Advertisement
ಮೌನ ಮಾತಾದಾಗ

ಕೃಷಿ ಏಕೆ ಸೋಲುವುದಿಲ್ಲ….?

Share
ಮೊಳೆತೇಳುವ ಖುಷಿ ಬೀಜದ ಮಡಿಲಿಗೆ
ಹನಿಹನಿಸುತಲಿರೆ ಹಸಿರುಸಿರು
ಕುಲನೆಲವೆನ್ನದೆ ದಾಹವ ನೀಗುವ
ನದಿಯೊಲವಿಗೆ ಏತಕೆ ಹೆಸರೂ….”
ಹೌದಲ್ಲಾ, ಈ ಕವನದ ಸಾಲುಗಳೇ ಕೃಷಿಯೊಳಗಣ ಸಂತಸದ ಬದುಕನ್ನು ತೆರೆದು ತೋರುತ್ತಿಲ್ಲವೇ…
ಖಂಡಿತಾ ಕೃಷಿ ಸೋಲದು. ಕೃಷಿಯೆಂಬುದು ಪ್ರಕೃತಿಯೊಳಗೊಂದಾಗುವ ಕ್ರಿಯೆ. ತಾಯ ಅಪ್ಪುಗೆಯಲ್ಲಿ ಸೋಲಿದೆಯೇ.. ಖಂಡಿತಾ ಇಲ್ಲ. ಅದನ್ನು ಕಾಣುವ,ಅನುಭವಿಸುವ ಒಳ ದೃಷ್ಟಿ ಬೇಕಷ್ಟೆ….ಅಂದರೆ ತಾಯ ಮೇಲಿನ ಶ್ರದ್ಧೆ, ಪ್ರೀತಿಗೆ ಹೇಗೆ ಮಿತಿಯಿಲ್ಲವೋ ಅದೇ ರೀತಿಯ ಶ್ರದ್ಧೆ, ಪ್ರೀತಿ  ಕೃಷಿ, ಭೂಮಿ,ಪ್ರಕೃತಿಯ ಮೇಲೂ ಇದ್ದಾಗ ಸೋಲೇ ಇರದು.
ಕೃಷಿಯೆಂದರೆ ಪ್ರಕೃತಿಯ ನಡೆಯನ್ನು ಗಮನಿಸುತ್ತಾ ಪಡೆಯಬಹುದಾದ್ದನ್ನು ಪಡೆಯುವುದು,ಅಷ್ಟೇ,ಅಂದರೆ ಯಾವ ರೀತಿ ತಾಯ ಎದೆಹಾಲ ಕುಡಿಯುತ್ತಾ ಕುಡಿಯುತ್ತಾ ಮತ್ತಷ್ಟು ಎದೆಹಾಲಿನ ವೃದ್ದಿಗೆ ಪ್ರಚೋದನೆ ಆಗುವುದೋ ಅದೇ ರೀತಿಯಾಗಿ ಮುದ್ದುಗಾಲ ತುಳಿತ ಬೇಕಷ್ಟೇ ಹೊರತು ಘಾತಾನುಘಾತವಲ್ಲ. ಘರ್ಷಣೆ ಇಲ್ಲದಾಗ ಸೋಲಿದೆಯೇ….
ಕೃಷಿ ಎಂಬುದೊಂದು ಸಹಜ ಜೀವನ ಕಲೆ, ಅತಿಯಾದ ಆಸೆ ಆಕಾಂಕ್ಷೆಗಳು ಇರದ ಸ್ಥಿತಿ. ಹುಟ್ಟಿಸಿದ ದೇವರು ಹುಲ್ಲ ಮೇಯಿಸಲಾರನೇ ಅಂದರೆ ಇಷ್ಟೇ ಅಲ್ಲವೇ.ನಿನಗೇನು ಬೇಕೋ ಅಷ್ಟೇ ಹೊರತು ತಲೆತಲೆಮಾರುಗಳಿಗೆ ಕೂಡಿ ಹಾಕುವ ದಂಧೆಯಲ್ಲವಲ್ಲಾ….ಹಾಗಿದ್ದಾಗ ಸೋಲೆಲ್ಲಿದೆ.ಇಡೀ ಪ್ರಕೃತಿಯೇ ಒಂದು ಸರಣಿ ಸರಪಳಿ ಸೂತ್ರ. ಒಂದಕ್ಕೊಂದು ಪೂರಕ,ಒಂದು ಕೊಂಡಿ ಕಳಚಿದರೂ ಸೂತ್ರ ಹರಿದ ಗಾಳಿಪಟ.ನಿಜ ಕೃಷಿ ಅಂದರೆ ಸೂತ್ರದೊಳಗಿನ ಸಾರದ ಅನುಸರಣೆಯಲ್ಲವೇ….ಹಾಗಿದ್ದಾಗ ಸೋಲಿದೆಯೇ… ಈ ದಿನಗಳ ಅತೀ ಕಠಿಣ ಪರಿಸ್ಥಿತಿಯಲ್ಲೂ ತಲೆ ಎತ್ತಿ ನಿಂತ ಕ್ಷೇತ್ರ ಕೃಷಿ ಕ್ಷೇತ್ರವಲ್ಲವೇ….