ರೈತ ಕಲ್ಯಾಣ ಯೋಜನೆಯಡಿಯಲ್ಲಿ 1.75 ಲಕ್ಷ ಕೋಟಿ ರೂ ರೈತರಿಗೆ ನೀಡಲಾಗಿದೆ | ಮಧ್ಯಪ್ರದೇಶ ಮುಖ್ಯಮಂತ್ರಿ ಚೌಹಾಣ್

February 18, 2022
8:41 PM

ಕಳೆದ ಎರಡು ವರ್ಷಗಳಲ್ಲಿ ರೈತರಿಗೆ ಕಿಸಾನ್ ಸಮ್ಮಾನ್ ನಿಧಿ, ಶೂನ್ಯ ಬಡ್ಡಿಯ ಸಾಲ ಮತ್ತು ಇತರ ಎಲ್ಲ ರೈತ ಕಲ್ಯಾಣ ಯೋಜನೆಗಳ ಅಡಿಯಲ್ಲಿ ಒಟ್ಟು 1.75 ಲಕ್ಷ ಕೋಟಿ ರೂ.ಗಳನ್ನು ನೀಡಲಾಗಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದರು. 

ಮಧ್ಯಪ್ರದೇಶ ರಾಜ್ಯದ 1074 ಗ್ರಾಮಗಳಲ್ಲಿ ಆಲಿಕಲ್ಲು ಮಳೆ ಹಾಗೂ ಅಕಾಲಿಕ ಮಳೆಯಿಂದ 1,34,019 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಮಾತ್ರವಲ್ಲ ಸಂತ್ರಸ್ತರಿಗೆ ಜಿಲ್ಲಾವರು ಪರಿಹಾರ ಧನ ನೀಡುವ ಕೆಲಸವನ್ನು ಆದ್ಯತೆ ಮೇಲೆ ಮಾಡಲಾಗಿದೆ. ಕಳೆದ ವಾರ ಮುಂಗಾರು 2020 ಮತ್ತು ಹಿಂಗಾರಿನಲ್ಲಿ 2021ಕ್ಕೆ 45 ಲಕ್ಷಕ್ಕೂ ಹೆಚ್ಚು ರೈತರ ಖಾತೆಗಳಿಗೆ ವಿಮಾ ಮೊತ್ತವನ್ನು ಜಮಾ ಮಾಡಲಾಗಿದೆ.

ಮೊದಲ ಮತ್ತು ಎರಡನೇ ಹಂತದಲ್ಲಿ ಗೋಧಿ ಮತ್ತೆ ಭತ್ತವನ್ನು ದಾಖಲೆ ಪ್ರಮಾಣದಲ್ಲಿ ಸಂಗ್ರಹಿಸುವ ಮೂಲಕ ರಾಜ್ಯ ಸರ್ಕಾರ ರೈತರಿಗೆ ಪರಿಹಾರ ನೀಡಿತು. ಕೊರೋನಾ ಮೊದಲ ಅಲೆಯಲ್ಲಿ ಪ್ರತಿಕೂಲ ಪರಿಸ್ಥಿತಿಯ ನಡುವೆಯೂ 1,29,42,000 ಮೆಟ್ರಿಕ್ ಟನ್ ಗೋಧಿಯನ್ನು ಸಂಗ್ರಹಿಸಲಾಗಿದೆ. ಕೊರೋನಾ ಎರಡನೇ ಅಲೆಯಲ್ಲಿ  ಸೋಂಕು ತಡೆಗೆ ಕ್ರಮಕೈಗೊಳ್ಳುವಾಗ ಮತ್ತೆ 1,28,15,000 ಎಟ್ರಿಕ್ ಟನ್ ಗೋಧಿ ಹಾಗೂ 45,85,000 ಮೆಟ್ರಿಕ್ ಟನ್ ಭತ್ತವನ್ನು ಸಂಗ್ರಹಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ
September 19, 2026
12:06 PM
by: ದ ರೂರಲ್ ಮಿರರ್.ಕಾಂ
ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ
September 17, 2026
7:20 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ
September 15, 2026
11:12 PM
by: ದ ರೂರಲ್ ಮಿರರ್.ಕಾಂ
ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು
September 13, 2026
8:13 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror