ಕಳೆದ ಎರಡು ವರ್ಷಗಳಲ್ಲಿ ರೈತರಿಗೆ ಕಿಸಾನ್ ಸಮ್ಮಾನ್ ನಿಧಿ, ಶೂನ್ಯ ಬಡ್ಡಿಯ ಸಾಲ ಮತ್ತು ಇತರ ಎಲ್ಲ ರೈತ ಕಲ್ಯಾಣ ಯೋಜನೆಗಳ ಅಡಿಯಲ್ಲಿ ಒಟ್ಟು 1.75 ಲಕ್ಷ ಕೋಟಿ ರೂ.ಗಳನ್ನು ನೀಡಲಾಗಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದರು.
ಮಧ್ಯಪ್ರದೇಶ ರಾಜ್ಯದ 1074 ಗ್ರಾಮಗಳಲ್ಲಿ ಆಲಿಕಲ್ಲು ಮಳೆ ಹಾಗೂ ಅಕಾಲಿಕ ಮಳೆಯಿಂದ 1,34,019 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಮಾತ್ರವಲ್ಲ ಸಂತ್ರಸ್ತರಿಗೆ ಜಿಲ್ಲಾವರು ಪರಿಹಾರ ಧನ ನೀಡುವ ಕೆಲಸವನ್ನು ಆದ್ಯತೆ ಮೇಲೆ ಮಾಡಲಾಗಿದೆ. ಕಳೆದ ವಾರ ಮುಂಗಾರು 2020 ಮತ್ತು ಹಿಂಗಾರಿನಲ್ಲಿ 2021ಕ್ಕೆ 45 ಲಕ್ಷಕ್ಕೂ ಹೆಚ್ಚು ರೈತರ ಖಾತೆಗಳಿಗೆ ವಿಮಾ ಮೊತ್ತವನ್ನು ಜಮಾ ಮಾಡಲಾಗಿದೆ.
ಮೊದಲ ಮತ್ತು ಎರಡನೇ ಹಂತದಲ್ಲಿ ಗೋಧಿ ಮತ್ತೆ ಭತ್ತವನ್ನು ದಾಖಲೆ ಪ್ರಮಾಣದಲ್ಲಿ ಸಂಗ್ರಹಿಸುವ ಮೂಲಕ ರಾಜ್ಯ ಸರ್ಕಾರ ರೈತರಿಗೆ ಪರಿಹಾರ ನೀಡಿತು. ಕೊರೋನಾ ಮೊದಲ ಅಲೆಯಲ್ಲಿ ಪ್ರತಿಕೂಲ ಪರಿಸ್ಥಿತಿಯ ನಡುವೆಯೂ 1,29,42,000 ಮೆಟ್ರಿಕ್ ಟನ್ ಗೋಧಿಯನ್ನು ಸಂಗ್ರಹಿಸಲಾಗಿದೆ. ಕೊರೋನಾ ಎರಡನೇ ಅಲೆಯಲ್ಲಿ ಸೋಂಕು ತಡೆಗೆ ಕ್ರಮಕೈಗೊಳ್ಳುವಾಗ ಮತ್ತೆ 1,28,15,000 ಎಟ್ರಿಕ್ ಟನ್ ಗೋಧಿ ಹಾಗೂ 45,85,000 ಮೆಟ್ರಿಕ್ ಟನ್ ಭತ್ತವನ್ನು ಸಂಗ್ರಹಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…