ಕೃಷಿಯಲ್ಲಿ ಹೆಚ್ಚಿನ ಇಳುವರಿಗಾಗಿ ಎಐ ಕೃಷಿ ನೀತಿ | ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ಮೀಸಲು

June 22, 2025
10:00 AM

ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್‌ಗಳು ಮತ್ತು ರೊಬೊಟಿಕ್ಸ್ ಅನ್ನು ಪರಿಚಯಿಸುವ ಗುರಿಯನ್ನು ಹೊಂದಿರುವ  ಮಹಾಅಗ್ರಿ-ಎಐ ನೀತಿಯನ್ನು ಮಹಾರಾಷ್ಟ್ರದಲ್ಲಿ ಜಾರಿಗೆ ತರಲು ಸಿದ್ಧತೆ ನಡೆಸಲಾಗುತ್ತಿದೆ. ಈ ಬಗ್ಗೆ ಈಗಾಗಲೇ ಸಂಪುಟದಲ್ಲೂ ಅನುಮೋದನೆ ನೀಡಲಾಗಿದೆ.

ಡಿಜಿಟಲ್ ಯುಗದಲ್ಲಿ ಕೃಷಿ ವಲಯವನ್ನು ಕೂಡಾ ಶಕ್ತಿಶಾಲಿಯಾಗಿಸಲು ಮತ್ತು ರೈತರು ಕೃಷಿಯಲ್ಲಿ ಕೃತಕ ಬುದ್ಧಿಮತ್ತೆ(AI),  ಡ್ರೋನ್‌ಗಳು, ಕಂಪ್ಯೂಟರ್ ವಿಷನ್, ರೊಬೊಟಿಕ್ಸ್ ಮತ್ತು  ಹವಾಮಾನ ವಿಶ್ಲೇಷಣೆಯಂತಹ  ತಂತ್ರಜ್ಞಾನಗಳನ್ನು ಬಳಸಿಕೊಳ್ಳಲು ಪ್ರೋತ್ಸಾಹಿಸಲು ಮಹಾರಾಷ್ಟ್ರ ಸರ್ಕಾರ ಯೋಜನೆ ರೂಪಿಸಿದೆ, ಈ ನೀತಿಯ ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ರೂ.ಗಳನ್ನುಕೂಡಾ ಮೀಸಲಿಟ್ಟಿದೆ.

ಸಾಂಪ್ರದಾಯಿಕ ಕೃಷಿಗಿಂತ ಭಿನ್ನವಾಗಿ, ತಂತ್ರಜ್ಞಾನದಿಂದ ರೈತರಿಗೆ ಲಾಭ ಪಡೆಯಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಈ ನೀತಿ ಅಗತ್ಯವಿದೆ ಎಂದು ಸರ್ಕಾರ ಹೇಳಿದೆ.

ಇಲ್ಲಿAI  ಸಹಾಯದಿಂದ, ಮರಾಠಿ ಭಾಷೆಯಲ್ಲಿ ಚಾಟ್‌ಬಾಟ್‌ಗಳು ಮತ್ತು ಧ್ವನಿ ಸಹಾಯಕಗಳನ್ನು ಬಳಸಿಕೊಂಡು ರೈತರಿಗೆ  ಸಲಹೆಯನ್ನು ನೀಡಲಾಗುವುದು. ಇದು ಬೆಳೆ ಉತ್ಪಾದನೆ, ರೋಗ ಮತ್ತು ಕೀಟ ನಿರ್ವಹಣೆ, ಹವಾಮಾನ ಮುನ್ಸೂಚನೆಗಳು, ಮಾರುಕಟ್ಟೆ ಬೆಲೆಗಳು ಮತ್ತು ಸರ್ಕಾರಿ ಯೋಜನೆಗಳ ಕುರಿತು ಮಾಹಿತಿಯನ್ನು ಒದಗಿಸುತ್ತದೆ.

ಇದರ ಜೊತೆಗೆ ಈ ವೇದಿಕೆಯು ಕೃಷಿ ಭೂಮಿಯಿಂದ ಗ್ರಾಹಕರವರೆಗಿನ ಎಲ್ಲಾ ಮಾಹಿತಿಯನ್ನು , ಬೆಳೆಗಳಿಗೆ ಬಳಸಲಾದ ರಸಗೊಬ್ಬರಗಳು ಮತ್ತು ಕೀಟನಾಶಕಗಳು, ಕೃಷಿ ಪದ್ಧತಿಗಳು, ಕೊಯ್ಲಿನ ನಂತರದ ಸಂಸ್ಕರಣೆ ಮತ್ತು ಗುಣಮಟ್ಟದ ಪ್ರಮಾಣಪತ್ರಗಳು ಸೇರಿದಂತೆ ಇತರ ವಿವರಗಳ ಡಿಜಿಟಲ್ ಮತ್ತು ಜಿಯೋ-ಟ್ಯಾಗ್ ಮಾಡಿದ ದಾಖಲೆಯನ್ನು ಕೂಡಾ ಸಹ ರಚಿಸುತ್ತದೆ. ಇದು ಮಾರುಕಟ್ಟೆಗೂ ಅನುಕೂಲವಾಗಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ
July 14, 2026
7:01 AM
by: ದ ರೂರಲ್ ಮಿರರ್.ಕಾಂ
ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ
July 14, 2026
6:53 AM
by: ದ ರೂರಲ್ ಮಿರರ್.ಕಾಂ
ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ
July 14, 2026
6:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror