ಕೃಷಿಕನ ಸಂಶೋಧನೆಗೆ ಸಿಗುವ ಸಂಮಾನ ಯಾವುದು ? | ಕೃಷಿಕ ಪವನ ವೆಂಕಟ್ರಮಣ ಭಟ್‌ ಹೇಳಿದ್ದು ಹೀಗೆ.. | ಸಂಮಾನ ಮಾಡದೇ ಇದ್ದರೂ ಅವಮಾನ ಮಾಡಬೇಡಿ…. ! |

October 9, 2022
4:30 PM
ಕೃಷಿಕರು ಹಲವು ಸಂಶೋಧನೆಗಳನ್ನು, ಆವಿಷ್ಕಾರಗಳನ್ನು ಮಾಡುತ್ತಾರೆ. ಹಲವು ಸಂದರ್ಭಗಳಲ್ಲಿ  ಅವುಗಳನ್ನು ತಾತ್ಸಾರ ಭಾವನೆಯಿಂದ ಕಾಣುತ್ತಾರೆ. ಈ ನಡುವೆಯೂ ಹಲವು ಕಡೆ ಸನ್ಮಾನಗಳೂ ನಡೆಯುತ್ತದೆ. ಇಂತಹ ಸಂದರ್ಭಗಳಲ್ಲಿ ಕೃಷಿಕರ ಭಾವನೆ ಹೇಗಿರುತ್ತದೆ.. ? ಈ ಬಗ್ಗೆ ಕೃಷಿಕ ಪವನ ವೆಂಕಟ್ರಮಣ ಭಟ್‌ ಬಹಳ ಮಾರ್ಮಿಕವಾಗಿ ಮಾತನಾಡಿದ್ದಾರೆ..

ಭಾರತೀಯ ಕಿಸಾನ್ ಸಂಘದ ವತಿಯಿಂದ ಸುಳ್ಯ ತಾಲೂಕು ಘಟಕದ ವತಿಯಿಂದ ಬಲರಾಮ ಜಯಂತಿ ಹಾಗೂ ವಾರ್ಷಿಕೋತ್ಸವ ಕಾರ್ಯಕ್ರಮ ಸುಳ್ಯ ತಾಲೂಕಿನ ಬಾಳಿಲ ವಿದ್ಯಾಬೋಧಿನೀ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಯಿತು‌. ಈ ಸಂದರ್ಭ  ಪ್ರಗತಿಪರ ಕೃಷಿಕ ವೆಂಕಟ್ರಮಣ ಭಟ್ ಪವನ, ಪ್ರಗತಿಪರ ಹೈನುಗಾರರಾದ ಶಾಂಭವಿ ಎನ್‌ ರೈ ಪಿಜಾವು ಅವರನ್ನು ಸನ್ಮಾನಿಸಲಾಯಿತು. 

   

ಸನ್ಮಾನ ಸ್ವೀಕರಿಸಿದ ಬಳಿಕ ಮಾತನಾಡಿದ ಕೃಷಿಕ ಪವನ ವೆಂಕಟ್ರಮಣ ಭಟ್, ಕೃಷಿ ಸಂಶೋಧನೆ, ಆವಿಷ್ಕಾರಗಳು ನಿರಂತರ. ಹಾಗಾಗಿ ಸನ್ಮಾನಗಳಿಗಿಂತಲೂ ಗುರುತಿಸುವಿಕೆ ಕೃಷಿಕರಿಗೆ ಬಹಳ ಖುಷಿ ಕೊಡುತ್ತದೆ. ಪ್ರತೀ ಕೃಷಿಕನ ಸಾಧನೆ, ಆವಿಷ್ಕಾರಗಳು ಮುಂದುವರಿಯಬೇಕು. ಇದಕ್ಕಾಗಿ ಹೀಗೆ ಗುರುತಿಸುವ ಮೂಲಕ ಇನ್ನೊಬ್ಬ ಕೃಷಿಕನಿಗೆ ಸಂಶೋಧನೆಗೆ, ಆವಿಷ್ಕಾರಕ್ಕೆ “ಖೋ..” ನೀಡುವ ಕೆಲಸ ಮಾಡುವುದಷ್ಟೇ ಆಗಿದೆ. ಊರಿನ ಮಂದಿ ಗುರುತಿಸಿದಾಗ ಸಂಶೋಧಕನಿಗೆ ಖುಷಿ ಹೆಚ್ಚಾಗುತ್ತದೆ. ಯಾವತ್ತೂ ಕೃಷಿಕರಿಗೆ ಸನ್ಮಾನ ಮಾಡುವುದಕ್ಕಿಂತಲೂ ಕೃಷಿಕನ ಆವಿಷ್ಕಾರಗಳಿಗೆ ಹಾಗೂ ಕೃಷಿಕನಿಗೆ ಅವಮಾನ ಮಾಡಬಾರದು ಎಂದರು.

ಈ ಹಿಂದಿನ ತಮ್ಮ ಅನುಭವ ಹೇಳಿಕೊಂಡ ಪವನ ವೆಂಕಟ್ರಮಣ ಭಟ್‌, ಹಿಂದೆ ನಾನು ರಾಟೆಯೊಂದನ್ನು ಅಭಿವೃದ್ಧಿ ಪಡಿಸಿದ್ದೆ. ಇದಕ್ಕಾಗಿ ನನಗೆ “ರಾಟೆ ಭಟ್ರು ” ಅಂತ ಹೆಸರಿಟ್ಟರು. ಇದನ್ನು ಶ್ರೀಪಡ್ರೆ ಒಂದು ಕಾರ್ಯಕ್ರಮದಲ್ಲಿ ಖಂಡಿಸಿದರು. ಇದನ್ನೇ “ರಟ್ಟೆ ಭಟ್ರು” ಎಂದು ಏಕೆ ಈ ಸಮಾಜವು ಗೌರವಿಸಬಾರದು ? ಎಂದು ಪ್ರಶ್ನಿಸಿದರು. ಯಾವತ್ತೂ ಒಬ್ಬ ಕೃಷಿಕನ ಸಣ್ಣ ಅಧ್ಯಯನ, ಆವಿಷ್ಕಾರಗಳೂ ಮಹತ್ವ ಪಡೆಯುತ್ತವೆ. ಹೀಗೇ ಅವಮಾನ ಮಾಡುವುದರಿಂದಲೇ ಕೃಷಿ ಮಾಹಿತಿಗಳು ವಿನಿಮಯವಾಗುತ್ತಿಲ್ಲ ಎಂದು ಶ್ರೀಪಡ್ರೆ ಹೇಳಿರುವುದನ್ನು ಪವನ ವೆಂಕಟ್ರಮಣ ಭಟ್‌ ಉಲ್ಲೇಖಿಸಿ ಹೇಳಿದರು.  ಕೃಷಿಕರ ಆವಿಷ್ಕಾರಗಳು ಸಣ್ಣದೇ ಇದ್ದರೂ ಅದನ್ನು ಮುಂದಿನ ಪೀಳಿಗೆಯೂ ಗೌರವಿಸಬೇಕು, ಅವಮಾನ ಮಾಡಬಾರದು ಎಂದರು.

ತಮ್ಮದೇ ಇನ್ನೊಂದು ಅನುಭವ ಹೇಳಿದ ಪವನ ವೆಂಕಟ್ರಮಣ ಭಟ್‌, ಪುತ್ತೂರಿನಲ್ಲಿ ಯಂತ್ರ ಮೇಳ ನಡೆದಿತ್ತು. ಈ ಸಂದರ್ಭ ಮರ ಏರುವ ಪುಟ್ಟ ಯಂತ್ರ ಮಾಡಿದ್ದೆ. ಇದರ ಪ್ರಾತ್ಯಕ್ಷಿಕೆಯ ಸಂದರ್ಭ ತಲೆಗೆ ತಾಗಿತ್ತು, ರಕ್ತ ಸುರಿಯುತ್ತಿತ್ತು. ಈ ನಡುವೆಯೂ ಮತ್ತೆ ಯಂತ್ರದ ಮೂಲಕ ಏರುವ ಕೆಲಸ ಮಾಡುತ್ತಿದ್ದಾಗ ಅಲ್ಲಿರುವ ಕೆಲವು ಯುವತಿಯರು ಗೇಲಿ ಮಾಡಿದರು. ಇಷ್ಟು ರಕ್ತ ಸುರಿಯುತ್ತಿದ್ದರೂ ಮರ ಏರುವುದು ಏಕೆ, ನಿಲ್ಲಿಸಿ ಎಂದರು. ಇದಕ್ಕೆ ಉತ್ತರಿಸಿದ್ದು ಹೀಗೆ, “ಪ್ರತೀ ಮಹಿಳೆ ಹೆರಿಗೆಯಾಗುತ್ತದೆ. ಆದರೆ ಸಣ್ಣ ಪ್ರಮಾಣದಲ್ಲಿ ಹೆರಿಗೆಯ ವೇಳೆ ಮಹಿಳೆ ಸಾವನ್ನಪ್ಪುತ್ತಾರೆ. ಒಂದು ವೇಳೆ ನಿಮ್ಮೆಲ್ಲರ ತಾಯಿಯೂ ಅದೇ ಯೋಚಿಸಿದ್ದರೆ ಯಾರೂ ಹುಟ್ಟುತ್ತಿರಲಿಲ್ಲ. ಇಲ್ಲೂ ಹಾಗೆಯೇ ಏನಾದರೂ ಆದರೆ ನನಗೇ ಆಗಲಿ, ಆದರೆ ವಿಶ್ವಾಸ ಇದೆ, ಅದು ನನ್ನ ಸಂಶೋಧನೆ” ಎಂದು ಹೇಳಿದ್ದೆ ಎಂದು ಪವನ ವೆಂಕಟ್ರಮಣ ಭಟ್‌ ಬಹಳ ಮಾರ್ಮಿಕವಾಗಿ ಹೇಳಿದರು.

ಕೃಷಿಯಲ್ಲಿ ಕೃಷಿಕನ ಸಂಶೋಧನೆಗೂ ಮಹತ್ವ ನೀಡಿ. ಅದು ಪುಟ್ಟ ಸಂಶೋಧನೆಯೇ ಆದರೂ ಅದಕ್ಕೆ ಮಹತ್ವ ಅಗತ್ಯ ಇದೆ. ಪ್ರತೀ ಕೃಷಿಕನ ಸಂಶೋಧನೆ, ಆವಿಷ್ಕಾರಗಳಿಗೆ ಗೌರವ, ಮಾನ ಕೊಡದೇ ಇದ್ದರೂ ಪರವಾಗಿಲ್ಲ, ಆದರೆ ಅವಮಾನ ಮಾತ್ರಾ ಮಾಡಬಾರದು ಎಂದು ಸಂದೇಶ ನೀಡಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror