Advertisement
ಸುದ್ದಿಗಳು

ಕೃಷಿ ಮೇಳ -2025 | ಕೃಷಿ – ಸ್ವಾವಲಂಬಿ ಭಾರತದ ಆಧಾರಸ್ತಂಭ

Share

ಭಾರತೀಯ ಕೃಷಿ ಮತ್ತು ಸಂಬಂಧಿತ ವಲಯಗಳಲ್ಲಿ ಅಭಿವೃದ್ಧಿಗಾಗಿ, ರೈತರ ಆದಾಯವನ್ನು ಹೆಚ್ಚಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವು ಯೋಜನೆಗಳನ್ನು ರೂಪಿಸಿದ್ದು, ಇವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕರೆ ನೀಡಿದ್ದಾರೆ.

ಧಾರವಾಡದ ಕೃಷಿ ವಿಜ್ಞಾನ ವಿಶ್ವ ವಿದ್ಯಾಲಯದ ವತಿಯಿಂದ ಆಯೋಜಿಸಲಾಗಿರುವ ಕೃಷಿ ಮೇಳ -2025 ಉದ್ಘಾಟಿಸಿ ಅವರು ಮಾತನಾಡಿದರು. ಕೃಷಿ ಕ್ಷೇತ್ರದಲ್ಲಿ ಯುವಕರು ಮತ್ತು ಮಹಿಳೆಯರು ಉದ್ಯಮಶೀಲತೆ ಮತ್ತು ನಾವೀನ್ಯತೆಯೊಂದಿಗೆ ಮುಂಬರುವ ಅವಶ್ಯಕತೆಯಿದೆ. ಕೃಷಿ ನವೋದ್ಯಮಗಳು, ಸಂಸ್ಕರಣಾ ಘಟಕಗಳು, ಕೃಷಿ ಪ್ರವಾಸೋದ್ಯಮದಂತಹ ಕ್ಷೇತ್ರಗಳು ಯುವಕರನ್ನು ಆಕರ್ಷಿಸುತ್ತಿವೆ ಎಂದರು. ಕೃಷಿ ಸ್ವಾವಲಂಬಿ ಭಾರತದ ಆಧಾರ ಸ್ತಂಭ, ರೈತರು ಸ್ವಾವಲಂಬಿಗಳಾದಾಗ ರಾಷ್ಟ್ರ ಸ್ವಾವಲಂಬಿಯಾಗುತ್ತದೆ. ಈ ನಿಟ್ಟಿನಲ್ಲಿ ಗುಣಮಟ್ಟದ ಬೀಜಗಳು ಉತ್ತಮ ತಂತ್ರಜ್ಞಾನ, ನ್ಯಾಯಯುತ ಬೆಲೆ ಮತ್ತು ಮಾರುಕಟ್ಟೆಗೆ ನೇರ ಪ್ರವೇಶ ಮುಖ್ಯವಾಗುತ್ತವೆ ಎಂದರು.

ಧಾರವಾಡದಲ್ಲಿ ಕೃಷಿ ವಿಶ್ವವಿದ್ಯಾಲಯದಲ್ಲಿ  ಆರಂಭಗೊಂಡಿರುವ ಕೃಷಿ ಮೇಳದಲ್ಲಿ ಲಕ್ಷಾಂತರ ಜನರು ಭೇಟಿ ನೀಡುತ್ತಿದ್ದಾರೆ. ಈ ಬಾರಿ ಫಲ ಪುಷ್ಪ ಪ್ರದರ್ಶನದಲ್ಲಿ ಕಾಳುಗಳಲ್ಲಿ, ಸಿರಿದ್ಯಾನಗಳಲ್ಲಿ ಯಕ್ಷಗಾನ ಕಲಾಕೃತಿ ಮೂಡಿ ಬಂದು ಜನರನ್ನು ಆಕರ್ಷಿಸಿದೆ.  ಈ ಬಾರಿಯ ಕೃಷಿ ಮೇಳದ ಪುಷ್ಪ ಪ್ರದರ್ಶನದಲ್ಲಿ ಹೂವಿನ ಲೋಕವೇ ಅನಾವರಣಗೊಂಡಿದೆ. ಮತ್ತೊಂದೆಡೆ 20 ಕ್ಕೂ ಹೆಚ್ಚು ಹಣ್ಣುಗಳು, ತರಕಾರಿಗಳು  ಪ್ರದರ್ಶನದಲ್ಲಿ ಕಂಡುಬಂದವು ವಿಶೇಷವಾಗಿ, ಕಲ್ಲಗಂಡಿ ಹಣ್ಣಿನಲ್ಲಿ ದೇಶದ ಪ್ರಮುಖ ಗಣ್ಯರಾದ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ, ಸ್ವಾಮಿ ವಿವೇಕಾನಂದ, ಸುಭಾಷಚಂದ್ರ ಬೋಸ್, ಡಾ. ಎ.ಪಿ.ಜೆ. ಅಬ್ದುಲ್ ಕಲಾಂ, ನಟ ಪುನೀತ್ ರಾಜ್‌ಕುಮಾರ್ ಸೇರಿದಂತೆ ವಿವಿಧ ಗಣ್ಯರ ಪ್ರತಿಮೆಗಳು ಕಂಗೊಳಿಸುತ್ತಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎಳೆಅಡಿಕೆ ಮಾತ್ರವಲ್ಲ, ಬಲಿತ ಅಡಿಕೆಯೂ ಒಡೆದು ಬೀಳುತ್ತಿದೆ…! ಕಾರಣ ಏನು?

ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…

35 minutes ago

ಜಾಗತಿಕ ಮಾರುಕಟ್ಟೆಯಲ್ಲಿ ರಬ್ಬರ್‌ಗೆ ಐತಿಹಾಸಿಕ ದರ – ಕೆಜಿಗೆ ₹300 ಗಡಿ ದಾಟಿದ ಬೆಲೆ, ಭಾರತದಲ್ಲಿ RSS-4 ರಬ್ಬರ್‌ ಗೆ ಏರಿಕೆ

ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…

7 hours ago

ಹಣ್ಣುಗಳಲ್ಲಿ ಕೀಟನಾಶಕ ಅವಶೇಷಗಳ ಭಯವೇ? ನೈಸರ್ಗಿಕವಾಗಿ ಸ್ವಚ್ಛಗೊಳಿಸುವ ಸರಳ ವಿಧಾನಗಳು

ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…

7 hours ago

Facebook, Instagram ಏಕಾಏಕಿ ಸ್ಥಗಿತ – ಜಾಗತಿಕವಾಗಿ ಲಕ್ಷಾಂತರ ಬಳಕೆದಾರರಿಗೆ ತೊಂದರೆ

ಮೆಟಾ ಒಡೆತನದ Facebook, Instagram ಮತ್ತು Messenger ಸೇವೆಗಳು ಜಾಗತಿಕ ಮಟ್ಟದಲ್ಲಿ ತಾಂತ್ರಿಕ…

18 hours ago

ಉತ್ತರ ಪ್ರದೇಶದಲ್ಲಿ ಅಡಿಕೆ ಮೇಲಿನ ಮಂಡಿ ತೆರಿಗೆ ರದ್ದುಪಡಿಸಿ – ಯೋಗಿ ಆದಿತ್ಯನಾಥ್‌ಗೆ ಕ್ಯಾಂಪ್ಕೊ ಮನವಿ

ಉತ್ತರ ಪ್ರದೇಶದಲ್ಲಿ ಅಡಿಕೆ ವ್ಯಾಪಾರದ ಮೇಲೆ ವಿಧಿಸಲಾಗುತ್ತಿರುವ ಮಂಡಿ ತೆರಿಗೆಯನ್ನು ರದ್ದುಗೊಳಿಸುವಂತೆ ಕ್ಯಾಂಪ್ಕೊ…

19 hours ago