾಣಿಕೆಯನ್ನು ಮಾಡಿದ್ದಾರೆ.
ಜಮೀನು ಫಲವತ್ತಾಗಿಲ್ಲ ಎಂಬ ಕಾರಣದಿಂದಾಗಿ 57 ವರ್ಷದ ಹನುಮಂತಪ್ಪ ಆ ಭೂಮಿಯನ್ನು ಸುಮ್ಮನೆ ಬಿಡಲಿಲ್ಲ, ತಜ್ಞರನ್ನು ಭೇಟಿ ಮಾಡಿ ಏನಾದರೂ ಮಾಡಲು ನಿರ್ಧರಿಸಿದರು. ಮೀನುಗಾರಿಕೆ ಇಲಾಖೆ ಸಿಬ್ಬಂದಿ ಹನುಮಂಪ್ಪ ಅವರಿಗೆ ಈಗ ಮಾರ್ಗದರ್ಶನ ನೀಡುತ್ತಿದ್ದಾರೆ.
ಬೋರ್ವೇಲ್ ಅಳವಡಿಸಿ ನೀರಿನ ಮೂಲ ಮಾಡಿಕೊಂಡು ಮೀನು ಸಾಕಾಣಿಕೆ ಆರಂಭಿಸಿದೆ. ಈ ವೇಳೆ ಮೀನುಗಳನ್ನು ತಿನ್ನಲು ಪಕ್ಷಿಗಳು ಬರಲು ಆರಂಭಿಸಿದ್ದವು. ಆಗ ಪಕ್ಷಿಗಳಿಂದ ಮೀನುಗಳನ್ನು ಉಳಿಸಲು ಅವರು ಕನ್ನಡಿಗಳಿಂದ ಕೆಲವು ಬುಟ್ಟಿಗಳನ್ನು ಸಹ ಮಾಡಿದರು. ಇದೀಗ ಬಿಸಿಲು ನಾಡಿನಲ್ಲೂ ಮೀನುಗಾರಿಕೆ ಸಾಧ್ಯವೆಂದು ಮಾಡಿ ತೋರಿಸಿದ್ದಾರೆ.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…