Advertisement
ಕೃಷಿ

ಮೋಡ ಕವಿದ ವಾತಾವರಣದಿಂದ ಶುಂಠಿ ಸಂಸ್ಕರಣೆಗೆ ಅಡ್ಡಿ | ಆತಂಕದಲ್ಲಿ ರೈತರು

Share

ಕಳೆದ ಕೆಲ ದಿನಗಳಿಂದ ಮೋಡ ಕವಿದ ವಾತಾವರಣ ಇದೆ. ಆಗಾಗ ಸುರಿಯುತ್ತಿರುವ ಮಳೆಯಿಂದ ಶುಂಠಿ ಸಂಸ್ಕರಣೆಗೆ ಅಡ್ಡಿಯಾಗುತ್ತಿದೆ. ಇದು ರೈತರನ್ನು, ಖರೀದಿದಾರರನ್ನು ಆತಂಕಕ್ಕೆ ತಳ್ಳಿದೆ. ಶಿರಸಿ ತಾಲೂಕಿನ ಪೂರ್ವಭಾಗ ಬನವಾಸಿ ಹೋಬಳಿ ವ್ಯಾಪ್ತಿಯಲ್ಲಿ ಶುಂಠಿ ಬೆಳೆಗಾರರ ಸಂಖ್ಯೆ ಹೆಚ್ಚಿದೆ.

250 ಹೆಕ್ಟೇರ್‌ಗಿಂತ ಹೆಚ್ಚು ಪ್ರದೇಶದಲ್ಲಿ ಸಾವಿರಾರು ಸಂಖ್ಯೆಯ ರೈತರು ಈ ಬೆಳೆ ನಂಬಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಫಸಲು ಕೀಳುವ ಅವಧಿಯಲ್ಲಿ ಅನಿಶ್ಚಿತ ವಾತಾವರಣ ಎದುರಾಗಿದ್ದರಿಂದ ದರದಲ್ಲೂ ಏರುಪೇರು ಉಂಟಾಗುವ ಆತಂಕ ರೈತರನ್ನು ಕಾಡುತ್ತಿದೆ. ಮಾರ್ಚ್ ಬಳಿಕ ರೈತರು ಗದ್ದೆಯಿಂದ ಶುಂಠಿ ಕೀಳುತ್ತಾರೆ. ಕೆಲವರು ಹಸಿ ಶುಂಠಿಯನ್ನೇ ಮಾರಾಟ ಮಾಡಿದರೆ, ಇನ್ನೂ ಹಲವರು ಶುಂಠಿ ಒಣಗಿಸಿ ಮಾರಾಟ ಮಾಡುತ್ತಾರೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಹಸಿ ಶುಂಠಿ ಸರಾಸರಿ ಪ್ರತಿ ಕ್ವಿಂಟಲ್‍ಗೆ ₹1,500 ರಿಂದ ₹2,200 ದರಕ್ಕೆ ಮಾರಾಟ ಕಾಣುತ್ತಿದೆ. ಒಣ ಶುಂಠಿ ಕೆಜಿಗೆ ₹120ರ ದರದ ಆಸುಪಾಸಿನಲ್ಲಿದೆ.

Advertisement

ಮೋಡ ಕವಿದ ವಾತಾವರಣ, ಅಕಾಲಿಕ ಮಳೆಯಿಂದ ಶುಂಠಿ ಸಂಸ್ಕರಣೆಗೆ ಅಡ್ಡಿಯಾಗುತ್ತಿದೆ. ಒಣಗಲು ಇಟ್ಟ ಶುಂಠಿ ಮಳೆ ನೀರಿಗೆ ಸಿಲುಕಿ ಹಾಳಾಗುತ್ತಿದೆ. ಹೀಗಾಗಿ ಖರೀದಿದಾರರು ಹಸಿ ಶುಂಠಿ ಖರೀದಿಗೆ ಹಿಂದೇಟು ಹಾಕುತ್ತಿದ್ದಾರೆ. ನೆರೆಯ ಸೊರಬ, ಆನವಟ್ಟಿಯಿಂದ ಬರುತ್ತಿದ್ದ ವ್ಯಾಪಾರಿಗಳ ಸಂಖ್ಯೆಯಲ್ಲೀ ಇಳಿಕೆಯಾಗಿದೆ. ರೈತರು ಹಸಿ ಶುಂಠಿ ಮಾರಲಾಗದೆ, ಶುಂಠಿ ಒಣಗಿಸಲಾಗದೆ ಸಂದಿಗ್ಧತೆಗೆ ಸಿಲುಕಿದ್ದಾರೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

23 hours ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

1 day ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

1 day ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

2 days ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

2 days ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

2 days ago