ಮೋಡ ಕವಿದ ವಾತಾವರಣದಿಂದ ಶುಂಠಿ ಸಂಸ್ಕರಣೆಗೆ ಅಡ್ಡಿ | ಆತಂಕದಲ್ಲಿ ರೈತರು

April 14, 2022
9:32 PM

ಕಳೆದ ಕೆಲ ದಿನಗಳಿಂದ ಮೋಡ ಕವಿದ ವಾತಾವರಣ ಇದೆ. ಆಗಾಗ ಸುರಿಯುತ್ತಿರುವ ಮಳೆಯಿಂದ ಶುಂಠಿ ಸಂಸ್ಕರಣೆಗೆ ಅಡ್ಡಿಯಾಗುತ್ತಿದೆ. ಇದು ರೈತರನ್ನು, ಖರೀದಿದಾರರನ್ನು ಆತಂಕಕ್ಕೆ ತಳ್ಳಿದೆ. ಶಿರಸಿ ತಾಲೂಕಿನ ಪೂರ್ವಭಾಗ ಬನವಾಸಿ ಹೋಬಳಿ ವ್ಯಾಪ್ತಿಯಲ್ಲಿ ಶುಂಠಿ ಬೆಳೆಗಾರರ ಸಂಖ್ಯೆ ಹೆಚ್ಚಿದೆ.

250 ಹೆಕ್ಟೇರ್‌ಗಿಂತ ಹೆಚ್ಚು ಪ್ರದೇಶದಲ್ಲಿ ಸಾವಿರಾರು ಸಂಖ್ಯೆಯ ರೈತರು ಈ ಬೆಳೆ ನಂಬಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಫಸಲು ಕೀಳುವ ಅವಧಿಯಲ್ಲಿ ಅನಿಶ್ಚಿತ ವಾತಾವರಣ ಎದುರಾಗಿದ್ದರಿಂದ ದರದಲ್ಲೂ ಏರುಪೇರು ಉಂಟಾಗುವ ಆತಂಕ ರೈತರನ್ನು ಕಾಡುತ್ತಿದೆ. ಮಾರ್ಚ್ ಬಳಿಕ ರೈತರು ಗದ್ದೆಯಿಂದ ಶುಂಠಿ ಕೀಳುತ್ತಾರೆ. ಕೆಲವರು ಹಸಿ ಶುಂಠಿಯನ್ನೇ ಮಾರಾಟ ಮಾಡಿದರೆ, ಇನ್ನೂ ಹಲವರು ಶುಂಠಿ ಒಣಗಿಸಿ ಮಾರಾಟ ಮಾಡುತ್ತಾರೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಹಸಿ ಶುಂಠಿ ಸರಾಸರಿ ಪ್ರತಿ ಕ್ವಿಂಟಲ್‍ಗೆ ₹1,500 ರಿಂದ ₹2,200 ದರಕ್ಕೆ ಮಾರಾಟ ಕಾಣುತ್ತಿದೆ. ಒಣ ಶುಂಠಿ ಕೆಜಿಗೆ ₹120ರ ದರದ ಆಸುಪಾಸಿನಲ್ಲಿದೆ.

Advertisement

ಮೋಡ ಕವಿದ ವಾತಾವರಣ, ಅಕಾಲಿಕ ಮಳೆಯಿಂದ ಶುಂಠಿ ಸಂಸ್ಕರಣೆಗೆ ಅಡ್ಡಿಯಾಗುತ್ತಿದೆ. ಒಣಗಲು ಇಟ್ಟ ಶುಂಠಿ ಮಳೆ ನೀರಿಗೆ ಸಿಲುಕಿ ಹಾಳಾಗುತ್ತಿದೆ. ಹೀಗಾಗಿ ಖರೀದಿದಾರರು ಹಸಿ ಶುಂಠಿ ಖರೀದಿಗೆ ಹಿಂದೇಟು ಹಾಕುತ್ತಿದ್ದಾರೆ. ನೆರೆಯ ಸೊರಬ, ಆನವಟ್ಟಿಯಿಂದ ಬರುತ್ತಿದ್ದ ವ್ಯಾಪಾರಿಗಳ ಸಂಖ್ಯೆಯಲ್ಲೀ ಇಳಿಕೆಯಾಗಿದೆ. ರೈತರು ಹಸಿ ಶುಂಠಿ ಮಾರಲಾಗದೆ, ಶುಂಠಿ ಒಣಗಿಸಲಾಗದೆ ಸಂದಿಗ್ಧತೆಗೆ ಸಿಲುಕಿದ್ದಾರೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ
June 24, 2026
10:16 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ
June 23, 2026
8:11 PM
by: ದ ರೂರಲ್ ಮಿರರ್.ಕಾಂ
ಅಕ್ರಮವಾಗಿ ಅಡಿಕೆ ಆಮದು ಪ್ರಕರಣಕ್ಕೆ ಮತ್ತೊಂದು ಹಿನ್ನಡೆ – ₹2.22 ಕೋಟಿ ಅಡಿಕೆ ಜಪ್ತಿ ಪ್ರಕರಣದಲ್ಲಿ ಕಸ್ಟಮ್ಸ್ ಕ್ರಮಕ್ಕೆ ಹೈಕೋರ್ಟ್ ಮನ್ನಣೆ
June 22, 2026
7:56 PM
by: ದ ರೂರಲ್ ಮಿರರ್.ಕಾಂ
ತಕ್ಷಣ ಪೂರ್ಣಾವಧಿ ಕೃಷಿ ಸಚಿವರನ್ನು ನೇಮಿಸಿ – ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆಗ್ರಹ
June 22, 2026
2:27 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror