ರೈತ ಕಲ್ಯಾಣ ಯೋಜನೆಯಡಿಯಲ್ಲಿ 1.75 ಲಕ್ಷ ಕೋಟಿ ರೂ ರೈತರಿಗೆ ನೀಡಲಾಗಿದೆ | ಮಧ್ಯಪ್ರದೇಶ ಮುಖ್ಯಮಂತ್ರಿ ಚೌಹಾಣ್

February 18, 2022
8:41 PM

ಕಳೆದ ಎರಡು ವರ್ಷಗಳಲ್ಲಿ ರೈತರಿಗೆ ಕಿಸಾನ್ ಸಮ್ಮಾನ್ ನಿಧಿ, ಶೂನ್ಯ ಬಡ್ಡಿಯ ಸಾಲ ಮತ್ತು ಇತರ ಎಲ್ಲ ರೈತ ಕಲ್ಯಾಣ ಯೋಜನೆಗಳ ಅಡಿಯಲ್ಲಿ ಒಟ್ಟು 1.75 ಲಕ್ಷ ಕೋಟಿ ರೂ.ಗಳನ್ನು ನೀಡಲಾಗಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದರು. 

ಮಧ್ಯಪ್ರದೇಶ ರಾಜ್ಯದ 1074 ಗ್ರಾಮಗಳಲ್ಲಿ ಆಲಿಕಲ್ಲು ಮಳೆ ಹಾಗೂ ಅಕಾಲಿಕ ಮಳೆಯಿಂದ 1,34,019 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಮಾತ್ರವಲ್ಲ ಸಂತ್ರಸ್ತರಿಗೆ ಜಿಲ್ಲಾವರು ಪರಿಹಾರ ಧನ ನೀಡುವ ಕೆಲಸವನ್ನು ಆದ್ಯತೆ ಮೇಲೆ ಮಾಡಲಾಗಿದೆ. ಕಳೆದ ವಾರ ಮುಂಗಾರು 2020 ಮತ್ತು ಹಿಂಗಾರಿನಲ್ಲಿ 2021ಕ್ಕೆ 45 ಲಕ್ಷಕ್ಕೂ ಹೆಚ್ಚು ರೈತರ ಖಾತೆಗಳಿಗೆ ವಿಮಾ ಮೊತ್ತವನ್ನು ಜಮಾ ಮಾಡಲಾಗಿದೆ.

ಮೊದಲ ಮತ್ತು ಎರಡನೇ ಹಂತದಲ್ಲಿ ಗೋಧಿ ಮತ್ತೆ ಭತ್ತವನ್ನು ದಾಖಲೆ ಪ್ರಮಾಣದಲ್ಲಿ ಸಂಗ್ರಹಿಸುವ ಮೂಲಕ ರಾಜ್ಯ ಸರ್ಕಾರ ರೈತರಿಗೆ ಪರಿಹಾರ ನೀಡಿತು. ಕೊರೋನಾ ಮೊದಲ ಅಲೆಯಲ್ಲಿ ಪ್ರತಿಕೂಲ ಪರಿಸ್ಥಿತಿಯ ನಡುವೆಯೂ 1,29,42,000 ಮೆಟ್ರಿಕ್ ಟನ್ ಗೋಧಿಯನ್ನು ಸಂಗ್ರಹಿಸಲಾಗಿದೆ. ಕೊರೋನಾ ಎರಡನೇ ಅಲೆಯಲ್ಲಿ  ಸೋಂಕು ತಡೆಗೆ ಕ್ರಮಕೈಗೊಳ್ಳುವಾಗ ಮತ್ತೆ 1,28,15,000 ಎಟ್ರಿಕ್ ಟನ್ ಗೋಧಿ ಹಾಗೂ 45,85,000 ಮೆಟ್ರಿಕ್ ಟನ್ ಭತ್ತವನ್ನು ಸಂಗ್ರಹಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಝಾರ್ಖಂಡ್‌ನ ಮಹಿಳಾ ರೈತರಿಂದ ಬೆಳೆದ ಮಾವು ಈಗ ಲಂಡನ್‌ಗೆ…! ಬ್ರಿಟನ್‌ಗೆ ಮೊದಲ ಬಾರಿಗೆ ರಫ್ತು
June 8, 2026
8:48 PM
by: ದ ರೂರಲ್ ಮಿರರ್.ಕಾಂ
ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!
June 7, 2026
9:17 PM
by: ದ ರೂರಲ್ ಮಿರರ್.ಕಾಂ
ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ
June 5, 2026
10:04 PM
by: ಮಿರರ್‌ ಡೆಸ್ಕ್
ಲ್ಯಾಬ್‌ ಟು ಲ್ಯಾಂಡ್ – 13.4 ಕೋಟಿ ರೈತರನ್ನು ತಲುಪಿದ ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನ’
June 5, 2026
4:40 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror