Advertisement
ಕೃಷಿ

ಮೋಡ ಕವಿದ ವಾತಾವರಣದಿಂದ ಶುಂಠಿ ಸಂಸ್ಕರಣೆಗೆ ಅಡ್ಡಿ | ಆತಂಕದಲ್ಲಿ ರೈತರು

Share

ಕಳೆದ ಕೆಲ ದಿನಗಳಿಂದ ಮೋಡ ಕವಿದ ವಾತಾವರಣ ಇದೆ. ಆಗಾಗ ಸುರಿಯುತ್ತಿರುವ ಮಳೆಯಿಂದ ಶುಂಠಿ ಸಂಸ್ಕರಣೆಗೆ ಅಡ್ಡಿಯಾಗುತ್ತಿದೆ. ಇದು ರೈತರನ್ನು, ಖರೀದಿದಾರರನ್ನು ಆತಂಕಕ್ಕೆ ತಳ್ಳಿದೆ. ಶಿರಸಿ ತಾಲೂಕಿನ ಪೂರ್ವಭಾಗ ಬನವಾಸಿ ಹೋಬಳಿ ವ್ಯಾಪ್ತಿಯಲ್ಲಿ ಶುಂಠಿ ಬೆಳೆಗಾರರ ಸಂಖ್ಯೆ ಹೆಚ್ಚಿದೆ.

Advertisement
Advertisement

250 ಹೆಕ್ಟೇರ್‌ಗಿಂತ ಹೆಚ್ಚು ಪ್ರದೇಶದಲ್ಲಿ ಸಾವಿರಾರು ಸಂಖ್ಯೆಯ ರೈತರು ಈ ಬೆಳೆ ನಂಬಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಫಸಲು ಕೀಳುವ ಅವಧಿಯಲ್ಲಿ ಅನಿಶ್ಚಿತ ವಾತಾವರಣ ಎದುರಾಗಿದ್ದರಿಂದ ದರದಲ್ಲೂ ಏರುಪೇರು ಉಂಟಾಗುವ ಆತಂಕ ರೈತರನ್ನು ಕಾಡುತ್ತಿದೆ. ಮಾರ್ಚ್ ಬಳಿಕ ರೈತರು ಗದ್ದೆಯಿಂದ ಶುಂಠಿ ಕೀಳುತ್ತಾರೆ. ಕೆಲವರು ಹಸಿ ಶುಂಠಿಯನ್ನೇ ಮಾರಾಟ ಮಾಡಿದರೆ, ಇನ್ನೂ ಹಲವರು ಶುಂಠಿ ಒಣಗಿಸಿ ಮಾರಾಟ ಮಾಡುತ್ತಾರೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಹಸಿ ಶುಂಠಿ ಸರಾಸರಿ ಪ್ರತಿ ಕ್ವಿಂಟಲ್‍ಗೆ ₹1,500 ರಿಂದ ₹2,200 ದರಕ್ಕೆ ಮಾರಾಟ ಕಾಣುತ್ತಿದೆ. ಒಣ ಶುಂಠಿ ಕೆಜಿಗೆ ₹120ರ ದರದ ಆಸುಪಾಸಿನಲ್ಲಿದೆ.

ಮೋಡ ಕವಿದ ವಾತಾವರಣ, ಅಕಾಲಿಕ ಮಳೆಯಿಂದ ಶುಂಠಿ ಸಂಸ್ಕರಣೆಗೆ ಅಡ್ಡಿಯಾಗುತ್ತಿದೆ. ಒಣಗಲು ಇಟ್ಟ ಶುಂಠಿ ಮಳೆ ನೀರಿಗೆ ಸಿಲುಕಿ ಹಾಳಾಗುತ್ತಿದೆ. ಹೀಗಾಗಿ ಖರೀದಿದಾರರು ಹಸಿ ಶುಂಠಿ ಖರೀದಿಗೆ ಹಿಂದೇಟು ಹಾಕುತ್ತಿದ್ದಾರೆ. ನೆರೆಯ ಸೊರಬ, ಆನವಟ್ಟಿಯಿಂದ ಬರುತ್ತಿದ್ದ ವ್ಯಾಪಾರಿಗಳ ಸಂಖ್ಯೆಯಲ್ಲೀ ಇಳಿಕೆಯಾಗಿದೆ. ರೈತರು ಹಸಿ ಶುಂಠಿ ಮಾರಲಾಗದೆ, ಶುಂಠಿ ಒಣಗಿಸಲಾಗದೆ ಸಂದಿಗ್ಧತೆಗೆ ಸಿಲುಕಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

7 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

7 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago