Political mirror

ರೈತನ ಕಲ್ಯಾಣಕ್ಕಾಗಿಯೇ ಕೇಂದ್ರ ಸರ್ಕಾರ ಹೊಸ ಕೃಷಿ ಮಸೂದೆ | ಬಿಜೆಪಿ ರೈತ ಮೋರ್ಚಾ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಬಿಜೆಪಿ ನೇತೃತ್ವದ ಪ್ರಧಾನಿ ನರೇಂದ್ರ ಮೋದಿ ಸರಕಾರವು ಜಾರಿಗೆ ತಂದಿರುವ ಕೃಷಿಕರ ಮತ್ತು ಕೃಷಿ ಕ್ಷೇತ್ರದ ಸುಧಾರಣೆ ಮಾಡಲಿರುವ ಮಹತ್ವದ ಕಾಯ್ದೆಯನ್ನು ದ.ಕ. ಜಿಲ್ಲಾ ಬಿಜೆಪಿ ರೈತಮೋರ್ಚಾ ಸ್ವಾಗತಿಸಿ ಪ್ರಧಾನಿ ಮೋದಿ ಹಾಗೂ ಕೇಂದ್ರ ಸರಕಾರವನ್ನು ಅಭಿನಂದಿಸಿದೆ.
ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಬಿಜೆಪಿ ರೈತಮೋರ್ಚಾ ಉಪಾಧ್ಯಕ್ಷ ಎ.ವಿ. ತೀರ್ಥರಾಮ, ರೈತನ ಕಲ್ಯಾಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರ ಹಲವಾರು ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದೆ. ದೇಶದ ಕೃಷಿ ಉತ್ಪನ್ನಕ್ಕಾಗಿ ಮಾರುಕಟ್ಟೆ ಸೃಷ್ಠಿಸುವ ಇರಾದೆಯಿಂದ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸುವ ಸಾಧ್ಯತೆ ಇರುವ ನೂತನ ಕೃಷಿ ಕಾಯ್ದೆಯನ್ನು ಜಾರಿಗೆ ತಂದಿದೆ. ರೈತರ ಉತ್ಪನ್ನ, ವ್ಯಾಪಾರ ಮತ್ತು ವಾಣಿಜ್ಯ ಕಾಯ್ದೆಯು ರೈತರಿಗೆ ಮುಕ್ತವಾಗಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುವ ಅವಕಾಶ. ಅದೇ ರೀತಿ ವ್ಯಾಪಾರಿಗಳಿಗೂ ತಮಗೆ ಬೇಕಾದ ಕೃಷಿ ಉತ್ಪನ್ನಗಳನ್ನು ಮುಕ್ತವಾಗಿ ಖರೀದಿಸುವ ಅವಕಾಶವನ್ನು ಕಲ್ಪಿಸಲಾಗಿದೆ. ರೈತನ ಆರ್ಥಿಕ ಅಭಿವೃದ್ಧಿಯ ದೃಷ್ಠಿಕೋನದಿಂದ ಈ ಕಾಯ್ದೆಯನ್ನು ಕೇಂದ್ರ ಸರಕಾರ ಜಾರಿ ಮಾಡಲು ಉದ್ದೇಶಿಸಿದೆ.
ರೈತರ ಕಲ್ಯಾಣ ಮತ್ತು ರಕ್ಷಣೆ, ಬೆಲೆ ಭರವಸೆ ಮತ್ತು ಸೇವಾ ಒಪ್ಪಂದವನ್ನು ಈ ಮಸೂದೆ ಕಾರ್ಯಗತ ಮಾಡಲಿದೆ. ನ್ಯಾಯದರದ ಚೌಕಟ್ಟಿನೊಳಗೆ ಕೃಷಿ ಉತ್ಪನ್ನಗಳ ಮಾರಾಟ ಹಾಗೂ ಕೃಷಿ ಸೇವೆಗಳನ್ನು ಒದಗಿಸುವ ಗುರಿಯನ್ನು ಈ ಕಾಯ್ದೆ ಹೊಂದಿದೆ. ಈ ಮಸೂದೆಯಿಂದ ಕೃಷಿ ವಲಯದಲ್ಲಿ ಮಹತ್ವದ ಸುಧಾರಣೆಯಾಗಲಿದೆ. ಕೃಷಿ ವಲಯದಿಂದ ಆರ್ಥಿಕತೆ ಹೆಚ್ಚಾಗಲಿದೆ. ವಿವಿಧ ರಾಜ್ಯಗಳಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ನಿಯಮಗಳ ಹೊರತಾಗಿಯೂ ರೈತರು ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡುವ ಅವಕಾಶ ಈ ಕಾಯ್ದೆ ನೀಡುತ್ತದೆ. ರೈತರಿಗೆ ಮೋಸ ಮಾಡುವ ದಲ್ಲಾಳಿಗಳ ಹಾಗೂ ಖರೀದಿ ದಾರರ ಪರವಾಗಿ ವಿಪಕ್ಷಗಳು ಈ ರೈತಪರ ಕಾಯ್ದೆಯನ್ನು ವಿರೋಧಿಸುತ್ತವೆ. ಪ್ರತಿಪಕ್ಷಗಳ ಈ ನಿಲುವನ್ನು ಬಿಜೆಪಿ ರೈತ ಮೋರ್ಚಾ ಖಂಡಿಸುತ್ತದೆ ಎಂದರು.
ದ.ಕ. ಜಿಲ್ಲಾ ರೈತಮೋರ್ಚಾ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಪ್ರಧಾನ ಕಾರ್ಯದರ್ಶಿ ಕೆ. ರಾಘವೇಂದ್ರ ಭಟ್, ಪುತ್ತೂರು ಮಂಡಲ ರೈತಮೋರ್ಚಾ ಅಧ್ಯಕ್ಷ ಸುರೇಶ ಕಣ್ಣರಾಯ, ಪುತ್ತೂರು ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಉಪಸ್ಥಿತರಿದ್ದರು.
ಬಿಜೆಪಿ ರೈತ ಮೋರ್ಚಾ ಪತ್ರಿಕಾಗೋಷ್ಟಿ
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಲಸಿನ ಅರಿವಿನ ಹರಿವಿನ ಪ್ರಸಂಗ ‘ಪನಸೋಪಾಖ್ಯಾನ’ | ಪರಿಸರ ಉಳಿಸುವ ಸಂದೇಶ ಸಾರಿದ ತಾಳಮದ್ದಳೆ |

