Advertisement
ಕೃಷಿ

ಮೋಡ ಕವಿದ ವಾತಾವರಣದಿಂದ ಶುಂಠಿ ಸಂಸ್ಕರಣೆಗೆ ಅಡ್ಡಿ | ಆತಂಕದಲ್ಲಿ ರೈತರು

Share

ಕಳೆದ ಕೆಲ ದಿನಗಳಿಂದ ಮೋಡ ಕವಿದ ವಾತಾವರಣ ಇದೆ. ಆಗಾಗ ಸುರಿಯುತ್ತಿರುವ ಮಳೆಯಿಂದ ಶುಂಠಿ ಸಂಸ್ಕರಣೆಗೆ ಅಡ್ಡಿಯಾಗುತ್ತಿದೆ. ಇದು ರೈತರನ್ನು, ಖರೀದಿದಾರರನ್ನು ಆತಂಕಕ್ಕೆ ತಳ್ಳಿದೆ. ಶಿರಸಿ ತಾಲೂಕಿನ ಪೂರ್ವಭಾಗ ಬನವಾಸಿ ಹೋಬಳಿ ವ್ಯಾಪ್ತಿಯಲ್ಲಿ ಶುಂಠಿ ಬೆಳೆಗಾರರ ಸಂಖ್ಯೆ ಹೆಚ್ಚಿದೆ.

Advertisement
Advertisement

250 ಹೆಕ್ಟೇರ್‌ಗಿಂತ ಹೆಚ್ಚು ಪ್ರದೇಶದಲ್ಲಿ ಸಾವಿರಾರು ಸಂಖ್ಯೆಯ ರೈತರು ಈ ಬೆಳೆ ನಂಬಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಫಸಲು ಕೀಳುವ ಅವಧಿಯಲ್ಲಿ ಅನಿಶ್ಚಿತ ವಾತಾವರಣ ಎದುರಾಗಿದ್ದರಿಂದ ದರದಲ್ಲೂ ಏರುಪೇರು ಉಂಟಾಗುವ ಆತಂಕ ರೈತರನ್ನು ಕಾಡುತ್ತಿದೆ. ಮಾರ್ಚ್ ಬಳಿಕ ರೈತರು ಗದ್ದೆಯಿಂದ ಶುಂಠಿ ಕೀಳುತ್ತಾರೆ. ಕೆಲವರು ಹಸಿ ಶುಂಠಿಯನ್ನೇ ಮಾರಾಟ ಮಾಡಿದರೆ, ಇನ್ನೂ ಹಲವರು ಶುಂಠಿ ಒಣಗಿಸಿ ಮಾರಾಟ ಮಾಡುತ್ತಾರೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಹಸಿ ಶುಂಠಿ ಸರಾಸರಿ ಪ್ರತಿ ಕ್ವಿಂಟಲ್‍ಗೆ ₹1,500 ರಿಂದ ₹2,200 ದರಕ್ಕೆ ಮಾರಾಟ ಕಾಣುತ್ತಿದೆ. ಒಣ ಶುಂಠಿ ಕೆಜಿಗೆ ₹120ರ ದರದ ಆಸುಪಾಸಿನಲ್ಲಿದೆ.

