ನೈಸರ್ಗಿಕ ವಿಪತ್ತುಗಳಿಂದಾಗುವ ಸಷ್ಟದಿಂದ ರೈತರನ್ನು ರಕ್ಷಿಸಲು ಕರ್ನಾಟಕ ರೈತ ಸುರಕ್ಷಾ ಪಿಎಂ ಫಸಲ್ಬಿಮಾ ಯೋಜನೆಯನ್ನು ಸರ್ಕಾರವು ಜಾರಿಗೊಳಿಸಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಅಗ್ರಿಕಲ್ಚರಲ್ ಇನ್ಯೂರೆನ್ಸ್ ಕಂಪೆನಿಯವರ ಸಹಯೋಗದಿಂದ 2021-22ನೇ ಸಾಲಿನ ಮುಂಗಾರು, ಹಿಂಗಾರು, ಬೇಸಿಗೆಯಲ್ಲಿ ನಷ್ಟವನ್ನು ಅನುಭವಿಸಿದವರಿಗೆ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಕಿರಣ್ಕುಮಾರ್ ತಿಳಿಸಿದ್ದಾರೆ.
2019-20 ಸಾಲಿನ ಮುಂಗಾರು ಹಂಗಾಮಿನಲ್ಲಿ 16764 ರೈತರ ಅರ್ಜಿಗಳಿಗೆ ರೂ. 1534.04 ಲಕ್ಷಗಳ ವಿಮಾ ಮೊತ್ತ ರೈತರ ಖಾತೆಗೆ ಪಾವತಿಯಾಗಿದ್ದು, ನೊಂದಾಯಿತ ಬೆಳೆ ಪರಿಶೀಲನೆಗೆ ಬಾಕಿಯಾಗಿರುವ 379 ಸಂಖ್ಯೆ ರೈತರ ಅರ್ಜಿಗಳಿಗೆ ರೂ.31,49 ಲಕ್ಷಗಳ ವಿಮಾ ಮೊತ್ತ ಪಾವತಿಗೆ ಬಾಕಿಯಿರುತ್ತದೆ. ಹಾಗೂ 2019-20 ಸಾಲಿನ ಹಿಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿ 34 ಅರ್ಜಿಗಳಿಗೆ ರೂ. 245 ಲಕ್ಷಗಳು 1 ಮೊತ್ತ ಪಾವತಿಯಾಗಿರುತ್ತದೆ. ನೋಂದಾಯಿತ ಬೆಳೆ ಪರಿಶೀಲನೆ ಬಾಕಿಯಿರುವ 10 ಸಂಖ್ಯೆ ರೈತರ ಅರ್ಜಿಗಳಿಗೆ ರೂ.049 ಲಕ್ಷಗಳ ವಿಮಾ ಮೊತ್ತ ಪಾವತಿಗೆ ಬಾಕಿಯಿರುತ್ತದೆ ಎಂದು ಅವರು ತಿಳಿಸಿದ್ದಾರೆ.
ಬಿತ್ತನೆ ನಾಟಿ ಮಾಡುವುದಕ್ಕಿಂದ ಮುಂಚಿತವಾಗಿಯೇ ನೋಂದಾಯಿಸಲು ಸಹ ಅವಕಾಶವಿರುತ್ತದೆ. ಬೆಳೆ ಸಾಲ ಪಡೆಯುವ ರೈತರು ಬೆಳೆ ವಿಮೆ ಯೋಜನೆಯಡಿ ಕಡ್ಡಾಯವಾಗಿ ಒಳಪಡಿಸಲಾಗುವುದು ಎಂದು ಹೇಳಿದ್ದಾರೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…