ಕೃಷಿ

ಮೋಡ ಕವಿದ ವಾತಾವರಣದಿಂದ ಶುಂಠಿ ಸಂಸ್ಕರಣೆಗೆ ಅಡ್ಡಿ | ಆತಂಕದಲ್ಲಿ ರೈತರು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಳೆದ ಕೆಲ ದಿನಗಳಿಂದ ಮೋಡ ಕವಿದ ವಾತಾವರಣ ಇದೆ. ಆಗಾಗ ಸುರಿಯುತ್ತಿರುವ ಮಳೆಯಿಂದ ಶುಂಠಿ ಸಂಸ್ಕರಣೆಗೆ ಅಡ್ಡಿಯಾಗುತ್ತಿದೆ. ಇದು ರೈತರನ್ನು, ಖರೀದಿದಾರರನ್ನು ಆತಂಕಕ್ಕೆ ತಳ್ಳಿದೆ. ಶಿರಸಿ ತಾಲೂಕಿನ ಪೂರ್ವಭಾಗ ಬನವಾಸಿ ಹೋಬಳಿ ವ್ಯಾಪ್ತಿಯಲ್ಲಿ ಶುಂಠಿ ಬೆಳೆಗಾರರ ಸಂಖ್ಯೆ ಹೆಚ್ಚಿದೆ.

Advertisement
Advertisement

250 ಹೆಕ್ಟೇರ್‌ಗಿಂತ ಹೆಚ್ಚು ಪ್ರದೇಶದಲ್ಲಿ ಸಾವಿರಾರು ಸಂಖ್ಯೆಯ ರೈತರು ಈ ಬೆಳೆ ನಂಬಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಫಸಲು ಕೀಳುವ ಅವಧಿಯಲ್ಲಿ ಅನಿಶ್ಚಿತ ವಾತಾವರಣ ಎದುರಾಗಿದ್ದರಿಂದ ದರದಲ್ಲೂ ಏರುಪೇರು ಉಂಟಾಗುವ ಆತಂಕ ರೈತರನ್ನು ಕಾಡುತ್ತಿದೆ. ಮಾರ್ಚ್ ಬಳಿಕ ರೈತರು ಗದ್ದೆಯಿಂದ ಶುಂಠಿ ಕೀಳುತ್ತಾರೆ. ಕೆಲವರು ಹಸಿ ಶುಂಠಿಯನ್ನೇ ಮಾರಾಟ ಮಾಡಿದರೆ, ಇನ್ನೂ ಹಲವರು ಶುಂಠಿ ಒಣಗಿಸಿ ಮಾರಾಟ ಮಾಡುತ್ತಾರೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಹಸಿ ಶುಂಠಿ ಸರಾಸರಿ ಪ್ರತಿ ಕ್ವಿಂಟಲ್‍ಗೆ ₹1,500 ರಿಂದ ₹2,200 ದರಕ್ಕೆ ಮಾರಾಟ ಕಾಣುತ್ತಿದೆ. ಒಣ ಶುಂಠಿ ಕೆಜಿಗೆ ₹120ರ ದರದ ಆಸುಪಾಸಿನಲ್ಲಿದೆ.

ಮೋಡ ಕವಿದ ವಾತಾವರಣ, ಅಕಾಲಿಕ ಮಳೆಯಿಂದ ಶುಂಠಿ ಸಂಸ್ಕರಣೆಗೆ ಅಡ್ಡಿಯಾಗುತ್ತಿದೆ. ಒಣಗಲು ಇಟ್ಟ ಶುಂಠಿ ಮಳೆ ನೀರಿಗೆ ಸಿಲುಕಿ ಹಾಳಾಗುತ್ತಿದೆ. ಹೀಗಾಗಿ ಖರೀದಿದಾರರು ಹಸಿ ಶುಂಠಿ ಖರೀದಿಗೆ ಹಿಂದೇಟು ಹಾಕುತ್ತಿದ್ದಾರೆ. ನೆರೆಯ ಸೊರಬ, ಆನವಟ್ಟಿಯಿಂದ ಬರುತ್ತಿದ್ದ ವ್ಯಾಪಾರಿಗಳ ಸಂಖ್ಯೆಯಲ್ಲೀ ಇಳಿಕೆಯಾಗಿದೆ. ರೈತರು ಹಸಿ ಶುಂಠಿ ಮಾರಲಾಗದೆ, ಶುಂಠಿ ಒಣಗಿಸಲಾಗದೆ ಸಂದಿಗ್ಧತೆಗೆ ಸಿಲುಕಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಪ್ರೋಟಾನ್ ಥೆರಪಿ ಮೂಲಕ ಕ್ಯಾನ್ಸರ್ ಗೆ ಚಿಕಿತ್ಸೆ | ಕಿದ್ವಾಯಿ ಆಸ್ಪತ್ರೆಯಲ್ಲಿ ಸೌಲಭ್ಯ ಜಾರಿಗೆ ಪ್ರಸ್ತಾವನೆ

ಅತ್ಯಾಧುನಿಕವಾದ ಪ್ರೋಟಾನ್ ರೇಡಿಯೋ ಥೆರಪಿ ಮೂಲಕ ಕ್ಯಾನ್ಸರ್ ಶುಶ್ರೂಷೆಗೆ ಅಗತ್ಯ ಆರ್ಥಿಕ ನೆರವು…

2 hours ago

ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರ  | ರಾಜ್ಯದ ವಿವಿದೆಡೆ ಮಳೆ

ರಾಜ್ಯದಲ್ಲಿ ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಕ್ರಿಯವಾಗಿದ್ದು, ಕರಾವಳಿಯಲ್ಲಿ…

3 hours ago

ಹಾವೇರಿ ಜಿಲ್ಲೆಯಲ್ಲಿ 441 ಸಾಕ್ಷರತಾ ಕಲಿಕಾ ಕೇಂದ್ರ ಸ್ಥಾಪನೆ

ಹಾವೇರಿ ಜಿಲ್ಲೆಯಲ್ಲಿರುವ ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿ ಮಾಡಲು ನಿರಂತರವಾಗಿ ಪ್ರಯತ್ನಿಸಲಾಗುತ್ತಿದ್ದು, ಸಾಕ್ಷರತಾ ಕಾರ್ಯಕ್ರಮದಡಿ ಜಿಲ್ಲೆಯ…

3 hours ago

ಹವಾಮಾನ ವರದಿ | 09-06-2025 | ಜೂನ್ 10 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ | ಮುಂದಿನ 10 ದಿನಗಳವರೆಗೂ ಉತ್ತಮ ಮಳೆ ಸಾಧ್ಯತೆ|

ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…

12 hours ago

ಅಡಿಕೆಯ ಮೌಲ್ಯವರ್ಧಿತ ಉತ್ಪನ್ನಗಳು

ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…

14 hours ago

ವಿಶ್ವದ ಅತೀ ಎತ್ತರದ ಚೆನಾಬ್ ರೈಲ್ವೆ ಸೇತುವೆ ನಿರ್ಮಾಣ | ಬೆಂಗಳೂರಿನ ಜಿ.ಮಾಧವಿ ಲತಾ ಪ್ರಮುಖ ಪಾತ್ರ | ಭೂತಾಂತ್ರಿಕ ಸಲಹೆಗಾರರಾಗಿ 17 ವರ್ಷಗಳ ಕಾಲ ಕೊಡುಗೆ

1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…

16 hours ago