Advertisement

ಕೃಷಿಯಲ್ಲಿ ಆವಿಷ್ಕಾರ | 23 ರ ಯುವಕನ ಕೃಷಿ ಸಾಧನೆ – ತೋಟದೊಳಗೆ ಓಡುವ ಮಿನಿ ಟಿಪ್ಪರ್‌

Share
ಕೃಷಿ ಕ್ಷೇತ್ರ ಬೆಳವಣಿಗೆ ಕಾಣಬೇಕು ಎಂಬುದು ಎಲ್ಲರ ಅಭಿಪ್ರಾಯ. ಕೊರೋನೋತ್ತರದಲ್ಲಿ ಕೃಷಿಯತ್ತ ಯುವಕರ ಆಕರ್ಷಣೆಯೂ ಹೆಚ್ಚಾಗಿದೆ. ಇದು  ಕೃಷಿ ಕ್ಷೇತ್ರ ಬೆಳವಣಿಗೆಗೂ ಕಾರಣವಾಗಿದೆ. ಹೊಸ ಆವಿಷ್ಕಾರಗಳು ಕೃಷಿಯಲ್ಲಿ  ಕಾಣತೊಡಗಿದೆ. ಅದರ ಒಂದು ಭಾಗವಾಗಿ 23 ವರ್ಷದ ಯುವಕ ಮಿನಿ ಟಿಪ್ಪರ್‌ ಮಾಡಿದ್ದಾನೆ, ಇದು ತೋಟದ ನಡುವೆ ಆರಾಮವಾಗಿ ಓಡಾಡುತ್ತದೆ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸವಣೂರು ಸಮೀಪದ ಪಾಲ್ತಾಡಿ ಗ್ರಾಮದ ಬಂಬಿಲ ನಿವಾಸಿ ಪುರುಷೋತ್ತಮ್ ಎಂಬ 23ರ ಯುವಕ ಸಣ್ಣ ಟಿಪ್ಪರ್ ನ ಆವಿಷ್ಕಾರ ಮಾಡಿದ ಯುವಕ. ಸ್ಕೂಟರನ್ನು ವಿಶೇಷ ವಿನ್ಯಾಸ ಮಾಡಿ  ಟಿಪ್ಪರ್ ಸಿದ್ಧ ಮಾಡಲಾಗಿದೆ. ತೋಟದ ನಡುವೆ ಸಾಗುವ ಈ ವಾಹನವನ್ನು ಕೃಷಿಯ ಎಲ್ಲಾ ಕಾರ್ಯಗಳಿಗೂ ಬಳಕೆ ಮಾಡಬಹುದಾಗಿದೆ.
ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ವಿವಿಧ ಕಡೆಗಳಲ್ಲಿ ಈಗಾಗಲೇ ಕಾರ್ಮಿಕರ ಕೊರತೆಯಿಂದ ಕೃಷಿ ಬೆಳವಣಿಗೆ ಕುಂಠಿತವಾಗುತ್ತಿದೆ. ಈ ಸಂದರ್ಭದಲ್ಲಿ ಸ್ವಾವಲಂಬೆಯ ಕಡೆಗೆ ಕೃಷಿಕರು ಮನಸ್ಸು ಮಾಡಲೇಬೇಕಿದೆ. ಇಂತಹ ಸಂದರ್ಭದಲ್ಲಿ  ಯುವಕರ ಇಂತಹ ಆವಿಷ್ಕಾರಗಳು ನೆರವಾಗುತ್ತದೆ.  ಕೆಲಸದಾಳುಗಳ ಕೊರತೆಯಿದ್ದರೂ ಕೃಷಿ ಕೆಲಸ ಕಾರ್ಯಗಳನ್ನು ಸರಾಗವಾಗಿ ಮಾಡಬಹುದಾಗಿದೆ. ಈ ಹಿಂದೆ ಅಟೋವನ್ನು, ವಿವಿಧ ವಿನ್ಯಾಸ ಮೋಟೋ ಕಾರ್ಟ್‌ ಗಳನ್ನು ತೋಟದೊಳಗೆ ಓಡಿಸುತ್ತಿದ್ದ ಕೃಷಿಕರಿಗೆ ಈಗ ಇನ್ನೊಂದು ತಂತ್ರ ಸಿಕ್ಕಿದಂತಾಗಿದೆ.
ಇಲ್ಲಿ 130 ಸಿಸಿ ಇಂಜಿನ್ ಹೊಂದಿರುವ ಸ್ಕೂಟರ್ ಅನ್ನು ತನಗೆ ಬೇಕಾದ ರೀತಿಯಲ್ಲಿ ಮಾರ್ಪಾಡು ಮಾಡಿಕೊಂಡಿರುವ ಈ ಯುವಕ  ಹಿಂದೆ ಮುಂದೆ ಸಲೀಸಾಗಿ ಸಾಗುವಂತೆ ಮಾಡಲು ಗೇರ್ ಬಾಕ್ಸ್ ಅಳವಡಿಸಲಾಗಿದೆ. ಅಲ್ಲದೆ ಇದಕ್ಕೆ ರಿವರ್ಸ್ ಗೇರ್ ಅನ್ನೂ ಫಿಟ್ ಮಾಡಲಾಗಿದ್ದು, 3 ಫೀಟ್ ಅಗಲದ ಬಾಡಿಯನ್ನೂ ನಿರ್ಮಿಸಲಾಗಿದ್ದು, ಎರಡು ಕ್ವಿಂಟಾಲ್ ತೂಕ ಹೊರುವ ಸಾಮರ್ಥ್ಯವನ್ನೂ ಹೊಂದಿದೆ.
ಪಾಲ್ತಾಡಿ ಗ್ರಾಮದ  ಬಂಬಿಲ ನಿವಾಸಿ ಬಾಬು ಶೆಟ್ಟಿ ಹಾಗೂ ಯಮುನಾ ದಂಪತಿಯ ಮಗನಾಗಿರುವ ಪುರುಷೋತ್ತಮ ನಿಂತಿಕಲ್ಲು ಕೆ.ಎಸ್.ಗೌಡ ಐಟಿಐ ನಲ್ಲಿ ಓದಿ ಇದೀಗ ಸದ್ಯಕ್ಕೆ ಉಜಿರೆಯ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಾಜೆಕ್ಟ್ ವರ್ಕ್ ಮಾಡಿಕೊಂಡಿದ್ದಾರೆ. ಈ ಆವಿಷ್ಕಾರವನ್ನು   ಶಾಸಕ ಅಂಗಾರರಿಂದ ಮೆಚ್ಚುಗೆ ಸುಳ್ಯ ಶಾಸಕ ಅಂಗಾರ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಗಿಡ ಹಾಗೂ ಇತರ ಬೆಳೆಗಳಿರುವ ತೋಟದ ಮಧ್ಯೆ  ಈ ವಾಹನ ಸರಾಗವಾಗಿ ಓಡುತ್ತದೆ ಎಂದು ಹೇಳುತ್ತಾರೆ  ಪುರುಷೋತ್ತಮ್ ಬಂಬಿಲ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

4 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

5 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

7 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

8 hours ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

21 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

1 day ago