Advertisement
ಸುದ್ದಿಗಳು

ಕೃಷಿ ಮೇಳ -2025 | ಕೃಷಿ – ಸ್ವಾವಲಂಬಿ ಭಾರತದ ಆಧಾರಸ್ತಂಭ

Share

ಭಾರತೀಯ ಕೃಷಿ ಮತ್ತು ಸಂಬಂಧಿತ ವಲಯಗಳಲ್ಲಿ ಅಭಿವೃದ್ಧಿಗಾಗಿ, ರೈತರ ಆದಾಯವನ್ನು ಹೆಚ್ಚಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವು ಯೋಜನೆಗಳನ್ನು ರೂಪಿಸಿದ್ದು, ಇವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕರೆ ನೀಡಿದ್ದಾರೆ.

ಧಾರವಾಡದ ಕೃಷಿ ವಿಜ್ಞಾನ ವಿಶ್ವ ವಿದ್ಯಾಲಯದ ವತಿಯಿಂದ ಆಯೋಜಿಸಲಾಗಿರುವ ಕೃಷಿ ಮೇಳ -2025 ಉದ್ಘಾಟಿಸಿ ಅವರು ಮಾತನಾಡಿದರು. ಕೃಷಿ ಕ್ಷೇತ್ರದಲ್ಲಿ ಯುವಕರು ಮತ್ತು ಮಹಿಳೆಯರು ಉದ್ಯಮಶೀಲತೆ ಮತ್ತು ನಾವೀನ್ಯತೆಯೊಂದಿಗೆ ಮುಂಬರುವ ಅವಶ್ಯಕತೆಯಿದೆ. ಕೃಷಿ ನವೋದ್ಯಮಗಳು, ಸಂಸ್ಕರಣಾ ಘಟಕಗಳು, ಕೃಷಿ ಪ್ರವಾಸೋದ್ಯಮದಂತಹ ಕ್ಷೇತ್ರಗಳು ಯುವಕರನ್ನು ಆಕರ್ಷಿಸುತ್ತಿವೆ ಎಂದರು. ಕೃಷಿ ಸ್ವಾವಲಂಬಿ ಭಾರತದ ಆಧಾರ ಸ್ತಂಭ, ರೈತರು ಸ್ವಾವಲಂಬಿಗಳಾದಾಗ ರಾಷ್ಟ್ರ ಸ್ವಾವಲಂಬಿಯಾಗುತ್ತದೆ. ಈ ನಿಟ್ಟಿನಲ್ಲಿ ಗುಣಮಟ್ಟದ ಬೀಜಗಳು ಉತ್ತಮ ತಂತ್ರಜ್ಞಾನ, ನ್ಯಾಯಯುತ ಬೆಲೆ ಮತ್ತು ಮಾರುಕಟ್ಟೆಗೆ ನೇರ ಪ್ರವೇಶ ಮುಖ್ಯವಾಗುತ್ತವೆ ಎಂದರು.

ಧಾರವಾಡದಲ್ಲಿ ಕೃಷಿ ವಿಶ್ವವಿದ್ಯಾಲಯದಲ್ಲಿ  ಆರಂಭಗೊಂಡಿರುವ ಕೃಷಿ ಮೇಳದಲ್ಲಿ ಲಕ್ಷಾಂತರ ಜನರು ಭೇಟಿ ನೀಡುತ್ತಿದ್ದಾರೆ. ಈ ಬಾರಿ ಫಲ ಪುಷ್ಪ ಪ್ರದರ್ಶನದಲ್ಲಿ ಕಾಳುಗಳಲ್ಲಿ, ಸಿರಿದ್ಯಾನಗಳಲ್ಲಿ ಯಕ್ಷಗಾನ ಕಲಾಕೃತಿ ಮೂಡಿ ಬಂದು ಜನರನ್ನು ಆಕರ್ಷಿಸಿದೆ.  ಈ ಬಾರಿಯ ಕೃಷಿ ಮೇಳದ ಪುಷ್ಪ ಪ್ರದರ್ಶನದಲ್ಲಿ ಹೂವಿನ ಲೋಕವೇ ಅನಾವರಣಗೊಂಡಿದೆ. ಮತ್ತೊಂದೆಡೆ 20 ಕ್ಕೂ ಹೆಚ್ಚು ಹಣ್ಣುಗಳು, ತರಕಾರಿಗಳು  ಪ್ರದರ್ಶನದಲ್ಲಿ ಕಂಡುಬಂದವು ವಿಶೇಷವಾಗಿ, ಕಲ್ಲಗಂಡಿ ಹಣ್ಣಿನಲ್ಲಿ ದೇಶದ ಪ್ರಮುಖ ಗಣ್ಯರಾದ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ, ಸ್ವಾಮಿ ವಿವೇಕಾನಂದ, ಸುಭಾಷಚಂದ್ರ ಬೋಸ್, ಡಾ. ಎ.ಪಿ.ಜೆ. ಅಬ್ದುಲ್ ಕಲಾಂ, ನಟ ಪುನೀತ್ ರಾಜ್‌ಕುಮಾರ್ ಸೇರಿದಂತೆ ವಿವಿಧ ಗಣ್ಯರ ಪ್ರತಿಮೆಗಳು ಕಂಗೊಳಿಸುತ್ತಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

41 minutes ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

18 hours ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

1 day ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

1 day ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

1 day ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

1 day ago