 ‘ಪನಸೋಪಾಖ್ಯಾನ’ ಪ್ರಸಂಗವು ತಾಳಮದ್ದಳೆ ರೂಪದಲ್ಲಿ ಪ್ರಸ್ತುತವಾಯಿತು. ಇದು ಕಾಲ್ಪನಿಕ ಕಥಾಭಾಗವನ್ನು ಹೊಂದಿರುವ ಪ್ರಸಂಗ.…

21 minutes ago

ಹವಾಮಾನ ವರದಿ | 14-06-2025 | ಜೂನ್.‌18 ರಿಂದ ಮಳೆಯ ಪ್ರಮಾಣ ಕಡಿಮೆ ನಿರೀಕ್ಷೆ

ಜೂನ್ 18 ರಿಂದ ಮುಂಗಾರು ಮತ್ತೆ ದುರ್ಬಲಗೊಂಡು ಮಳೆ ಕಡಿಮೆಯಾಗುವ ಸೂಚನೆಗಳಿವೆ.

1 hour ago

ಅಡಿಕೆ ಜಗಿಯುವ ಪ್ರವೃತ್ತಿ ಎಲ್ಲೆಲ್ಲಿ ಇದೆ ?

ತಾಂಬೂಲ ಸೇವನೆಗೆ ಅದರದ್ದೇ ಆದ ಇತಿಹಾಸ ಇದೆ. ಜಗತ್ತಿನ ಅಭಿವೃದ್ಧಿ ಹೊಂದಿದ ಮತ್ತು…

3 hours ago

ಮಕ್ಕಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ಪರಿಚಯ ಮೂಡಿಸಬೇಕಿದೆ

ಮಕ್ಕಳಲ್ಲಿ ಬೌದ್ಧಿಕ ಸಾಮರ್ಥ್ಯ ಗಣಿತ ಹಾಗೂ ಭಾಷಾ ಕೌಶಲ್ಯವನ್ನು ಅಭಿವೃದ್ಧಿಪಡಿಸುವ ಕಲಿಕಾ ಮಾದರಿ…

5 hours ago

ಎಳೆ ಅಡಿಕೆ ಬೀಳಲು ಹವಾಮಾನ ವೈಪರೀತ್ಯ ಕಾರಣವೇ…!?

ಅಡಿಕೆ ಬೆಳೆಗಾರರಿಗೆ ಜೂನ್‌ ಆರಂಭವಾಗುತ್ತಿದ್ದಂತೆಯೇ ಎಳೆ ಅಡಿಕೆ ಬೀಳುವ ಸಮಸ್ಯೆ ಆರಂಭವಾಗಿದೆ. ವಿವಿಧ…

10 hours ago