ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ 30 ದಿನದೊಳಗೆ ವಿದ್ಯುದೀಕರಣ ಸಂಪರ್ಕ

January 24, 2022
8:45 PM

ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಿದವರಿಗೆ ಠೇವಣಿ ಹಣ ಜಮಾ ಆದ 30 ದಿನಗಳೊಳಗೆ ವಿದ್ಯುದೀಕರಣ ಸಂಪರ್ಕ ಕಲ್ಪಿಸಬೇಕೆಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮಗಳಿಗೆ ಅರ್ಜಿ ಸಲ್ಲಿಸಿದ ರೈತರಿಗೆ ಧನ ಸಹಾಯ ಮಾಡಲಾಗುತ್ತದೆ. ಮಾತ್ರವಲ್ಲದೆ ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ‌ ತಕ್ಷಣ ಸಂಪರ್ಕ ಕಲ್ಪಿಸಲಾಗುವುದು. ಅರ್ಜಿಯ ಜೊತೆ 50 ಸಾವಿರ ರೂಪಾಯಿ ಠೇವಣಿ ಸಂದಾಯ ಮಾಡಬೇಕಾಗುತ್ತದೆ. ರೈತರು 50 ಸಾವಿರ ರೂಪಾಯಿ ಠೇವಣಿ ಸಂದಾಯ ಮಾಡಿದ ನಂತರ 30 ದಿನಗಳೊಳಗೆ ವಿದ್ಯುದೀಕರಣ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಅವರು ಹೇಳಿದರು.

ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಸಣ್ಣ ಮತ್ತು ಅತೀ ಸಣ್ಣ ರೈತರ ಜಮೀನಿನಲ್ಲಿ ಕೊಳವೆಬಾವಿ ಕೊರೆಯಲು 3 ಲಕ್ಷ ರೂಪಾಯಿಯವರೆಗೆ ಸಹಾಯಧನ ನೀಡಲಾಗುವುದು. 50 ಸಾವಿರ ರೂಪಾಯಿವರೆಗೆ ಸಾಲಸೌಲಭ್ಯವೂ ಇರುತ್ತದೆ. 3 ಲಕ್ಷ ರೂಪಾಯಿಯ ಸಹಾಯಧನದಲ್ಲಿ 50 ಸಾವಿರ ರೂಪಾಯಿ ವಿದ್ಯುದ್ದೀಕರಣ ಬಾಬ್ತು ಒಳಗೊಂಡಿರುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?
May 23, 2026
7:12 AM
by: ಡಾ.ಆದಿತ್ಯ ಭಟ್‌, ಚಣಿಲ, BHMS
ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ
May 23, 2026
6:45 AM
by: ಮಿರರ್‌ ಡೆಸ್ಕ್
ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ
May 22, 2026
8:17 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22-05-2026 | ಕರ್ನಾಟಕದಲ್ಲಿ ಇನ್ನೂ ಎರಡು ದಿನ ಮಳೆ ಸಾಧ್ಯತೆ – ಮೇ 30ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ
May 22, 2026
1:14 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror