ನೈಸರ್ಗಿಕ ವಿಪತ್ತುಗಳಿಂದಾಗುವ ಸಷ್ಟದಿಂದ ರೈತರನ್ನು ರಕ್ಷಿಸಲು ಕರ್ನಾಟಕ ರೈತ ಸುರಕ್ಷಾ ಪಿಎಂ ಫಸಲ್ಬಿಮಾ ಯೋಜನೆಯನ್ನು ಸರ್ಕಾರವು ಜಾರಿಗೊಳಿಸಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಅಗ್ರಿಕಲ್ಚರಲ್ ಇನ್ಯೂರೆನ್ಸ್ ಕಂಪೆನಿಯವರ ಸಹಯೋಗದಿಂದ 2021-22ನೇ ಸಾಲಿನ ಮುಂಗಾರು, ಹಿಂಗಾರು, ಬೇಸಿಗೆಯಲ್ಲಿ ನಷ್ಟವನ್ನು ಅನುಭವಿಸಿದವರಿಗೆ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಕಿರಣ್ಕುಮಾರ್ ತಿಳಿಸಿದ್ದಾರೆ.
2019-20 ಸಾಲಿನ ಮುಂಗಾರು ಹಂಗಾಮಿನಲ್ಲಿ 16764 ರೈತರ ಅರ್ಜಿಗಳಿಗೆ ರೂ. 1534.04 ಲಕ್ಷಗಳ ವಿಮಾ ಮೊತ್ತ ರೈತರ ಖಾತೆಗೆ ಪಾವತಿಯಾಗಿದ್ದು, ನೊಂದಾಯಿತ ಬೆಳೆ ಪರಿಶೀಲನೆಗೆ ಬಾಕಿಯಾಗಿರುವ 379 ಸಂಖ್ಯೆ ರೈತರ ಅರ್ಜಿಗಳಿಗೆ ರೂ.31,49 ಲಕ್ಷಗಳ ವಿಮಾ ಮೊತ್ತ ಪಾವತಿಗೆ ಬಾಕಿಯಿರುತ್ತದೆ. ಹಾಗೂ 2019-20 ಸಾಲಿನ ಹಿಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿ 34 ಅರ್ಜಿಗಳಿಗೆ ರೂ. 245 ಲಕ್ಷಗಳು 1 ಮೊತ್ತ ಪಾವತಿಯಾಗಿರುತ್ತದೆ. ನೋಂದಾಯಿತ ಬೆಳೆ ಪರಿಶೀಲನೆ ಬಾಕಿಯಿರುವ 10 ಸಂಖ್ಯೆ ರೈತರ ಅರ್ಜಿಗಳಿಗೆ ರೂ.049 ಲಕ್ಷಗಳ ವಿಮಾ ಮೊತ್ತ ಪಾವತಿಗೆ ಬಾಕಿಯಿರುತ್ತದೆ ಎಂದು ಅವರು ತಿಳಿಸಿದ್ದಾರೆ.
ಬಿತ್ತನೆ ನಾಟಿ ಮಾಡುವುದಕ್ಕಿಂದ ಮುಂಚಿತವಾಗಿಯೇ ನೋಂದಾಯಿಸಲು ಸಹ ಅವಕಾಶವಿರುತ್ತದೆ. ಬೆಳೆ ಸಾಲ ಪಡೆಯುವ ರೈತರು ಬೆಳೆ ವಿಮೆ ಯೋಜನೆಯಡಿ ಕಡ್ಡಾಯವಾಗಿ ಒಳಪಡಿಸಲಾಗುವುದು ಎಂದು ಹೇಳಿದ್ದಾರೆ.
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…