Advertisement
Political mirror

ರೈತನ ಕಲ್ಯಾಣಕ್ಕಾಗಿಯೇ ಕೇಂದ್ರ ಸರ್ಕಾರ ಹೊಸ ಕೃಷಿ ಮಸೂದೆ | ಬಿಜೆಪಿ ರೈತ ಮೋರ್ಚಾ

Share
ಬಿಜೆಪಿ ನೇತೃತ್ವದ ಪ್ರಧಾನಿ ನರೇಂದ್ರ ಮೋದಿ ಸರಕಾರವು ಜಾರಿಗೆ ತಂದಿರುವ ಕೃಷಿಕರ ಮತ್ತು ಕೃಷಿ ಕ್ಷೇತ್ರದ ಸುಧಾರಣೆ ಮಾಡಲಿರುವ ಮಹತ್ವದ ಕಾಯ್ದೆಯನ್ನು ದ.ಕ. ಜಿಲ್ಲಾ ಬಿಜೆಪಿ ರೈತಮೋರ್ಚಾ ಸ್ವಾಗತಿಸಿ ಪ್ರಧಾನಿ ಮೋದಿ ಹಾಗೂ ಕೇಂದ್ರ ಸರಕಾರವನ್ನು ಅಭಿನಂದಿಸಿದೆ.
ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಬಿಜೆಪಿ ರೈತಮೋರ್ಚಾ ಉಪಾಧ್ಯಕ್ಷ ಎ.ವಿ. ತೀರ್ಥರಾಮ, ರೈತನ ಕಲ್ಯಾಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರ ಹಲವಾರು ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದೆ. ದೇಶದ ಕೃಷಿ ಉತ್ಪನ್ನಕ್ಕಾಗಿ ಮಾರುಕಟ್ಟೆ ಸೃಷ್ಠಿಸುವ ಇರಾದೆಯಿಂದ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸುವ ಸಾಧ್ಯತೆ ಇರುವ ನೂತನ ಕೃಷಿ ಕಾಯ್ದೆಯನ್ನು ಜಾರಿಗೆ ತಂದಿದೆ. ರೈತರ ಉತ್ಪನ್ನ, ವ್ಯಾಪಾರ ಮತ್ತು ವಾಣಿಜ್ಯ ಕಾಯ್ದೆಯು ರೈತರಿಗೆ ಮುಕ್ತವಾಗಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುವ ಅವಕಾಶ. ಅದೇ ರೀತಿ ವ್ಯಾಪಾರಿಗಳಿಗೂ ತಮಗೆ ಬೇಕಾದ ಕೃಷಿ ಉತ್ಪನ್ನಗಳನ್ನು ಮುಕ್ತವಾಗಿ ಖರೀದಿಸುವ ಅವಕಾಶವನ್ನು ಕಲ್ಪಿಸಲಾಗಿದೆ. ರೈತನ ಆರ್ಥಿಕ ಅಭಿವೃದ್ಧಿಯ ದೃಷ್ಠಿಕೋನದಿಂದ ಈ ಕಾಯ್ದೆಯನ್ನು ಕೇಂದ್ರ ಸರಕಾರ ಜಾರಿ ಮಾಡಲು ಉದ್ದೇಶಿಸಿದೆ.
ರೈತರ ಕಲ್ಯಾಣ ಮತ್ತು ರಕ್ಷಣೆ, ಬೆಲೆ ಭರವಸೆ ಮತ್ತು ಸೇವಾ ಒಪ್ಪಂದವನ್ನು ಈ ಮಸೂದೆ ಕಾರ್ಯಗತ ಮಾಡಲಿದೆ. ನ್ಯಾಯದರದ ಚೌಕಟ್ಟಿನೊಳಗೆ ಕೃಷಿ ಉತ್ಪನ್ನಗಳ ಮಾರಾಟ ಹಾಗೂ ಕೃಷಿ ಸೇವೆಗಳನ್ನು ಒದಗಿಸುವ ಗುರಿಯನ್ನು ಈ ಕಾಯ್ದೆ ಹೊಂದಿದೆ. ಈ ಮಸೂದೆಯಿಂದ ಕೃಷಿ ವಲಯದಲ್ಲಿ ಮಹತ್ವದ ಸುಧಾರಣೆಯಾಗಲಿದೆ. ಕೃಷಿ ವಲಯದಿಂದ ಆರ್ಥಿಕತೆ ಹೆಚ್ಚಾಗಲಿದೆ. ವಿವಿಧ ರಾಜ್ಯಗಳಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ನಿಯಮಗಳ ಹೊರತಾಗಿಯೂ ರೈತರು ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡುವ ಅವಕಾಶ ಈ ಕಾಯ್ದೆ ನೀಡುತ್ತದೆ. ರೈತರಿಗೆ ಮೋಸ ಮಾಡುವ ದಲ್ಲಾಳಿಗಳ ಹಾಗೂ ಖರೀದಿ ದಾರರ ಪರವಾಗಿ ವಿಪಕ್ಷಗಳು ಈ ರೈತಪರ ಕಾಯ್ದೆಯನ್ನು ವಿರೋಧಿಸುತ್ತವೆ. ಪ್ರತಿಪಕ್ಷಗಳ ಈ ನಿಲುವನ್ನು ಬಿಜೆಪಿ ರೈತ ಮೋರ್ಚಾ ಖಂಡಿಸುತ್ತದೆ ಎಂದರು.
ದ.ಕ. ಜಿಲ್ಲಾ ರೈತಮೋರ್ಚಾ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಪ್ರಧಾನ ಕಾರ್ಯದರ್ಶಿ ಕೆ. ರಾಘವೇಂದ್ರ ಭಟ್, ಪುತ್ತೂರು ಮಂಡಲ ರೈತಮೋರ್ಚಾ ಅಧ್ಯಕ್ಷ ಸುರೇಶ ಕಣ್ಣರಾಯ, ಪುತ್ತೂರು ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಉಪಸ್ಥಿತರಿದ್ದರು.
ಬಿಜೆಪಿ ರೈತ ಮೋರ್ಚಾ ಪತ್ರಿಕಾಗೋಷ್ಟಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

25 minutes ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

9 hours ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

13 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

1 day ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

1 day ago

ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ

ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…

1 day ago