ಮೋಡ ಕವಿದ ವಾತಾವರಣದಿಂದ ಶುಂಠಿ ಸಂಸ್ಕರಣೆಗೆ ಅಡ್ಡಿ | ಆತಂಕದಲ್ಲಿ ರೈತರು

April 14, 2022
9:32 PM

ಕಳೆದ ಕೆಲ ದಿನಗಳಿಂದ ಮೋಡ ಕವಿದ ವಾತಾವರಣ ಇದೆ. ಆಗಾಗ ಸುರಿಯುತ್ತಿರುವ ಮಳೆಯಿಂದ ಶುಂಠಿ ಸಂಸ್ಕರಣೆಗೆ ಅಡ್ಡಿಯಾಗುತ್ತಿದೆ. ಇದು ರೈತರನ್ನು, ಖರೀದಿದಾರರನ್ನು ಆತಂಕಕ್ಕೆ ತಳ್ಳಿದೆ. ಶಿರಸಿ ತಾಲೂಕಿನ ಪೂರ್ವಭಾಗ ಬನವಾಸಿ ಹೋಬಳಿ ವ್ಯಾಪ್ತಿಯಲ್ಲಿ ಶುಂಠಿ ಬೆಳೆಗಾರರ ಸಂಖ್ಯೆ ಹೆಚ್ಚಿದೆ.

250 ಹೆಕ್ಟೇರ್‌ಗಿಂತ ಹೆಚ್ಚು ಪ್ರದೇಶದಲ್ಲಿ ಸಾವಿರಾರು ಸಂಖ್ಯೆಯ ರೈತರು ಈ ಬೆಳೆ ನಂಬಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಫಸಲು ಕೀಳುವ ಅವಧಿಯಲ್ಲಿ ಅನಿಶ್ಚಿತ ವಾತಾವರಣ ಎದುರಾಗಿದ್ದರಿಂದ ದರದಲ್ಲೂ ಏರುಪೇರು ಉಂಟಾಗುವ ಆತಂಕ ರೈತರನ್ನು ಕಾಡುತ್ತಿದೆ. ಮಾರ್ಚ್ ಬಳಿಕ ರೈತರು ಗದ್ದೆಯಿಂದ ಶುಂಠಿ ಕೀಳುತ್ತಾರೆ. ಕೆಲವರು ಹಸಿ ಶುಂಠಿಯನ್ನೇ ಮಾರಾಟ ಮಾಡಿದರೆ, ಇನ್ನೂ ಹಲವರು ಶುಂಠಿ ಒಣಗಿಸಿ ಮಾರಾಟ ಮಾಡುತ್ತಾರೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಹಸಿ ಶುಂಠಿ ಸರಾಸರಿ ಪ್ರತಿ ಕ್ವಿಂಟಲ್‍ಗೆ ₹1,500 ರಿಂದ ₹2,200 ದರಕ್ಕೆ ಮಾರಾಟ ಕಾಣುತ್ತಿದೆ. ಒಣ ಶುಂಠಿ ಕೆಜಿಗೆ ₹120ರ ದರದ ಆಸುಪಾಸಿನಲ್ಲಿದೆ.

ಮೋಡ ಕವಿದ ವಾತಾವರಣ, ಅಕಾಲಿಕ ಮಳೆಯಿಂದ ಶುಂಠಿ ಸಂಸ್ಕರಣೆಗೆ ಅಡ್ಡಿಯಾಗುತ್ತಿದೆ. ಒಣಗಲು ಇಟ್ಟ ಶುಂಠಿ ಮಳೆ ನೀರಿಗೆ ಸಿಲುಕಿ ಹಾಳಾಗುತ್ತಿದೆ. ಹೀಗಾಗಿ ಖರೀದಿದಾರರು ಹಸಿ ಶುಂಠಿ ಖರೀದಿಗೆ ಹಿಂದೇಟು ಹಾಕುತ್ತಿದ್ದಾರೆ. ನೆರೆಯ ಸೊರಬ, ಆನವಟ್ಟಿಯಿಂದ ಬರುತ್ತಿದ್ದ ವ್ಯಾಪಾರಿಗಳ ಸಂಖ್ಯೆಯಲ್ಲೀ ಇಳಿಕೆಯಾಗಿದೆ. ರೈತರು ಹಸಿ ಶುಂಠಿ ಮಾರಲಾಗದೆ, ಶುಂಠಿ ಒಣಗಿಸಲಾಗದೆ ಸಂದಿಗ್ಧತೆಗೆ ಸಿಲುಕಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ
August 4, 2026
11:23 PM
by: ದ ರೂರಲ್ ಮಿರರ್.ಕಾಂ
ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ
ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ
August 3, 2026
9:25 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು
August 2, 2026
8:39 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror