Advertisement
ಮೌನ ಮಾತಾದಾಗ

ಕೃಷಿ ಏಕೆ ಸೋಲುವುದಿಲ್ಲ….?

Share
ಮೊಳೆತೇಳುವ ಖುಷಿ ಬೀಜದ ಮಡಿಲಿಗೆ
ಹನಿಹನಿಸುತಲಿರೆ ಹಸಿರುಸಿರು
ಕುಲನೆಲವೆನ್ನದೆ ದಾಹವ ನೀಗುವ
ನದಿಯೊಲವಿಗೆ ಏತಕೆ ಹೆಸರೂ….”
ಹೌದಲ್ಲಾ, ಈ ಕವನದ ಸಾಲುಗಳೇ ಕೃಷಿಯೊಳಗಣ ಸಂತಸದ ಬದುಕನ್ನು ತೆರೆದು ತೋರುತ್ತಿಲ್ಲವೇ…
ಖಂಡಿತಾ ಕೃಷಿ ಸೋಲದು. ಕೃಷಿಯೆಂಬುದು ಪ್ರಕೃತಿಯೊಳಗೊಂದಾಗುವ ಕ್ರಿಯೆ. ತಾಯ ಅಪ್ಪುಗೆಯಲ್ಲಿ ಸೋಲಿದೆಯೇ.. ಖಂಡಿತಾ ಇಲ್ಲ. ಅದನ್ನು ಕಾಣುವ,ಅನುಭವಿಸುವ ಒಳ ದೃಷ್ಟಿ ಬೇಕಷ್ಟೆ….ಅಂದರೆ ತಾಯ ಮೇಲಿನ ಶ್ರದ್ಧೆ, ಪ್ರೀತಿಗೆ ಹೇಗೆ ಮಿತಿಯಿಲ್ಲವೋ ಅದೇ ರೀತಿಯ ಶ್ರದ್ಧೆ, ಪ್ರೀತಿ  ಕೃಷಿ, ಭೂಮಿ,ಪ್ರಕೃತಿಯ ಮೇಲೂ ಇದ್ದಾಗ ಸೋಲೇ ಇರದು.
ಕೃಷಿಯೆಂದರೆ ಪ್ರಕೃತಿಯ ನಡೆಯನ್ನು ಗಮನಿಸುತ್ತಾ ಪಡೆಯಬಹುದಾದ್ದನ್ನು ಪಡೆಯುವುದು,ಅಷ್ಟೇ,ಅಂದರೆ ಯಾವ ರೀತಿ ತಾಯ ಎದೆಹಾಲ ಕುಡಿಯುತ್ತಾ ಕುಡಿಯುತ್ತಾ ಮತ್ತಷ್ಟು ಎದೆಹಾಲಿನ ವೃದ್ದಿಗೆ ಪ್ರಚೋದನೆ ಆಗುವುದೋ ಅದೇ ರೀತಿಯಾಗಿ ಮುದ್ದುಗಾಲ ತುಳಿತ ಬೇಕಷ್ಟೇ ಹೊರತು ಘಾತಾನುಘಾತವಲ್ಲ. ಘರ್ಷಣೆ ಇಲ್ಲದಾಗ ಸೋಲಿದೆಯೇ….
ಕೃಷಿ ಎಂಬುದೊಂದು ಸಹಜ ಜೀವನ ಕಲೆ, ಅತಿಯಾದ ಆಸೆ ಆಕಾಂಕ್ಷೆಗಳು ಇರದ ಸ್ಥಿತಿ. ಹುಟ್ಟಿಸಿದ ದೇವರು ಹುಲ್ಲ ಮೇಯಿಸಲಾರನೇ ಅಂದರೆ ಇಷ್ಟೇ ಅಲ್ಲವೇ.ನಿನಗೇನು ಬೇಕೋ ಅಷ್ಟೇ ಹೊರತು ತಲೆತಲೆಮಾರುಗಳಿಗೆ ಕೂಡಿ ಹಾಕುವ ದಂಧೆಯಲ್ಲವಲ್ಲಾ….ಹಾಗಿದ್ದಾಗ ಸೋಲೆಲ್ಲಿದೆ.ಇಡೀ ಪ್ರಕೃತಿಯೇ ಒಂದು ಸರಣಿ ಸರಪಳಿ ಸೂತ್ರ. ಒಂದಕ್ಕೊಂದು ಪೂರಕ,ಒಂದು ಕೊಂಡಿ ಕಳಚಿದರೂ ಸೂತ್ರ ಹರಿದ ಗಾಳಿಪಟ.ನಿಜ ಕೃಷಿ ಅಂದರೆ ಸೂತ್ರದೊಳಗಿನ ಸಾರದ ಅನುಸರಣೆಯಲ್ಲವೇ….ಹಾಗಿದ್ದಾಗ ಸೋಲಿದೆಯೇ… ಈ ದಿನಗಳ ಅತೀ ಕಠಿಣ ಪರಿಸ್ಥಿತಿಯಲ್ಲೂ ತಲೆ ಎತ್ತಿ ನಿಂತ ಕ್ಷೇತ್ರ ಕೃಷಿ ಕ್ಷೇತ್ರವಲ್ಲವೇ….ಕಾರಣ ನಿರಾವಲಂಬನೆ… ತಾಯ ಅಪ್ಪುಗೆಯ ರಕ್ಷಣೆ. ಎಲ್ಲಾರು ಮಾಡುವುದು ಹೊಟ್ಟೆಗಾಗಿ,ಗೇಣು ಬಟ್ಟೆಗಾಗಿ  ಎಂಬುದರ ನಿಜಾರ್ಥ ಅರಿತು ಹಸಿವಿನ, ತೀರದ ದಾಹದ ಮಿತಿಯರಿತು ವರ್ತಿಸಿದಾಗ ಸೋಲ ಮುಖ ಕೃಷಿ ಲೋಕ ಕಂಡೀತೇ.
ಅದಕ್ಕೇ ಕೃಷಿ ಋಷಿ ಅನ್ನುವುದು… ಋಷಿಯಾದಾತ ಖಂಡಿತಾ ಶೋಷಿಸಲಾರ,ಅತಿ ಬಯಕೆಯ ದಾಹದ ದಾಸನಾಗಲಾರ,ತನ್ನ ಪಾಲಿಗೆ ಬಂದ ತುತ್ತನು ವರಪ್ರಸಾದವಾಗಿ ಸ್ವೀಕರಿಸಬಲ್ಲ. ಇಂತಹ ಪರಿಶುದ್ಧ ಮನದ ಬದುಕಿಗೆ ಸೋಲುಂಟೇ….ಇರಲಾರದು. ಅಂತಹ ಕೃಷಿ ಬದುಕಿನ ಅನುಭವದ ದಾಸನಾಗಲು ತಾಯ ಮಡಿಲಲ್ಲಿ ವಿನೀತನಾಗಿ “ಧಿಯೋ ಯೋ ನಃ ಪ್ರಚೋದಯಾತ್” ಎಂದು ಬೇಡಿಕೊಳ್ಳಬೇಕಷ್ಟೆ.ಶರಣರಿಗೆ ಸೋಲಿಲ್ಲ…
ಇದು ಸಹಸ್ರ ಸಹಸ್ರ ವರ್ಷಗಳ ಸತ್ಯ…..ಅದೇ ನಿಜ ಕೃಷಿ…ಇದನರಿತೊಡೆ ಕೃಷಿಗೆ ಸೋಲಿಲ್ಲ. ಸೋಲು ಗೆಲುವಿನ ಆಯ್ಕೆ ನಮ್ಮದು,ಅಷ್ಟೇ….
#ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

‌ ಪ್ರಗತಿಪರ ಕೃಷಿಕ, ಬರಹಗಾರ

Published by
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

Recent Posts

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

38 minutes ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

48 minutes ago

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

16 hours ago

ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ

ಬಿದದಿ ಎಐ ಟೌನ್‌ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…

17 hours ago

ಹವಾಮಾನ ವರದಿ | 16-06-2026 | ರಾಜ್ಯದಲ್ಲಿ ಇನ್ನೂ ದುರ್ಬಲ ಮಳೆ ಚಟುವಟಿಕೆ – ಜೂ.22 ರಿಂದ ಕರಾವಳಿಯಲ್ಲಿ ಮುಂಗಾರು ಚೇತರಿಕೆ ಸಾಧ್ಯತೆ

ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…

22 hours ago

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

2 days ago