Advertisement
ಸುದ್ದಿಗಳು

ಕೃಷಿ ಮೇಳ -2025 | ಕೃಷಿ – ಸ್ವಾವಲಂಬಿ ಭಾರತದ ಆಧಾರಸ್ತಂಭ

Share

ಭಾರತೀಯ ಕೃಷಿ ಮತ್ತು ಸಂಬಂಧಿತ ವಲಯಗಳಲ್ಲಿ ಅಭಿವೃದ್ಧಿಗಾಗಿ, ರೈತರ ಆದಾಯವನ್ನು ಹೆಚ್ಚಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವು ಯೋಜನೆಗಳನ್ನು ರೂಪಿಸಿದ್ದು, ಇವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕರೆ ನೀಡಿದ್ದಾರೆ.

ಧಾರವಾಡದ ಕೃಷಿ ವಿಜ್ಞಾನ ವಿಶ್ವ ವಿದ್ಯಾಲಯದ ವತಿಯಿಂದ ಆಯೋಜಿಸಲಾಗಿರುವ ಕೃಷಿ ಮೇಳ -2025 ಉದ್ಘಾಟಿಸಿ ಅವರು ಮಾತನಾಡಿದರು. ಕೃಷಿ ಕ್ಷೇತ್ರದಲ್ಲಿ ಯುವಕರು ಮತ್ತು ಮಹಿಳೆಯರು ಉದ್ಯಮಶೀಲತೆ ಮತ್ತು ನಾವೀನ್ಯತೆಯೊಂದಿಗೆ ಮುಂಬರುವ ಅವಶ್ಯಕತೆಯಿದೆ. ಕೃಷಿ ನವೋದ್ಯಮಗಳು, ಸಂಸ್ಕರಣಾ ಘಟಕಗಳು, ಕೃಷಿ ಪ್ರವಾಸೋದ್ಯಮದಂತಹ ಕ್ಷೇತ್ರಗಳು ಯುವಕರನ್ನು ಆಕರ್ಷಿಸುತ್ತಿವೆ ಎಂದರು. ಕೃಷಿ ಸ್ವಾವಲಂಬಿ ಭಾರತದ ಆಧಾರ ಸ್ತಂಭ, ರೈತರು ಸ್ವಾವಲಂಬಿಗಳಾದಾಗ ರಾಷ್ಟ್ರ ಸ್ವಾವಲಂಬಿಯಾಗುತ್ತದೆ. ಈ ನಿಟ್ಟಿನಲ್ಲಿ ಗುಣಮಟ್ಟದ ಬೀಜಗಳು ಉತ್ತಮ ತಂತ್ರಜ್ಞಾನ, ನ್ಯಾಯಯುತ ಬೆಲೆ ಮತ್ತು ಮಾರುಕಟ್ಟೆಗೆ ನೇರ ಪ್ರವೇಶ ಮುಖ್ಯವಾಗುತ್ತವೆ ಎಂದರು.

ಧಾರವಾಡದಲ್ಲಿ ಕೃಷಿ ವಿಶ್ವವಿದ್ಯಾಲಯದಲ್ಲಿ  ಆರಂಭಗೊಂಡಿರುವ ಕೃಷಿ ಮೇಳದಲ್ಲಿ ಲಕ್ಷಾಂತರ ಜನರು ಭೇಟಿ ನೀಡುತ್ತಿದ್ದಾರೆ. ಈ ಬಾರಿ ಫಲ ಪುಷ್ಪ ಪ್ರದರ್ಶನದಲ್ಲಿ ಕಾಳುಗಳಲ್ಲಿ, ಸಿರಿದ್ಯಾನಗಳಲ್ಲಿ ಯಕ್ಷಗಾನ ಕಲಾಕೃತಿ ಮೂಡಿ ಬಂದು ಜನರನ್ನು ಆಕರ್ಷಿಸಿದೆ.  ಈ ಬಾರಿಯ ಕೃಷಿ ಮೇಳದ ಪುಷ್ಪ ಪ್ರದರ್ಶನದಲ್ಲಿ ಹೂವಿನ ಲೋಕವೇ ಅನಾವರಣಗೊಂಡಿದೆ. ಮತ್ತೊಂದೆಡೆ 20 ಕ್ಕೂ ಹೆಚ್ಚು ಹಣ್ಣುಗಳು, ತರಕಾರಿಗಳು  ಪ್ರದರ್ಶನದಲ್ಲಿ ಕಂಡುಬಂದವು ವಿಶೇಷವಾಗಿ, ಕಲ್ಲಗಂಡಿ ಹಣ್ಣಿನಲ್ಲಿ ದೇಶದ ಪ್ರಮುಖ ಗಣ್ಯರಾದ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ, ಸ್ವಾಮಿ ವಿವೇಕಾನಂದ, ಸುಭಾಷಚಂದ್ರ ಬೋಸ್, ಡಾ. ಎ.ಪಿ.ಜೆ. ಅಬ್ದುಲ್ ಕಲಾಂ, ನಟ ಪುನೀತ್ ರಾಜ್‌ಕುಮಾರ್ ಸೇರಿದಂತೆ ವಿವಿಧ ಗಣ್ಯರ ಪ್ರತಿಮೆಗಳು ಕಂಗೊಳಿಸುತ್ತಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

2 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

10 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

13 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

18 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

1 day ago