ಗದಗ ಜಿಲ್ಲೆಯ ಮುಂಡರಗಿಯ ಬಸಾಪುರದಲ್ಲಿ ರೈತರೊಬ್ಬರು ತಮ್ಮ ಬಂಜರು ಭೂಮಿಯನ್ನು ಕೆರೆಯನ್ನಾಗಿಸಿ ಮೀನುಗಾರಿಕೆಗೆ ಮುಂದಾಗಿದ್ದಾರೆ. ಇದೇ ಮೊದಲ ಬಾರಿಗೆ ಮುಂಡರಗಿ ತಾಲೂಕಿನಲ್ಲಿ ಕಲ್ಲು ಪುಡಿ ಮಾಡಿ ಐದು ಸಣ್ಣ ಕೆರೆಗಳನ್ನಾಗಿ ಮಾಡಲಾಗಿದ್ದು, ಅಲ್ಲಿ 25 ಲಕ್ಷ ಸಣ್ಣ ಮೀನುಗಳ ಸಾಕಾಣಿಕೆಯನ್ನು ಮಾಡಿದ್ದಾರೆ.
ಜಮೀನು ಫಲವತ್ತಾಗಿಲ್ಲ ಎಂಬ ಕಾರಣದಿಂದಾಗಿ 57 ವರ್ಷದ ಹನುಮಂತಪ್ಪ ಆ ಭೂಮಿಯನ್ನು ಸುಮ್ಮನೆ ಬಿಡಲಿಲ್ಲ, ತಜ್ಞರನ್ನು ಭೇಟಿ ಮಾಡಿ ಏನಾದರೂ ಮಾಡಲು ನಿರ್ಧರಿಸಿದರು. ಮೀನುಗಾರಿಕೆ ಇಲಾಖೆ ಸಿಬ್ಬಂದಿ ಹನುಮಂಪ್ಪ ಅವರಿಗೆ ಈಗ ಮಾರ್ಗದರ್ಶನ ನೀಡುತ್ತಿದ್ದಾರೆ.
ಬೋರ್ವೇಲ್ ಅಳವಡಿಸಿ ನೀರಿನ ಮೂಲ ಮಾಡಿಕೊಂಡು ಮೀನು ಸಾಕಾಣಿಕೆ ಆರಂಭಿಸಿದೆ. ಈ ವೇಳೆ ಮೀನುಗಳನ್ನು ತಿನ್ನಲು ಪಕ್ಷಿಗಳು ಬರಲು ಆರಂಭಿಸಿದ್ದವು. ಆಗ ಪಕ್ಷಿಗಳಿಂದ ಮೀನುಗಳನ್ನು ಉಳಿಸಲು ಅವರು ಕನ್ನಡಿಗಳಿಂದ ಕೆಲವು ಬುಟ್ಟಿಗಳನ್ನು ಸಹ ಮಾಡಿದರು. ಇದೀಗ ಬಿಸಿಲು ನಾಡಿನಲ್ಲೂ ಮೀನುಗಾರಿಕೆ ಸಾಧ್ಯವೆಂದು ಮಾಡಿ ತೋರಿಸಿದ್ದಾರೆ.
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…