Advertisement
ಮೌನ ಮಾತಾದಾಗ

ಕೃಷಿ ಏಕೆ ಸೋಲುವುದಿಲ್ಲ….?

Share
ಮೊಳೆತೇಳುವ ಖುಷಿ ಬೀಜದ ಮಡಿಲಿಗೆ
ಹನಿಹನಿಸುತಲಿರೆ ಹಸಿರುಸಿರು
ಕುಲನೆಲವೆನ್ನದೆ ದಾಹವ ನೀಗುವ
ನದಿಯೊಲವಿಗೆ ಏತಕೆ ಹೆಸರೂ….”
ಹೌದಲ್ಲಾ, ಈ ಕವನದ ಸಾಲುಗಳೇ ಕೃಷಿಯೊಳಗಣ ಸಂತಸದ ಬದುಕನ್ನು ತೆರೆದು ತೋರುತ್ತಿಲ್ಲವೇ…
ಖಂಡಿತಾ ಕೃಷಿ ಸೋಲದು. ಕೃಷಿಯೆಂಬುದು ಪ್ರಕೃತಿಯೊಳಗೊಂದಾಗುವ ಕ್ರಿಯೆ. ತಾಯ ಅಪ್ಪುಗೆಯಲ್ಲಿ ಸೋಲಿದೆಯೇ.. ಖಂಡಿತಾ ಇಲ್ಲ. ಅದನ್ನು ಕಾಣುವ,ಅನುಭವಿಸುವ ಒಳ ದೃಷ್ಟಿ ಬೇಕಷ್ಟೆ….ಅಂದರೆ ತಾಯ ಮೇಲಿನ ಶ್ರದ್ಧೆ, ಪ್ರೀತಿಗೆ ಹೇಗೆ ಮಿತಿಯಿಲ್ಲವೋ ಅದೇ ರೀತಿಯ ಶ್ರದ್ಧೆ, ಪ್ರೀತಿ  ಕೃಷಿ, ಭೂಮಿ,ಪ್ರಕೃತಿಯ ಮೇಲೂ ಇದ್ದಾಗ ಸೋಲೇ ಇರದು.
ಕೃಷಿಯೆಂದರೆ ಪ್ರಕೃತಿಯ ನಡೆಯನ್ನು ಗಮನಿಸುತ್ತಾ ಪಡೆಯಬಹುದಾದ್ದನ್ನು ಪಡೆಯುವುದು,ಅಷ್ಟೇ,ಅಂದರೆ ಯಾವ ರೀತಿ ತಾಯ ಎದೆಹಾಲ ಕುಡಿಯುತ್ತಾ ಕುಡಿಯುತ್ತಾ ಮತ್ತಷ್ಟು ಎದೆಹಾಲಿನ ವೃದ್ದಿಗೆ ಪ್ರಚೋದನೆ ಆಗುವುದೋ ಅದೇ ರೀತಿಯಾಗಿ ಮುದ್ದುಗಾಲ ತುಳಿತ ಬೇಕಷ್ಟೇ ಹೊರತು ಘಾತಾನುಘಾತವಲ್ಲ. ಘರ್ಷಣೆ ಇಲ್ಲದಾಗ ಸೋಲಿದೆಯೇ….
ಕೃಷಿ ಎಂಬುದೊಂದು ಸಹಜ ಜೀವನ ಕಲೆ, ಅತಿಯಾದ ಆಸೆ ಆಕಾಂಕ್ಷೆಗಳು ಇರದ ಸ್ಥಿತಿ. ಹುಟ್ಟಿಸಿದ ದೇವರು ಹುಲ್ಲ ಮೇಯಿಸಲಾರನೇ ಅಂದರೆ ಇಷ್ಟೇ ಅಲ್ಲವೇ.ನಿನಗೇನು ಬೇಕೋ ಅಷ್ಟೇ ಹೊರತು ತಲೆತಲೆಮಾರುಗಳಿಗೆ ಕೂಡಿ ಹಾಕುವ ದಂಧೆಯಲ್ಲವಲ್ಲಾ….ಹಾಗಿದ್ದಾಗ ಸೋಲೆಲ್ಲಿದೆ.ಇಡೀ ಪ್ರಕೃತಿಯೇ ಒಂದು ಸರಣಿ ಸರಪಳಿ ಸೂತ್ರ. ಒಂದಕ್ಕೊಂದು ಪೂರಕ,ಒಂದು ಕೊಂಡಿ ಕಳಚಿದರೂ ಸೂತ್ರ ಹರಿದ ಗಾಳಿಪಟ.ನಿಜ ಕೃಷಿ ಅಂದರೆ ಸೂತ್ರದೊಳಗಿನ ಸಾರದ ಅನುಸರಣೆಯಲ್ಲವೇ….ಹಾಗಿದ್ದಾಗ ಸೋಲಿದೆಯೇ… ಈ ದಿನಗಳ ಅತೀ ಕಠಿಣ ಪರಿಸ್ಥಿತಿಯಲ್ಲೂ ತಲೆ ಎತ್ತಿ ನಿಂತ ಕ್ಷೇತ್ರ ಕೃಷಿ ಕ್ಷೇತ್ರವಲ್ಲವೇ….ಕಾರಣ ನಿರಾವಲಂಬನೆ… ತಾಯ ಅಪ್ಪುಗೆಯ ರಕ್ಷಣೆ. ಎಲ್ಲಾರು ಮಾಡುವುದು ಹೊಟ್ಟೆಗಾಗಿ,ಗೇಣು ಬಟ್ಟೆಗಾಗಿ  ಎಂಬುದರ ನಿಜಾರ್ಥ ಅರಿತು ಹಸಿವಿನ, ತೀರದ ದಾಹದ ಮಿತಿಯರಿತು ವರ್ತಿಸಿದಾಗ ಸೋಲ ಮುಖ ಕೃಷಿ ಲೋಕ ಕಂಡೀತೇ.
