Advertisement
ಕೃಷಿ

ರೈತ ಕಲ್ಯಾಣ ಯೋಜನೆಯಡಿಯಲ್ಲಿ 1.75 ಲಕ್ಷ ಕೋಟಿ ರೂ ರೈತರಿಗೆ ನೀಡಲಾಗಿದೆ | ಮಧ್ಯಪ್ರದೇಶ ಮುಖ್ಯಮಂತ್ರಿ ಚೌಹಾಣ್

Share

ಕಳೆದ ಎರಡು ವರ್ಷಗಳಲ್ಲಿ ರೈತರಿಗೆ ಕಿಸಾನ್ ಸಮ್ಮಾನ್ ನಿಧಿ, ಶೂನ್ಯ ಬಡ್ಡಿಯ ಸಾಲ ಮತ್ತು ಇತರ ಎಲ್ಲ ರೈತ ಕಲ್ಯಾಣ ಯೋಜನೆಗಳ ಅಡಿಯಲ್ಲಿ ಒಟ್ಟು 1.75 ಲಕ್ಷ ಕೋಟಿ ರೂ.ಗಳನ್ನು ನೀಡಲಾಗಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದರು. 

ಮಧ್ಯಪ್ರದೇಶ ರಾಜ್ಯದ 1074 ಗ್ರಾಮಗಳಲ್ಲಿ ಆಲಿಕಲ್ಲು ಮಳೆ ಹಾಗೂ ಅಕಾಲಿಕ ಮಳೆಯಿಂದ 1,34,019 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಮಾತ್ರವಲ್ಲ ಸಂತ್ರಸ್ತರಿಗೆ ಜಿಲ್ಲಾವರು ಪರಿಹಾರ ಧನ ನೀಡುವ ಕೆಲಸವನ್ನು ಆದ್ಯತೆ ಮೇಲೆ ಮಾಡಲಾಗಿದೆ. ಕಳೆದ ವಾರ ಮುಂಗಾರು 2020 ಮತ್ತು ಹಿಂಗಾರಿನಲ್ಲಿ 2021ಕ್ಕೆ 45 ಲಕ್ಷಕ್ಕೂ ಹೆಚ್ಚು ರೈತರ ಖಾತೆಗಳಿಗೆ ವಿಮಾ ಮೊತ್ತವನ್ನು ಜಮಾ ಮಾಡಲಾಗಿದೆ.

ಮೊದಲ ಮತ್ತು ಎರಡನೇ ಹಂತದಲ್ಲಿ ಗೋಧಿ ಮತ್ತೆ ಭತ್ತವನ್ನು ದಾಖಲೆ ಪ್ರಮಾಣದಲ್ಲಿ ಸಂಗ್ರಹಿಸುವ ಮೂಲಕ ರಾಜ್ಯ ಸರ್ಕಾರ ರೈತರಿಗೆ ಪರಿಹಾರ ನೀಡಿತು. ಕೊರೋನಾ ಮೊದಲ ಅಲೆಯಲ್ಲಿ ಪ್ರತಿಕೂಲ ಪರಿಸ್ಥಿತಿಯ ನಡುವೆಯೂ 1,29,42,000 ಮೆಟ್ರಿಕ್ ಟನ್ ಗೋಧಿಯನ್ನು ಸಂಗ್ರಹಿಸಲಾಗಿದೆ. ಕೊರೋನಾ ಎರಡನೇ ಅಲೆಯಲ್ಲಿ  ಸೋಂಕು ತಡೆಗೆ ಕ್ರಮಕೈಗೊಳ್ಳುವಾಗ ಮತ್ತೆ 1,28,15,000 ಎಟ್ರಿಕ್ ಟನ್ ಗೋಧಿ ಹಾಗೂ 45,85,000 ಮೆಟ್ರಿಕ್ ಟನ್ ಭತ್ತವನ್ನು ಸಂಗ್ರಹಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…

60 minutes ago

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

19 hours ago

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…

23 hours ago

ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!

ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…

2 days ago

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

2 days ago