ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಿದವರಿಗೆ ಠೇವಣಿ ಹಣ ಜಮಾ ಆದ 30 ದಿನಗಳೊಳಗೆ ವಿದ್ಯುದೀಕರಣ ಸಂಪರ್ಕ ಕಲ್ಪಿಸಬೇಕೆಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ.
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮಗಳಿಗೆ ಅರ್ಜಿ ಸಲ್ಲಿಸಿದ ರೈತರಿಗೆ ಧನ ಸಹಾಯ ಮಾಡಲಾಗುತ್ತದೆ. ಮಾತ್ರವಲ್ಲದೆ ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ತಕ್ಷಣ ಸಂಪರ್ಕ ಕಲ್ಪಿಸಲಾಗುವುದು. ಅರ್ಜಿಯ ಜೊತೆ 50 ಸಾವಿರ ರೂಪಾಯಿ ಠೇವಣಿ ಸಂದಾಯ ಮಾಡಬೇಕಾಗುತ್ತದೆ. ರೈತರು 50 ಸಾವಿರ ರೂಪಾಯಿ ಠೇವಣಿ ಸಂದಾಯ ಮಾಡಿದ ನಂತರ 30 ದಿನಗಳೊಳಗೆ ವಿದ್ಯುದೀಕರಣ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಅವರು ಹೇಳಿದರು.
ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಸಣ್ಣ ಮತ್ತು ಅತೀ ಸಣ್ಣ ರೈತರ ಜಮೀನಿನಲ್ಲಿ ಕೊಳವೆಬಾವಿ ಕೊರೆಯಲು 3 ಲಕ್ಷ ರೂಪಾಯಿಯವರೆಗೆ ಸಹಾಯಧನ ನೀಡಲಾಗುವುದು. 50 ಸಾವಿರ ರೂಪಾಯಿವರೆಗೆ ಸಾಲಸೌಲಭ್ಯವೂ ಇರುತ್ತದೆ. 3 ಲಕ್ಷ ರೂಪಾಯಿಯ ಸಹಾಯಧನದಲ್ಲಿ 50 ಸಾವಿರ ರೂಪಾಯಿ ವಿದ್ಯುದ್ದೀಕರಣ ಬಾಬ್ತು ಒಳಗೊಂಡಿರುತ್ತದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…