ನೈಸರ್ಗಿಕ ವಿಪತ್ತುಗಳಿಂದಾಗುವ ಸಷ್ಟದಿಂದ ರೈತರನ್ನು ರಕ್ಷಿಸಲು ಕರ್ನಾಟಕ ರೈತ ಸುರಕ್ಷಾ ಪಿಎಂ ಫಸಲ್ಬಿಮಾ ಯೋಜನೆಯನ್ನು ಸರ್ಕಾರವು ಜಾರಿಗೊಳಿಸಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಅಗ್ರಿಕಲ್ಚರಲ್ ಇನ್ಯೂರೆನ್ಸ್ ಕಂಪೆನಿಯವರ ಸಹಯೋಗದಿಂದ 2021-22ನೇ ಸಾಲಿನ ಮುಂಗಾರು, ಹಿಂಗಾರು, ಬೇಸಿಗೆಯಲ್ಲಿ ನಷ್ಟವನ್ನು ಅನುಭವಿಸಿದವರಿಗೆ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಕಿರಣ್ಕುಮಾರ್ ತಿಳಿಸಿದ್ದಾರೆ.
2019-20 ಸಾಲಿನ ಮುಂಗಾರು ಹಂಗಾಮಿನಲ್ಲಿ 16764 ರೈತರ ಅರ್ಜಿಗಳಿಗೆ ರೂ. 1534.04 ಲಕ್ಷಗಳ ವಿಮಾ ಮೊತ್ತ ರೈತರ ಖಾತೆಗೆ ಪಾವತಿಯಾಗಿದ್ದು, ನೊಂದಾಯಿತ ಬೆಳೆ ಪರಿಶೀಲನೆಗೆ ಬಾಕಿಯಾಗಿರುವ 379 ಸಂಖ್ಯೆ ರೈತರ ಅರ್ಜಿಗಳಿಗೆ ರೂ.31,49 ಲಕ್ಷಗಳ ವಿಮಾ ಮೊತ್ತ ಪಾವತಿಗೆ ಬಾಕಿಯಿರುತ್ತದೆ. ಹಾಗೂ 2019-20 ಸಾಲಿನ ಹಿಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿ 34 ಅರ್ಜಿಗಳಿಗೆ ರೂ. 245 ಲಕ್ಷಗಳು 1 ಮೊತ್ತ ಪಾವತಿಯಾಗಿರುತ್ತದೆ. ನೋಂದಾಯಿತ ಬೆಳೆ ಪರಿಶೀಲನೆ ಬಾಕಿಯಿರುವ 10 ಸಂಖ್ಯೆ ರೈತರ ಅರ್ಜಿಗಳಿಗೆ ರೂ.049 ಲಕ್ಷಗಳ ವಿಮಾ ಮೊತ್ತ ಪಾವತಿಗೆ ಬಾಕಿಯಿರುತ್ತದೆ ಎಂದು ಅವರು ತಿಳಿಸಿದ್ದಾರೆ.
ಬಿತ್ತನೆ ನಾಟಿ ಮಾಡುವುದಕ್ಕಿಂದ ಮುಂಚಿತವಾಗಿಯೇ ನೋಂದಾಯಿಸಲು ಸಹ ಅವಕಾಶವಿರುತ್ತದೆ. ಬೆಳೆ ಸಾಲ ಪಡೆಯುವ ರೈತರು ಬೆಳೆ ವಿಮೆ ಯೋಜನೆಯಡಿ ಕಡ್ಡಾಯವಾಗಿ ಒಳಪಡಿಸಲಾಗುವುದು ಎಂದು ಹೇಳಿದ್ದಾರೆ.
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…