ಗದಗ ಜಿಲ್ಲೆಯ ಮುಂಡರಗಿಯ ಬಸಾಪುರದಲ್ಲಿ ರೈತರೊಬ್ಬರು ತಮ್ಮ ಬಂಜರು ಭೂಮಿಯನ್ನು ಕೆರೆಯನ್ನಾಗಿಸಿ ಮೀನುಗಾರಿಕೆಗೆ ಮುಂದಾಗಿದ್ದಾರೆ. ಇದೇ ಮೊದಲ ಬಾರಿಗೆ ಮುಂಡರಗಿ ತಾಲೂಕಿನಲ್ಲಿ ಕಲ್ಲು ಪುಡಿ ಮಾಡಿ ಐದು ಸಣ್ಣ ಕೆರೆಗಳನ್ನಾಗಿ ಮಾಡಲಾಗಿದ್ದು, ಅಲ್ಲಿ 25 ಲಕ್ಷ ಸಣ್ಣ ಮೀನುಗಳ ಸಾಕಾಣಿಕೆಯನ್ನು ಮಾಡಿದ್ದಾರೆ.
ಜಮೀನು ಫಲವತ್ತಾಗಿಲ್ಲ ಎಂಬ ಕಾರಣದಿಂದಾಗಿ 57 ವರ್ಷದ ಹನುಮಂತಪ್ಪ ಆ ಭೂಮಿಯನ್ನು ಸುಮ್ಮನೆ ಬಿಡಲಿಲ್ಲ, ತಜ್ಞರನ್ನು ಭೇಟಿ ಮಾಡಿ ಏನಾದರೂ ಮಾಡಲು ನಿರ್ಧರಿಸಿದರು. ಮೀನುಗಾರಿಕೆ ಇಲಾಖೆ ಸಿಬ್ಬಂದಿ ಹನುಮಂಪ್ಪ ಅವರಿಗೆ ಈಗ ಮಾರ್ಗದರ್ಶನ ನೀಡುತ್ತಿದ್ದಾರೆ.
ಬೋರ್ವೇಲ್ ಅಳವಡಿಸಿ ನೀರಿನ ಮೂಲ ಮಾಡಿಕೊಂಡು ಮೀನು ಸಾಕಾಣಿಕೆ ಆರಂಭಿಸಿದೆ. ಈ ವೇಳೆ ಮೀನುಗಳನ್ನು ತಿನ್ನಲು ಪಕ್ಷಿಗಳು ಬರಲು ಆರಂಭಿಸಿದ್ದವು. ಆಗ ಪಕ್ಷಿಗಳಿಂದ ಮೀನುಗಳನ್ನು ಉಳಿಸಲು ಅವರು ಕನ್ನಡಿಗಳಿಂದ ಕೆಲವು ಬುಟ್ಟಿಗಳನ್ನು ಸಹ ಮಾಡಿದರು. ಇದೀಗ ಬಿಸಿಲು ನಾಡಿನಲ್ಲೂ ಮೀನುಗಾರಿಕೆ ಸಾಧ್ಯವೆಂದು ಮಾಡಿ ತೋರಿಸಿದ್ದಾರೆ.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…