Advertisement
ಕೃಷಿ

ಮೋಡ ಕವಿದ ವಾತಾವರಣದಿಂದ ಶುಂಠಿ ಸಂಸ್ಕರಣೆಗೆ ಅಡ್ಡಿ | ಆತಂಕದಲ್ಲಿ ರೈತರು

Share

ಕಳೆದ ಕೆಲ ದಿನಗಳಿಂದ ಮೋಡ ಕವಿದ ವಾತಾವರಣ ಇದೆ. ಆಗಾಗ ಸುರಿಯುತ್ತಿರುವ ಮಳೆಯಿಂದ ಶುಂಠಿ ಸಂಸ್ಕರಣೆಗೆ ಅಡ್ಡಿಯಾಗುತ್ತಿದೆ. ಇದು ರೈತರನ್ನು, ಖರೀದಿದಾರರನ್ನು ಆತಂಕಕ್ಕೆ ತಳ್ಳಿದೆ. ಶಿರಸಿ ತಾಲೂಕಿನ ಪೂರ್ವಭಾಗ ಬನವಾಸಿ ಹೋಬಳಿ ವ್ಯಾಪ್ತಿಯಲ್ಲಿ ಶುಂಠಿ ಬೆಳೆಗಾರರ ಸಂಖ್ಯೆ ಹೆಚ್ಚಿದೆ.

250 ಹೆಕ್ಟೇರ್‌ಗಿಂತ ಹೆಚ್ಚು ಪ್ರದೇಶದಲ್ಲಿ ಸಾವಿರಾರು ಸಂಖ್ಯೆಯ ರೈತರು ಈ ಬೆಳೆ ನಂಬಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಫಸಲು ಕೀಳುವ ಅವಧಿಯಲ್ಲಿ ಅನಿಶ್ಚಿತ ವಾತಾವರಣ ಎದುರಾಗಿದ್ದರಿಂದ ದರದಲ್ಲೂ ಏರುಪೇರು ಉಂಟಾಗುವ ಆತಂಕ ರೈತರನ್ನು ಕಾಡುತ್ತಿದೆ. ಮಾರ್ಚ್ ಬಳಿಕ ರೈತರು ಗದ್ದೆಯಿಂದ ಶುಂಠಿ ಕೀಳುತ್ತಾರೆ. ಕೆಲವರು ಹಸಿ ಶುಂಠಿಯನ್ನೇ ಮಾರಾಟ ಮಾಡಿದರೆ, ಇನ್ನೂ ಹಲವರು ಶುಂಠಿ ಒಣಗಿಸಿ ಮಾರಾಟ ಮಾಡುತ್ತಾರೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಹಸಿ ಶುಂಠಿ ಸರಾಸರಿ ಪ್ರತಿ ಕ್ವಿಂಟಲ್‍ಗೆ ₹1,500 ರಿಂದ ₹2,200 ದರಕ್ಕೆ ಮಾರಾಟ ಕಾಣುತ್ತಿದೆ. ಒಣ ಶುಂಠಿ ಕೆಜಿಗೆ ₹120ರ ದರದ ಆಸುಪಾಸಿನಲ್ಲಿದೆ.

ಮೋಡ ಕವಿದ ವಾತಾವರಣ, ಅಕಾಲಿಕ ಮಳೆಯಿಂದ ಶುಂಠಿ ಸಂಸ್ಕರಣೆಗೆ ಅಡ್ಡಿಯಾಗುತ್ತಿದೆ. ಒಣಗಲು ಇಟ್ಟ ಶುಂಠಿ ಮಳೆ ನೀರಿಗೆ ಸಿಲುಕಿ ಹಾಳಾಗುತ್ತಿದೆ. ಹೀಗಾಗಿ ಖರೀದಿದಾರರು ಹಸಿ ಶುಂಠಿ ಖರೀದಿಗೆ ಹಿಂದೇಟು ಹಾಕುತ್ತಿದ್ದಾರೆ. ನೆರೆಯ ಸೊರಬ, ಆನವಟ್ಟಿಯಿಂದ ಬರುತ್ತಿದ್ದ ವ್ಯಾಪಾರಿಗಳ ಸಂಖ್ಯೆಯಲ್ಲೀ ಇಳಿಕೆಯಾಗಿದೆ. ರೈತರು ಹಸಿ ಶುಂಠಿ ಮಾರಲಾಗದೆ, ಶುಂಠಿ ಒಣಗಿಸಲಾಗದೆ ಸಂದಿಗ್ಧತೆಗೆ ಸಿಲುಕಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

1 day ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

1 day ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

2 days ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

2 days ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

3 days ago

ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ

ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…

3 days ago