ಕಳೆದ ಕೆಲ ದಿನಗಳಿಂದ ಮೋಡ ಕವಿದ ವಾತಾವರಣ ಇದೆ. ಆಗಾಗ ಸುರಿಯುತ್ತಿರುವ ಮಳೆಯಿಂದ ಶುಂಠಿ ಸಂಸ್ಕರಣೆಗೆ ಅಡ್ಡಿಯಾಗುತ್ತಿದೆ. ಇದು ರೈತರನ್ನು, ಖರೀದಿದಾರರನ್ನು ಆತಂಕಕ್ಕೆ ತಳ್ಳಿದೆ. ಶಿರಸಿ ತಾಲೂಕಿನ ಪೂರ್ವಭಾಗ ಬನವಾಸಿ ಹೋಬಳಿ ವ್ಯಾಪ್ತಿಯಲ್ಲಿ ಶುಂಠಿ ಬೆಳೆಗಾರರ ಸಂಖ್ಯೆ ಹೆಚ್ಚಿದೆ.
250 ಹೆಕ್ಟೇರ್ಗಿಂತ ಹೆಚ್ಚು ಪ್ರದೇಶದಲ್ಲಿ ಸಾವಿರಾರು ಸಂಖ್ಯೆಯ ರೈತರು ಈ ಬೆಳೆ ನಂಬಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಫಸಲು ಕೀಳುವ ಅವಧಿಯಲ್ಲಿ ಅನಿಶ್ಚಿತ ವಾತಾವರಣ ಎದುರಾಗಿದ್ದರಿಂದ ದರದಲ್ಲೂ ಏರುಪೇರು ಉಂಟಾಗುವ ಆತಂಕ ರೈತರನ್ನು ಕಾಡುತ್ತಿದೆ. ಮಾರ್ಚ್ ಬಳಿಕ ರೈತರು ಗದ್ದೆಯಿಂದ ಶುಂಠಿ ಕೀಳುತ್ತಾರೆ. ಕೆಲವರು ಹಸಿ ಶುಂಠಿಯನ್ನೇ ಮಾರಾಟ ಮಾಡಿದರೆ, ಇನ್ನೂ ಹಲವರು ಶುಂಠಿ ಒಣಗಿಸಿ ಮಾರಾಟ ಮಾಡುತ್ತಾರೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಹಸಿ ಶುಂಠಿ ಸರಾಸರಿ ಪ್ರತಿ ಕ್ವಿಂಟಲ್ಗೆ ₹1,500 ರಿಂದ ₹2,200 ದರಕ್ಕೆ ಮಾರಾಟ ಕಾಣುತ್ತಿದೆ. ಒಣ ಶುಂಠಿ ಕೆಜಿಗೆ ₹120ರ ದರದ ಆಸುಪಾಸಿನಲ್ಲಿದೆ.
ಮೋಡ ಕವಿದ ವಾತಾವರಣ, ಅಕಾಲಿಕ ಮಳೆಯಿಂದ ಶುಂಠಿ ಸಂಸ್ಕರಣೆಗೆ ಅಡ್ಡಿಯಾಗುತ್ತಿದೆ. ಒಣಗಲು ಇಟ್ಟ ಶುಂಠಿ ಮಳೆ ನೀರಿಗೆ ಸಿಲುಕಿ ಹಾಳಾಗುತ್ತಿದೆ. ಹೀಗಾಗಿ ಖರೀದಿದಾರರು ಹಸಿ ಶುಂಠಿ ಖರೀದಿಗೆ ಹಿಂದೇಟು ಹಾಕುತ್ತಿದ್ದಾರೆ. ನೆರೆಯ ಸೊರಬ, ಆನವಟ್ಟಿಯಿಂದ ಬರುತ್ತಿದ್ದ ವ್ಯಾಪಾರಿಗಳ ಸಂಖ್ಯೆಯಲ್ಲೀ ಇಳಿಕೆಯಾಗಿದೆ. ರೈತರು ಹಸಿ ಶುಂಠಿ ಮಾರಲಾಗದೆ, ಶುಂಠಿ ಒಣಗಿಸಲಾಗದೆ ಸಂದಿಗ್ಧತೆಗೆ ಸಿಲುಕಿದ್ದಾರೆ.
ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…
ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…
ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…
ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…
ತಮಿಳುನಾಡು ಕರಾವಳಿ ಸಮೀಪ ಉಂಟಾಗಿರುವ ವಾಯುಭಾರ ಕುಸಿತವು ಆಂದ್ರಾ ಕರಾವಳಿ ದಾಟಿ ಉತ್ತರಕ್ಕೆ…
ಹಲಸಿನ ಹಣ್ಣಿನ ಹಲ್ವಕ್ಕೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣು 1 ಕಪ್. ಜಾರ್…