ಕಾರಣ ನಿರಾವಲಂಬನೆ… ತಾಯ ಅಪ್ಪುಗೆಯ ರಕ್ಷಣೆ. ಎಲ್ಲಾರು ಮಾಡುವುದು ಹೊಟ್ಟೆಗಾಗಿ,ಗೇಣು ಬಟ್ಟೆಗಾಗಿ  ಎಂಬುದರ ನಿಜಾರ್ಥ ಅರಿತು ಹಸಿವಿನ, ತೀರದ ದಾಹದ ಮಿತಿಯರಿತು ವರ್ತಿಸಿದಾಗ ಸೋಲ ಮುಖ ಕೃಷಿ ಲೋಕ ಕಂಡೀತೇ.
ಅದಕ್ಕೇ ಕೃಷಿ ಋಷಿ ಅನ್ನುವುದು… ಋಷಿಯಾದಾತ ಖಂಡಿತಾ ಶೋಷಿಸಲಾರ,ಅತಿ ಬಯಕೆಯ ದಾಹದ ದಾಸನಾಗಲಾರ,ತನ್ನ ಪಾಲಿಗೆ ಬಂದ ತುತ್ತನು ವರಪ್ರಸಾದವಾಗಿ ಸ್ವೀಕರಿಸಬಲ್ಲ. ಇಂತಹ ಪರಿಶುದ್ಧ ಮನದ ಬದುಕಿಗೆ ಸೋಲುಂಟೇ….ಇರಲಾರದು. ಅಂತಹ ಕೃಷಿ ಬದುಕಿನ ಅನುಭವದ ದಾಸನಾಗಲು ತಾಯ ಮಡಿಲಲ್ಲಿ ವಿನೀತನಾಗಿ “ಧಿಯೋ ಯೋ ನಃ ಪ್ರಚೋದಯಾತ್” ಎಂದು ಬೇಡಿಕೊಳ್ಳಬೇಕಷ್ಟೆ.ಶರಣರಿಗೆ ಸೋಲಿಲ್ಲ…
ಇದು ಸಹಸ್ರ ಸಹಸ್ರ ವರ್ಷಗಳ ಸತ್ಯ…..ಅದೇ ನಿಜ ಕೃಷಿ…ಇದನರಿತೊಡೆ ಕೃಷಿಗೆ ಸೋಲಿಲ್ಲ. ಸೋಲು ಗೆಲುವಿನ ಆಯ್ಕೆ ನಮ್ಮದು,ಅಷ್ಟೇ….
#ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

‌ ಪ್ರಗತಿಪರ ಕೃಷಿಕ, ಬರಹಗಾರ

Published by
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

Recent Posts

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

3 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

4 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

4 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

9 hours ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

1 day ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

1 day ago