ಅಡಿಕೆ ಬೆಳೆಗಾರರಿಗೆ ನೂತನ ತಂತ್ರಜ್ಞಾನವೊಂದನ್ನು ಬೆಳ್ತಂಗಡಿ ತಾಲೂಕಿನ ನಿಡ್ಲೆಯಲ್ಲಿ ಅಗ್ರಿಲೀಫ್ ಎಕ್ಸ್ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ಅಭಿವೃದ್ಧಿಪಡಿಸಿದೆ. ಚಾಲಿ ಅಡಿಕೆ ಸುಲಿದ ಬಳಿಕ ಗುಣಮಟ್ಟದ ಅಡಿಕೆ, ಪಠೋರ, ಕೋಕಾ ಪ್ರತ್ಯೇಕಿಸಲು ಅಥವಾ ವಿಂಗಡಿಸಲು ಎಐ ಚಾಲಿತ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದ್ದಾರೆ. ಈ ಮಾದರಿಯು ಇದೀಗ ಗಮನ ಸೆಳೆದಿದೆ.
ಅಡಿಕೆ ಹಾಳೆತಟ್ಟೆ ಉದ್ಯಮವನ್ನು ನಡೆಸುತ್ತಿರುವ ನಿಡ್ಲೆಯ ಅಗ್ರಿಲೀಫ್ ಎಕ್ಸ್ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ಇದರ ಸಂಸ್ಥಾಪಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅವಿನಾಶ್ ರಾವ್ ಹಾಗೂ ಸಹ-ಸಂಸ್ಥಾಪಕ ಅತಿಶಯ ಜೈನ್ ಅವರು ಎರಡು ವರ್ಷಗಳ ಹಿಂದೆ ಗುಣಮಟ್ಟದ ಆಧಾರದ ಮೇಲೆ ಹಾಳೆತಟ್ಟೆ ಬೇರ್ಪಡಿಸಲು ಎಐ ತಂತ್ರಜ್ಞಾನ ಆಧಾರಿತ ತಂತ್ರಜ್ಞಾನವನ್ನು ಬಳಸಿದ್ದರು. ಅದಾದ ಬಳಿಕ ಅದೇ ತಂಡವು ಅಡಿಕೆ ವಿಭಾಗಿಸಲು ಎಐ ತಂತ್ರಜ್ಞಾನ ಬಳಕೆ ಮಾಡಿ ಪ್ರಾಯೋಗಿಕವಾಗಿ ಅಭಿವೃದ್ಧಿಪಡಿಸಿದ್ದಾರೆ. ಸದ್ಯ ಶೇ.80 ರಷ್ಟು ಅಡಿಕೆ ದರ್ಜೆಯನ್ನು, ಗುಣಮಟ್ಟವನ್ನು ಎಐ ಆಧಾರಿತವಾಗಿ ಪತ್ತೆ ಮಾಡುತ್ತದೆ. ಇನ್ನೂ ಅಭಿವೃದ್ಧಿಪಡಿಸಲು ಇನ್ನೂ ಆರು ತಿಂಗಳುಗಳು ಬೇಕಾಗುತ್ತದೆ. ಇತರ ದರ್ಜೆಯ ಅಡಿಕೆಯನ್ನು ಗುರುತಿಸಲು ಮತ್ತು ವಿಂಗಡಿಸಲು ತಂತ್ರಜ್ಞಾನವನ್ನು ಮತ್ತಷ್ಟು ಅಭಿವೃದ್ಧಿಪಡಿಸಬಹುದು ಎಂದು ಅವಿನಾಶ್ ರಾವ್ ಹೇಳಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಅಗ್ರಿಲೀಫ್ ಎಕ್ಸ್ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ಇದರ ಕಾರ್ಯಚಟುವಟಿಕೆಯನ್ನು ವೀಕ್ಷಿಸಲು ಅಡಿಕೆ ವಲಯದ ಸಹಕಾರಿ ಸಂಸ್ಥೆಗಳು ಹಾಗೂ ಪ್ರಮುಖರು ನಿಡ್ಲೆಯ ಕಂಪೆನಿಗೆ ಭೇಟಿ ನೀಡಿದರು. ಈ ಸಂದರ್ಭ ಶಾಸಕ ಆರಗ ಜ್ಞಾನೇಂದ್ರ, ಕ್ಯಾಂಪ್ಕೋ ಅಧ್ಯಕ್ಷ ಎಸ್ ಆರ್ ಸತೀಶ್ಚಂದ್ರ, ಕ್ಯಾಂಪ್ಕೋ ಮಾಜಿ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ, ಕ್ಯಾಂಪ್ಕೋ ಎಂಡಿ ಸತ್ಯನಾರಾಯಣ, ಶಿರಸಿಯ ಟಿಎಸ್ಎಸ್ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯ, ತುಮ್ಕೋಸ್ ಅಧ್ಯಕ್ಷ ಶಿವಕುಮಾರ್, ಮ್ಯಾಮ್ಕೋಸ್ ಅಧ್ಯಕ್ಷ ಉಪಾಧ್ಯಕ್ಷ ವಿ.ಪಿ.ಮಹೇಶ್, ಅಖಿಲ ಭಾರತ ಅಡಕೆ ಬೆಳೆಗಾರರ ಸಂಘದ ಅಧ್ಯಕ್ಷ ಮಹೇಶ್ ಪುಚ್ಚಪ್ಪಾಡಿ, ನಿವೃತ್ತ ಉಪನ್ಯಾಸಕ ವಿಘ್ನೇಶ್ವರ ಭಟ್ ವರ್ಮುಡಿ, ಸಂಶೋಧಕ ಬದನಾಜೆ ಶಂಕರ ಭಟ್, ಎಆರ್ಡಿಎಫ್ ಕಾರ್ಯನಿರ್ವಹಣಾಧಿಕಾರಿ ಡಾ.ಕೇಶವ ಭಟ್ ಮೊದಲಾದವರು ಇದ್ದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…