Advertisement

ಮೋಡ ಕವಿದ ವಾತಾವರಣ, ಅಕಾಲಿಕ ಮಳೆಯಿಂದ ಶುಂಠಿ ಸಂಸ್ಕರಣೆಗೆ ಅಡ್ಡಿಯಾಗುತ್ತಿದೆ. ಒಣಗಲು ಇಟ್ಟ ಶುಂಠಿ ಮಳೆ ನೀರಿಗೆ ಸಿಲುಕಿ ಹಾಳಾಗುತ್ತಿದೆ. ಹೀಗಾಗಿ ಖರೀದಿದಾರರು ಹಸಿ ಶುಂಠಿ ಖರೀದಿಗೆ ಹಿಂದೇಟು ಹಾಕುತ್ತಿದ್ದಾರೆ. ನೆರೆಯ ಸೊರಬ, ಆನವಟ್ಟಿಯಿಂದ ಬರುತ್ತಿದ್ದ ವ್ಯಾಪಾರಿಗಳ ಸಂಖ್ಯೆಯಲ್ಲೀ ಇಳಿಕೆಯಾಗಿದೆ. ರೈತರು ಹಸಿ ಶುಂಠಿ ಮಾರಲಾಗದೆ, ಶುಂಠಿ ಒಣಗಿಸಲಾಗದೆ ಸಂದಿಗ್ಧತೆಗೆ ಸಿಲುಕಿದ್ದಾರೆ.

Advertisement

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಳೆಗಾಗಿ ಪುತ್ತೂರು ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ಪರ್ಜನ್ಯ ಜಪ |

ಮಳೆಗಾಗಿ ಪುತ್ತೂರಿನ ಶ್ರೀ‌ಮಹಾಲಿಂಗೇಶ್ವರ ದೇವಳದಲ್ಲಿ‌ ಪರ್ಜನ್ಯ ಜ‌ಪ ನೆರವೇರಿತು.

8 mins ago

ವಾರದ ಅತಿಥಿ | ರಾಜಕಾರಣದಲ್ಲಿ “ನೈತಿಕ ಮೌಲ್ಯ” ತುಂಬಬೇಕು | ಸಮಾಜದಲ್ಲಿ”ಅನೇಕಾಂತವಾದ” ಬೆಳೆಯಬೇಕು |

ರಾಜಕಾರಣದಲ್ಲಿ ನೈತಿಕ ಮೌಲ್ಯ ತುಂಬಬೇಕಾದ್ದು ಏಕೆ ? ಸಮಾಜದಲ್ಲಿ ಸಾಮರಸ್ಯ ಮೂಡಲು ಏನು…

2 hours ago

ಮೇ.1 | ಮಳೆಗಾಗಿ ನಡೆಯಲಿದೆ ಪಂಜದಲ್ಲಿ ಪ್ರಾರ್ಥನೆ

ಮಳೆಗಾಗಿ ಸಾಮೂಹಿಕ ಪ್ರಾರ್ಥನೆ, ವಿಶೇಷ ಪೂಜೆ ನಡೆಯಲಿದೆ.

2 hours ago

Karnataka Weather | 28-04-2024 | ರಾಜ್ಯದಲ್ಲಿ ಒಣ ಹವೆ | ಕರಾವಳಿ ಜಿಲ್ಲೆಗಳಲ್ಲಿ ಮೋಡ |

ಮೇ 6 ರಿಂದ ರಾಜ್ಯದ ಅಲ್ಲಲ್ಲಿ ಪೂರ್ವ ಮುಂಗಾರು ಮಳೆಯಾಗುವ ಲಕ್ಷಣಗಳಿವೆ.

3 hours ago

20 ಕೃಷಿ ಉತ್ಪನ್ನಗಳ ರಫ್ತುಗಳಿಗೆ ಉತ್ತೇಜನ ನೀಡುವ ಯೋಜನೆ |

ಬಾಳೆಹಣ್ಣು, ಮಾವು, ಆಲೂಗಡ್ಡೆ ಮತ್ತು ಬೇಬಿ ಕಾರ್ನ್ ಸೇರಿದಂತೆ 20 ಕೃಷಿ ಉತ್ಪನ್ನಗಳ …

18 hours ago

Karnataka Weather | 27-04-2024 | ಮೋಡ- ಬಿಸಿಗಾಳಿ | ಮಳೆ ಸಾಧ್ಯತೆ ಕಡಿಮೆ |

ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಉತ್ತರ ಒಳನಾಡು, ದಕ್ಷಿಣ ಕರಾವಳಿ ಹಾಗೂ…

23 hours ago