ನೈಸರ್ಗಿಕ ವಿಪತ್ತುಗಳಿಂದಾಗುವ ಸಷ್ಟದಿಂದ ರೈತರನ್ನು ರಕ್ಷಿಸಲು ಕರ್ನಾಟಕ ರೈತ ಸುರಕ್ಷಾ ಪಿಎಂ ಫಸಲ್ಬಿಮಾ ಯೋಜನೆಯನ್ನು ಸರ್ಕಾರವು ಜಾರಿಗೊಳಿಸಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಅಗ್ರಿಕಲ್ಚರಲ್ ಇನ್ಯೂರೆನ್ಸ್ ಕಂಪೆನಿಯವರ ಸಹಯೋಗದಿಂದ 2021-22ನೇ ಸಾಲಿನ ಮುಂಗಾರು, ಹಿಂಗಾರು, ಬೇಸಿಗೆಯಲ್ಲಿ ನಷ್ಟವನ್ನು ಅನುಭವಿಸಿದವರಿಗೆ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಕಿರಣ್ಕುಮಾರ್ ತಿಳಿಸಿದ್ದಾರೆ.
2019-20 ಸಾಲಿನ ಮುಂಗಾರು ಹಂಗಾಮಿನಲ್ಲಿ 16764 ರೈತರ ಅರ್ಜಿಗಳಿಗೆ ರೂ. 1534.04 ಲಕ್ಷಗಳ ವಿಮಾ ಮೊತ್ತ ರೈತರ ಖಾತೆಗೆ ಪಾವತಿಯಾಗಿದ್ದು, ನೊಂದಾಯಿತ ಬೆಳೆ ಪರಿಶೀಲನೆಗೆ ಬಾಕಿಯಾಗಿರುವ 379 ಸಂಖ್ಯೆ ರೈತರ ಅರ್ಜಿಗಳಿಗೆ ರೂ.31,49 ಲಕ್ಷಗಳ ವಿಮಾ ಮೊತ್ತ ಪಾವತಿಗೆ ಬಾಕಿಯಿರುತ್ತದೆ. ಹಾಗೂ 2019-20 ಸಾಲಿನ ಹಿಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿ 34 ಅರ್ಜಿಗಳಿಗೆ ರೂ. 245 ಲಕ್ಷಗಳು 1 ಮೊತ್ತ ಪಾವತಿಯಾಗಿರುತ್ತದೆ. ನೋಂದಾಯಿತ ಬೆಳೆ ಪರಿಶೀಲನೆ ಬಾಕಿಯಿರುವ 10 ಸಂಖ್ಯೆ ರೈತರ ಅರ್ಜಿಗಳಿಗೆ ರೂ.049 ಲಕ್ಷಗಳ ವಿಮಾ ಮೊತ್ತ ಪಾವತಿಗೆ ಬಾಕಿಯಿರುತ್ತದೆ ಎಂದು ಅವರು ತಿಳಿಸಿದ್ದಾರೆ.
ಬಿತ್ತನೆ ನಾಟಿ ಮಾಡುವುದಕ್ಕಿಂದ ಮುಂಚಿತವಾಗಿಯೇ ನೋಂದಾಯಿಸಲು ಸಹ ಅವಕಾಶವಿರುತ್ತದೆ. ಬೆಳೆ ಸಾಲ ಪಡೆಯುವ ರೈತರು ಬೆಳೆ ವಿಮೆ ಯೋಜನೆಯಡಿ ಕಡ್ಡಾಯವಾಗಿ ಒಳಪಡಿಸಲಾಗುವುದು ಎಂದು ಹೇಳಿದ್ದಾರೆ.
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…
ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…
ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…
ಮೆಟಾ ಒಡೆತನದ Facebook, Instagram ಮತ್ತು Messenger ಸೇವೆಗಳು ಜಾಗತಿಕ ಮಟ್ಟದಲ್ಲಿ ತಾಂತ್ರಿಕ…
ಉತ್ತರ ಪ್ರದೇಶದಲ್ಲಿ ಅಡಿಕೆ ವ್ಯಾಪಾರದ ಮೇಲೆ ವಿಧಿಸಲಾಗುತ್ತಿರುವ ಮಂಡಿ ತೆರಿಗೆಯನ್ನು ರದ್ದುಗೊಳಿಸುವಂತೆ ಕ್ಯಾಂಪ್ಕೊ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ…