ನೈಸರ್ಗಿಕ ವಿಪತ್ತುಗಳಿಂದಾಗುವ ಸಷ್ಟದಿಂದ ರೈತರನ್ನು ರಕ್ಷಿಸಲು ಕರ್ನಾಟಕ ರೈತ ಸುರಕ್ಷಾ ಪಿಎಂ ಫಸಲ್ಬಿಮಾ ಯೋಜನೆಯನ್ನು ಸರ್ಕಾರವು ಜಾರಿಗೊಳಿಸಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಅಗ್ರಿಕಲ್ಚರಲ್ ಇನ್ಯೂರೆನ್ಸ್ ಕಂಪೆನಿಯವರ ಸಹಯೋಗದಿಂದ 2021-22ನೇ ಸಾಲಿನ ಮುಂಗಾರು, ಹಿಂಗಾರು, ಬೇಸಿಗೆಯಲ್ಲಿ ನಷ್ಟವನ್ನು ಅನುಭವಿಸಿದವರಿಗೆ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಕಿರಣ್ಕುಮಾರ್ ತಿಳಿಸಿದ್ದಾರೆ.
2019-20 ಸಾಲಿನ ಮುಂಗಾರು ಹಂಗಾಮಿನಲ್ಲಿ 16764 ರೈತರ ಅರ್ಜಿಗಳಿಗೆ ರೂ. 1534.04 ಲಕ್ಷಗಳ ವಿಮಾ ಮೊತ್ತ ರೈತರ ಖಾತೆಗೆ ಪಾವತಿಯಾಗಿದ್ದು, ನೊಂದಾಯಿತ ಬೆಳೆ ಪರಿಶೀಲನೆಗೆ ಬಾಕಿಯಾಗಿರುವ 379 ಸಂಖ್ಯೆ ರೈತರ ಅರ್ಜಿಗಳಿಗೆ ರೂ.31,49 ಲಕ್ಷಗಳ ವಿಮಾ ಮೊತ್ತ ಪಾವತಿಗೆ ಬಾಕಿಯಿರುತ್ತದೆ. ಹಾಗೂ 2019-20 ಸಾಲಿನ ಹಿಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿ 34 ಅರ್ಜಿಗಳಿಗೆ ರೂ. 245 ಲಕ್ಷಗಳು 1 ಮೊತ್ತ ಪಾವತಿಯಾಗಿರುತ್ತದೆ. ನೋಂದಾಯಿತ ಬೆಳೆ ಪರಿಶೀಲನೆ ಬಾಕಿಯಿರುವ 10 ಸಂಖ್ಯೆ ರೈತರ ಅರ್ಜಿಗಳಿಗೆ ರೂ.049 ಲಕ್ಷಗಳ ವಿಮಾ ಮೊತ್ತ ಪಾವತಿಗೆ ಬಾಕಿಯಿರುತ್ತದೆ ಎಂದು ಅವರು ತಿಳಿಸಿದ್ದಾರೆ.
ಬಿತ್ತನೆ ನಾಟಿ ಮಾಡುವುದಕ್ಕಿಂದ ಮುಂಚಿತವಾಗಿಯೇ ನೋಂದಾಯಿಸಲು ಸಹ ಅವಕಾಶವಿರುತ್ತದೆ. ಬೆಳೆ ಸಾಲ ಪಡೆಯುವ ರೈತರು ಬೆಳೆ ವಿಮೆ ಯೋಜನೆಯಡಿ ಕಡ್ಡಾಯವಾಗಿ ಒಳಪಡಿಸಲಾಗುವುದು ಎಂದು ಹೇಳಿದ್ದಾರೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…
ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…
ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…
ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಿ ಭಾರಿ ಮಳೆ ಮತ್ತು ಗುಡುಗು ಸಹಿತ…
ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ…
ಮಂಗಳೂರು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ…