ಮೋಡ ಕವಿದ ವಾತಾವರಣದಿಂದ ಶುಂಠಿ ಸಂಸ್ಕರಣೆಗೆ ಅಡ್ಡಿ | ಆತಂಕದಲ್ಲಿ ರೈತರು

April 14, 2022
9:32 PM

ಕಳೆದ ಕೆಲ ದಿನಗಳಿಂದ ಮೋಡ ಕವಿದ ವಾತಾವರಣ ಇದೆ. ಆಗಾಗ ಸುರಿಯುತ್ತಿರುವ ಮಳೆಯಿಂದ ಶುಂಠಿ ಸಂಸ್ಕರಣೆಗೆ ಅಡ್ಡಿಯಾಗುತ್ತಿದೆ. ಇದು ರೈತರನ್ನು, ಖರೀದಿದಾರರನ್ನು ಆತಂಕಕ್ಕೆ ತಳ್ಳಿದೆ. ಶಿರಸಿ ತಾಲೂಕಿನ ಪೂರ್ವಭಾಗ ಬನವಾಸಿ ಹೋಬಳಿ ವ್ಯಾಪ್ತಿಯಲ್ಲಿ ಶುಂಠಿ ಬೆಳೆಗಾರರ ಸಂಖ್ಯೆ ಹೆಚ್ಚಿದೆ.

Advertisement
Advertisement
Advertisement

250 ಹೆಕ್ಟೇರ್‌ಗಿಂತ ಹೆಚ್ಚು ಪ್ರದೇಶದಲ್ಲಿ ಸಾವಿರಾರು ಸಂಖ್ಯೆಯ ರೈತರು ಈ ಬೆಳೆ ನಂಬಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಫಸಲು ಕೀಳುವ ಅವಧಿಯಲ್ಲಿ ಅನಿಶ್ಚಿತ ವಾತಾವರಣ ಎದುರಾಗಿದ್ದರಿಂದ ದರದಲ್ಲೂ ಏರುಪೇರು ಉಂಟಾಗುವ ಆತಂಕ ರೈತರನ್ನು ಕಾಡುತ್ತಿದೆ. ಮಾರ್ಚ್ ಬಳಿಕ ರೈತರು ಗದ್ದೆಯಿಂದ ಶುಂಠಿ ಕೀಳುತ್ತಾರೆ. ಕೆಲವರು ಹಸಿ ಶುಂಠಿಯನ್ನೇ ಮಾರಾಟ ಮಾಡಿದರೆ, ಇನ್ನೂ ಹಲವರು ಶುಂಠಿ ಒಣಗಿಸಿ ಮಾರಾಟ ಮಾಡುತ್ತಾರೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಹಸಿ ಶುಂಠಿ ಸರಾಸರಿ ಪ್ರತಿ ಕ್ವಿಂಟಲ್‍ಗೆ ₹1,500 ರಿಂದ ₹2,200 ದರಕ್ಕೆ ಮಾರಾಟ ಕಾಣುತ್ತಿದೆ. ಒಣ ಶುಂಠಿ ಕೆಜಿಗೆ ₹120ರ ದರದ ಆಸುಪಾಸಿನಲ್ಲಿದೆ.

Advertisement

ಮೋಡ ಕವಿದ ವಾತಾವರಣ, ಅಕಾಲಿಕ ಮಳೆಯಿಂದ ಶುಂಠಿ ಸಂಸ್ಕರಣೆಗೆ ಅಡ್ಡಿಯಾಗುತ್ತಿದೆ. ಒಣಗಲು ಇಟ್ಟ ಶುಂಠಿ ಮಳೆ ನೀರಿಗೆ ಸಿಲುಕಿ ಹಾಳಾಗುತ್ತಿದೆ. ಹೀಗಾಗಿ ಖರೀದಿದಾರರು ಹಸಿ ಶುಂಠಿ ಖರೀದಿಗೆ ಹಿಂದೇಟು ಹಾಕುತ್ತಿದ್ದಾರೆ. ನೆರೆಯ ಸೊರಬ, ಆನವಟ್ಟಿಯಿಂದ ಬರುತ್ತಿದ್ದ ವ್ಯಾಪಾರಿಗಳ ಸಂಖ್ಯೆಯಲ್ಲೀ ಇಳಿಕೆಯಾಗಿದೆ. ರೈತರು ಹಸಿ ಶುಂಠಿ ಮಾರಲಾಗದೆ, ಶುಂಠಿ ಒಣಗಿಸಲಾಗದೆ ಸಂದಿಗ್ಧತೆಗೆ ಸಿಲುಕಿದ್ದಾರೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅರಣ್ಯ ಸುತ್ತಮುತ್ತ ಕೃಷಿ ಮಾಡುವ ರೈತರಿಗೆ ಕೃಷಿ ಭೂಮಿ ಮಂಜೂರಾತಿ : ಕೆಲ ಜಿಲ್ಲೆಗಳ ರೈತರಿಗೆ ಹಕ್ಕುಪತ್ರ ಬಿಡುಗಡೆ ಮಾಡಲಿರುವ ಕಂದಾಯ ಇಲಾಖೆ
March 26, 2024
11:59 PM
by: The Rural Mirror ಸುದ್ದಿಜಾಲ
ತಲಕಾವೇರಿಯಲ್ಲಿ ಮಳೆಗಾಗಿ ಪ್ರಾರ್ಥನೆ | ಈ ಬಾರಿಯಾದರು ವರುಣದೇವ ಕೃಪೆ ತೋರಲಿ..
March 26, 2024
10:33 AM
by: The Rural Mirror ಸುದ್ದಿಜಾಲ
ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಳಗೊಂಡ ರಬ್ಬರ್‌ ಬಳಕೆ | ಬೆಳೆಗಾರರಿಗೆ ಧಾರಣೆ ಏರಿಕೆಯ ನಿರೀಕ್ಷೆ |
March 25, 2024
11:10 PM
by: ದ ರೂರಲ್ ಮಿರರ್.ಕಾಂ
ಅಂತರ್ಜಲ ಹೆಚ್ಚಳಕ್ಕೆ ಜಿಲ್ಲಾಧಿಕಾರಿಯ ದಿಟ್ಟ ಕ್ರಮ | ಮೂರು ವರ್ಷದಲ್ಲಿ ಆರು ಮೀಟರ್ ಅಂತರ್ಜಲ ಹೆಚ್ಚಳ
March 25, 2024
10:35 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror