ಕೃಷಿ

ರೈತ ಕಲ್ಯಾಣ ಯೋಜನೆಯಡಿಯಲ್ಲಿ 1.75 ಲಕ್ಷ ಕೋಟಿ ರೂ ರೈತರಿಗೆ ನೀಡಲಾಗಿದೆ | ಮಧ್ಯಪ್ರದೇಶ ಮುಖ್ಯಮಂತ್ರಿ ಚೌಹಾಣ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಳೆದ ಎರಡು ವರ್ಷಗಳಲ್ಲಿ ರೈತರಿಗೆ ಕಿಸಾನ್ ಸಮ್ಮಾನ್ ನಿಧಿ, ಶೂನ್ಯ ಬಡ್ಡಿಯ ಸಾಲ ಮತ್ತು ಇತರ ಎಲ್ಲ ರೈತ ಕಲ್ಯಾಣ ಯೋಜನೆಗಳ ಅಡಿಯಲ್ಲಿ ಒಟ್ಟು 1.75 ಲಕ್ಷ ಕೋಟಿ ರೂ.ಗಳನ್ನು ನೀಡಲಾಗಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದರು. 

Advertisement
Advertisement

ಮಧ್ಯಪ್ರದೇಶ ರಾಜ್ಯದ 1074 ಗ್ರಾಮಗಳಲ್ಲಿ ಆಲಿಕಲ್ಲು ಮಳೆ ಹಾಗೂ ಅಕಾಲಿಕ ಮಳೆಯಿಂದ 1,34,019 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಮಾತ್ರವಲ್ಲ ಸಂತ್ರಸ್ತರಿಗೆ ಜಿಲ್ಲಾವರು ಪರಿಹಾರ ಧನ ನೀಡುವ ಕೆಲಸವನ್ನು ಆದ್ಯತೆ ಮೇಲೆ ಮಾಡಲಾಗಿದೆ. ಕಳೆದ ವಾರ ಮುಂಗಾರು 2020 ಮತ್ತು ಹಿಂಗಾರಿನಲ್ಲಿ 2021ಕ್ಕೆ 45 ಲಕ್ಷಕ್ಕೂ ಹೆಚ್ಚು ರೈತರ ಖಾತೆಗಳಿಗೆ ವಿಮಾ ಮೊತ್ತವನ್ನು ಜಮಾ ಮಾಡಲಾಗಿದೆ.

ಮೊದಲ ಮತ್ತು ಎರಡನೇ ಹಂತದಲ್ಲಿ ಗೋಧಿ ಮತ್ತೆ ಭತ್ತವನ್ನು ದಾಖಲೆ ಪ್ರಮಾಣದಲ್ಲಿ ಸಂಗ್ರಹಿಸುವ ಮೂಲಕ ರಾಜ್ಯ ಸರ್ಕಾರ ರೈತರಿಗೆ ಪರಿಹಾರ ನೀಡಿತು. ಕೊರೋನಾ ಮೊದಲ ಅಲೆಯಲ್ಲಿ ಪ್ರತಿಕೂಲ ಪರಿಸ್ಥಿತಿಯ ನಡುವೆಯೂ 1,29,42,000 ಮೆಟ್ರಿಕ್ ಟನ್ ಗೋಧಿಯನ್ನು ಸಂಗ್ರಹಿಸಲಾಗಿದೆ. ಕೊರೋನಾ ಎರಡನೇ ಅಲೆಯಲ್ಲಿ  ಸೋಂಕು ತಡೆಗೆ ಕ್ರಮಕೈಗೊಳ್ಳುವಾಗ ಮತ್ತೆ 1,28,15,000 ಎಟ್ರಿಕ್ ಟನ್ ಗೋಧಿ ಹಾಗೂ 45,85,000 ಮೆಟ್ರಿಕ್ ಟನ್ ಭತ್ತವನ್ನು ಸಂಗ್ರಹಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಒಂದೇ ರಾಶಿಯಲ್ಲಿ 3 ಗ್ರಹ…..| ತ್ರಿಗ್ರಾಹಿ ಯೋಗವು 50 ವರ್ಷಗಳ ನಂತರ ಸಂಭವಿಸುತ್ತಿದೆ | 5 ರಾಶಿಯವರಿಗೆ ಬಂಪರ್‌ ಲಾಟರಿ..!

ಜೂನ್ 2025ರಲ್ಲಿ ಮಿಥುನ ರಾಶಿಯಲ್ಲಿ ಸೂರ್ಯ, ಬುಧ ಮತ್ತು ಗುರು ಗ್ರಹಗಳ ತ್ರಿಗ್ರಾಹಿ…

7 hours ago

ಕೋಲಾರ ಜಿಲ್ಲೆಯಲ್ಲಿ ನಾಳೆ ಮಾವು ಬೆಳೆಗಾರರಿಂದ ಬಂದ್ ಕರೆ |

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…

16 hours ago

ಕೃಷಿ ಜೊತೆಗೆ ತೋಟಗಾರಿಕಾ ಬೆಳೆಗಳಿಗೆ ಆದ್ಯತೆ ನೀಡಿ

ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…

16 hours ago

ಚಾಮರಾಜನಗರದ ಬೇಡುಗುಳಿ ಬಳಿ ಹುಲಿ ದಾಳಿಗೆ ಮೃತಪಟ್ಟ ಮಹಿಳೆ

ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…

16 hours ago

ರಾಜ್ಯದ ವಿವಿದೆಡೆ ಭಾರೀ ಮಳೆ  ಸಾಧ್ಯತೆ | ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಿ  ಭಾರಿ ಮಳೆ ಮತ್ತು ಗುಡುಗು ಸಹಿತ…

16 hours ago

14 ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ

ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ…

17 hours ago