ಅದಕ್ಕೇ ಕೃಷಿ ಋಷಿ ಅನ್ನುವುದು… ಋಷಿಯಾದಾತ ಖಂಡಿತಾ ಶೋಷಿಸಲಾರ,ಅತಿ ಬಯಕೆಯ ದಾಹದ ದಾಸನಾಗಲಾರ,ತನ್ನ ಪಾಲಿಗೆ ಬಂದ ತುತ್ತನು ವರಪ್ರಸಾದವಾಗಿ ಸ್ವೀಕರಿಸಬಲ್ಲ. ಇಂತಹ ಪರಿಶುದ್ಧ ಮನದ ಬದುಕಿಗೆ ಸೋಲುಂಟೇ….ಇರಲಾರದು. ಅಂತಹ ಕೃಷಿ ಬದುಕಿನ ಅನುಭವದ ದಾಸನಾಗಲು ತಾಯ ಮಡಿಲಲ್ಲಿ ವಿನೀತನಾಗಿ “ಧಿಯೋ ಯೋ ನಃ ಪ್ರಚೋದಯಾತ್” ಎಂದು ಬೇಡಿಕೊಳ್ಳಬೇಕಷ್ಟೆ.ಶರಣರಿಗೆ ಸೋಲಿಲ್ಲ…
ಇದು ಸಹಸ್ರ ಸಹಸ್ರ ವರ್ಷಗಳ ಸತ್ಯ…..ಅದೇ ನಿಜ ಕೃಷಿ…ಇದನರಿತೊಡೆ ಕೃಷಿಗೆ ಸೋಲಿಲ್ಲ. ಸೋಲು ಗೆಲುವಿನ ಆಯ್ಕೆ ನಮ್ಮದು,ಅಷ್ಟೇ….
#ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

‌ ಪ್ರಗತಿಪರ ಕೃಷಿಕ, ಬರಹಗಾರ

Published by
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

Recent Posts

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

8 hours ago

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್‌ಗೆ ಅಡಿಕೆ…

9 hours ago

ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…

10 hours ago

ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ

2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್‌ ಆ್ಯಪ್‌ ಮೂಲಕವೇ ಬೆಳೆ…

10 hours ago

ಮಾಣಿ–ಸಂಪಾಜೆ ರಸ್ತೆ ದುರಸ್ತಿಗೆ ₹49.22 ಕೋಟಿ ಮಂಜೂರು | ಚತುಷ್ಪಥ ಯೋಜನೆಗೆ ವೇಗ

ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…

10 hours ago

ಭೂಕುಸಿತದ ಬಗ್ಗೆ ಎಚ್ಚರಿಕೆ – ಜುಲೈ 7 ರಿಂದ 11 ರವರೆಗೆ ಪಶ್ಚಿಮಘಟ್ಟದಲ್ಲಿ ಭಾರೀ ಮಳೆ ಸಾಧ್ಯತೆ

ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…

11 hours ago