Advertisement
ಕೃಷಿ

ಮೋಡ ಕವಿದ ವಾತಾವರಣದಿಂದ ಶುಂಠಿ ಸಂಸ್ಕರಣೆಗೆ ಅಡ್ಡಿ | ಆತಂಕದಲ್ಲಿ ರೈತರು

Share

ಕಳೆದ ಕೆಲ ದಿನಗಳಿಂದ ಮೋಡ ಕವಿದ ವಾತಾವರಣ ಇದೆ. ಆಗಾಗ ಸುರಿಯುತ್ತಿರುವ ಮಳೆಯಿಂದ ಶುಂಠಿ ಸಂಸ್ಕರಣೆಗೆ ಅಡ್ಡಿಯಾಗುತ್ತಿದೆ. ಇದು ರೈತರನ್ನು, ಖರೀದಿದಾರರನ್ನು ಆತಂಕಕ್ಕೆ ತಳ್ಳಿದೆ. ಶಿರಸಿ ತಾಲೂಕಿನ ಪೂರ್ವಭಾಗ ಬನವಾಸಿ ಹೋಬಳಿ ವ್ಯಾಪ್ತಿಯಲ್ಲಿ ಶುಂಠಿ ಬೆಳೆಗಾರರ ಸಂಖ್ಯೆ ಹೆಚ್ಚಿದೆ.

250 ಹೆಕ್ಟೇರ್‌ಗಿಂತ ಹೆಚ್ಚು ಪ್ರದೇಶದಲ್ಲಿ ಸಾವಿರಾರು ಸಂಖ್ಯೆಯ ರೈತರು ಈ ಬೆಳೆ ನಂಬಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಫಸಲು ಕೀಳುವ ಅವಧಿಯಲ್ಲಿ ಅನಿಶ್ಚಿತ ವಾತಾವರಣ ಎದುರಾಗಿದ್ದರಿಂದ ದರದಲ್ಲೂ ಏರುಪೇರು ಉಂಟಾಗುವ ಆತಂಕ ರೈತರನ್ನು ಕಾಡುತ್ತಿದೆ. ಮಾರ್ಚ್ ಬಳಿಕ ರೈತರು ಗದ್ದೆಯಿಂದ ಶುಂಠಿ ಕೀಳುತ್ತಾರೆ. ಕೆಲವರು ಹಸಿ ಶುಂಠಿಯನ್ನೇ ಮಾರಾಟ ಮಾಡಿದರೆ, ಇನ್ನೂ ಹಲವರು ಶುಂಠಿ ಒಣಗಿಸಿ ಮಾರಾಟ ಮಾಡುತ್ತಾರೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಹಸಿ ಶುಂಠಿ ಸರಾಸರಿ ಪ್ರತಿ ಕ್ವಿಂಟಲ್‍ಗೆ ₹1,500 ರಿಂದ ₹2,200 ದರಕ್ಕೆ ಮಾರಾಟ ಕಾಣುತ್ತಿದೆ. ಒಣ ಶುಂಠಿ ಕೆಜಿಗೆ ₹120ರ ದರದ ಆಸುಪಾಸಿನಲ್ಲಿದೆ.

ಮೋಡ ಕವಿದ ವಾತಾವರಣ, ಅಕಾಲಿಕ ಮಳೆಯಿಂದ ಶುಂಠಿ ಸಂಸ್ಕರಣೆಗೆ ಅಡ್ಡಿಯಾಗುತ್ತಿದೆ. ಒಣಗಲು ಇಟ್ಟ ಶುಂಠಿ ಮಳೆ ನೀರಿಗೆ ಸಿಲುಕಿ ಹಾಳಾಗುತ್ತಿದೆ. ಹೀಗಾಗಿ ಖರೀದಿದಾರರು ಹಸಿ ಶುಂಠಿ ಖರೀದಿಗೆ ಹಿಂದೇಟು ಹಾಕುತ್ತಿದ್ದಾರೆ. ನೆರೆಯ ಸೊರಬ, ಆನವಟ್ಟಿಯಿಂದ ಬರುತ್ತಿದ್ದ ವ್ಯಾಪಾರಿಗಳ ಸಂಖ್ಯೆಯಲ್ಲೀ ಇಳಿಕೆಯಾಗಿದೆ. ರೈತರು ಹಸಿ ಶುಂಠಿ ಮಾರಲಾಗದೆ, ಶುಂಠಿ ಒಣಗಿಸಲಾಗದೆ ಸಂದಿಗ್ಧತೆಗೆ ಸಿಲುಕಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

1 day ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

2 days ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

2 days ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago