ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಿದವರಿಗೆ ಠೇವಣಿ ಹಣ ಜಮಾ ಆದ 30 ದಿನಗಳೊಳಗೆ ವಿದ್ಯುದೀಕರಣ ಸಂಪರ್ಕ ಕಲ್ಪಿಸಬೇಕೆಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ.
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮಗಳಿಗೆ ಅರ್ಜಿ ಸಲ್ಲಿಸಿದ ರೈತರಿಗೆ ಧನ ಸಹಾಯ ಮಾಡಲಾಗುತ್ತದೆ. ಮಾತ್ರವಲ್ಲದೆ ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ತಕ್ಷಣ ಸಂಪರ್ಕ ಕಲ್ಪಿಸಲಾಗುವುದು. ಅರ್ಜಿಯ ಜೊತೆ 50 ಸಾವಿರ ರೂಪಾಯಿ ಠೇವಣಿ ಸಂದಾಯ ಮಾಡಬೇಕಾಗುತ್ತದೆ. ರೈತರು 50 ಸಾವಿರ ರೂಪಾಯಿ ಠೇವಣಿ ಸಂದಾಯ ಮಾಡಿದ ನಂತರ 30 ದಿನಗಳೊಳಗೆ ವಿದ್ಯುದೀಕರಣ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಅವರು ಹೇಳಿದರು.
ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಸಣ್ಣ ಮತ್ತು ಅತೀ ಸಣ್ಣ ರೈತರ ಜಮೀನಿನಲ್ಲಿ ಕೊಳವೆಬಾವಿ ಕೊರೆಯಲು 3 ಲಕ್ಷ ರೂಪಾಯಿಯವರೆಗೆ ಸಹಾಯಧನ ನೀಡಲಾಗುವುದು. 50 ಸಾವಿರ ರೂಪಾಯಿವರೆಗೆ ಸಾಲಸೌಲಭ್ಯವೂ ಇರುತ್ತದೆ. 3 ಲಕ್ಷ ರೂಪಾಯಿಯ ಸಹಾಯಧನದಲ್ಲಿ 50 ಸಾವಿರ ರೂಪಾಯಿ ವಿದ್ಯುದ್ದೀಕರಣ ಬಾಬ್ತು ಒಳಗೊಂಡಿರುತ್ತದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…