71019 ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳ | ಮಳೆ ಹಾನಿಯ ನಡುವೆಯೂ ರೈತರಿಗೆ ಉತ್ತಮ ಬೆಳೆ |

February 2, 2022
11:15 AM

ಪ್ರಕೃತಿ ವಿಕೋಪದ ನಡುವೆಯೂ ರಾಜ್ಯದಲ್ಲಿ ರೈತರು ಬೆಳೆಸಿದ ಮೆಕ್ಕೆಜೋಳಕ್ಕೆ ಭರ್ಜರಿಯಾದ ಫಸಲು ಬಂದಿರುವುದರಿಂದ ರೈತರೆಲ್ಲರ ಮುಖದಲ್ಲಿ ಮಂದಹಾಸವೂ ಬೀರಿದೆ. ಮುಂಗಾರು ಹಂಗಾಮಿನಲ್ಲಿ ಅಕಾಲಿಕ ಮಳೆಯಿಂದ ಬೆಳೆ ನೀರಿನಿಂದ ಜಲಾವೃತವಾಗಿ ಹಾಳಾಗಿತ್ತು. ಆದರೀಗ ರಾಯಚೂರು ಜಿಲ್ಲೆಯಾದ್ಯಂತ ಮೆಕ್ಕೆಜೋಳ ಭರ್ಜರಿಯಾಗಿ ಬೆಳೆದಿದ್ದು, ರೈತರಿಗೆ ಈ ಬಾರಿ ಉತ್ತಮ ಆದಾಯ ತಂದು ಕೊಡುವ ನಿರೀಕ್ಷೆಯಿದೆ.

ಈ ಬಾರಿ ರಾಯಚೂರು ಜಿಲ್ಲೆಯಾದ್ಯಂತ ಒಟ್ಟು 71 ಸಾವಿರ ಹೆಕ್ಟೆರ್‌ನಷ್ಟು ಪ್ರದೇಶದಲ್ಲಿ ಮೆಕ್ಕೆಜೋಳ ಬೆಳೆಯಲಾಗಿದೆ. ಸದ್ಯ ಮಾರುಕಟ್ಟೆಯಲ್ಲಿ ಮೆಕ್ಕೆಜೋಳಕ್ಕೆ ಉತ್ತಮ ಬೆಲೆಯಿದೆ. ಮಾತ್ರವಲ್ಲ ಬಿಳಿ ಮೆಕ್ಕೆಜೋಳಕ್ಕೆ ಪ್ರತಿ ಕ್ವಿಂಟಾಲ್‌ಗೆ 3500 ಹಾಗೂ ಹೈಬಿಡ್ರ ಜೋಳಕ್ಕೆ 1600 ಇದೆ. ರೈತರಿಗೆ ಮೆಕ್ಕಜೋಳದಿಂದ ಹೆಚ್ಚು ಫಲ ಸಿಕ್ಕಿರುವುದು ಮಾತ್ರವಲ್ಲದೆ ಸರ್ಕಾರ ಖರೀದಿ ಕೇಂದ್ರ ಸ್ಥಾಪನೆ ಮಾಡಿರುವುದರಿಂದ ಈ ಭಾರಿ ಮೆಕ್ಕೆಜೋಳ ಬೆಳೆದ ರೈತರಲ್ಲಿ ನೆಮ್ಮದಿ ತಂದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?
September 16, 2026
7:17 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ
September 15, 2026
11:12 PM
by: ದ ರೂರಲ್ ಮಿರರ್.ಕಾಂ
ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ
September 15, 2026
10:09 PM
by: ದ ರೂರಲ್ ಮಿರರ್.ಕಾಂ
ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ
September 13, 2026
9:08 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror