MIRROR FOCUS

ಕೃಷಿಯಲ್ಲಿ ಹೆಚ್ಚಿನ ಇಳುವರಿಗಾಗಿ ಎಐ ಕೃಷಿ ನೀತಿ | ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ಮೀಸಲು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್‌ಗಳು ಮತ್ತು ರೊಬೊಟಿಕ್ಸ್ ಅನ್ನು ಪರಿಚಯಿಸುವ ಗುರಿಯನ್ನು ಹೊಂದಿರುವ  ಮಹಾಅಗ್ರಿ-ಎಐ ನೀತಿಯನ್ನು ಮಹಾರಾಷ್ಟ್ರದಲ್ಲಿ ಜಾರಿಗೆ ತರಲು ಸಿದ್ಧತೆ ನಡೆಸಲಾಗುತ್ತಿದೆ. ಈ ಬಗ್ಗೆ ಈಗಾಗಲೇ ಸಂಪುಟದಲ್ಲೂ ಅನುಮೋದನೆ ನೀಡಲಾಗಿದೆ.

Advertisement

ಡಿಜಿಟಲ್ ಯುಗದಲ್ಲಿ ಕೃಷಿ ವಲಯವನ್ನು ಕೂಡಾ ಶಕ್ತಿಶಾಲಿಯಾಗಿಸಲು ಮತ್ತು ರೈತರು ಕೃಷಿಯಲ್ಲಿ ಕೃತಕ ಬುದ್ಧಿಮತ್ತೆ(AI),  ಡ್ರೋನ್‌ಗಳು, ಕಂಪ್ಯೂಟರ್ ವಿಷನ್, ರೊಬೊಟಿಕ್ಸ್ ಮತ್ತು  ಹವಾಮಾನ ವಿಶ್ಲೇಷಣೆಯಂತಹ  ತಂತ್ರಜ್ಞಾನಗಳನ್ನು ಬಳಸಿಕೊಳ್ಳಲು ಪ್ರೋತ್ಸಾಹಿಸಲು ಮಹಾರಾಷ್ಟ್ರ ಸರ್ಕಾರ ಯೋಜನೆ ರೂಪಿಸಿದೆ, ಈ ನೀತಿಯ ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ರೂ.ಗಳನ್ನುಕೂಡಾ ಮೀಸಲಿಟ್ಟಿದೆ.

ಸಾಂಪ್ರದಾಯಿಕ ಕೃಷಿಗಿಂತ ಭಿನ್ನವಾಗಿ, ತಂತ್ರಜ್ಞಾನದಿಂದ ರೈತರಿಗೆ ಲಾಭ ಪಡೆಯಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಈ ನೀತಿ ಅಗತ್ಯವಿದೆ ಎಂದು ಸರ್ಕಾರ ಹೇಳಿದೆ.

ಇಲ್ಲಿAI  ಸಹಾಯದಿಂದ, ಮರಾಠಿ ಭಾಷೆಯಲ್ಲಿ ಚಾಟ್‌ಬಾಟ್‌ಗಳು ಮತ್ತು ಧ್ವನಿ ಸಹಾಯಕಗಳನ್ನು ಬಳಸಿಕೊಂಡು ರೈತರಿಗೆ  ಸಲಹೆಯನ್ನು ನೀಡಲಾಗುವುದು. ಇದು ಬೆಳೆ ಉತ್ಪಾದನೆ, ರೋಗ ಮತ್ತು ಕೀಟ ನಿರ್ವಹಣೆ, ಹವಾಮಾನ ಮುನ್ಸೂಚನೆಗಳು, ಮಾರುಕಟ್ಟೆ ಬೆಲೆಗಳು ಮತ್ತು ಸರ್ಕಾರಿ ಯೋಜನೆಗಳ ಕುರಿತು ಮಾಹಿತಿಯನ್ನು ಒದಗಿಸುತ್ತದೆ.

ಇದರ ಜೊತೆಗೆ ಈ ವೇದಿಕೆಯು ಕೃಷಿ ಭೂಮಿಯಿಂದ ಗ್ರಾಹಕರವರೆಗಿನ ಎಲ್ಲಾ ಮಾಹಿತಿಯನ್ನು , ಬೆಳೆಗಳಿಗೆ ಬಳಸಲಾದ ರಸಗೊಬ್ಬರಗಳು ಮತ್ತು ಕೀಟನಾಶಕಗಳು, ಕೃಷಿ ಪದ್ಧತಿಗಳು, ಕೊಯ್ಲಿನ ನಂತರದ ಸಂಸ್ಕರಣೆ ಮತ್ತು ಗುಣಮಟ್ಟದ ಪ್ರಮಾಣಪತ್ರಗಳು ಸೇರಿದಂತೆ ಇತರ ವಿವರಗಳ ಡಿಜಿಟಲ್ ಮತ್ತು ಜಿಯೋ-ಟ್ಯಾಗ್ ಮಾಡಿದ ದಾಖಲೆಯನ್ನು ಕೂಡಾ ಸಹ ರಚಿಸುತ್ತದೆ. ಇದು ಮಾರುಕಟ್ಟೆಗೂ ಅನುಕೂಲವಾಗಲಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂದಿನ 7 ದಿನಗಳ ಉತ್ತಮ ಮಳೆ – ಹವಾಮಾನ ಇಲಾಖೆ

ಮುಂದಿನ ಏಳು ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಕೆಲವು ಕಡೆ ಭಾರೀ…

4 hours ago

ತೆಂಗು ಉತ್ಪಾದನೆ ಹೆಚ್ಚಿಸಲು‌ ಕೇರಳದಲ್ಲಿ ಪ್ಲಾನ್‌ | ಹೊಸ ಕೋರ್ಸ್‌ ಅಭಿವೃದ್ಧಿಪಡಿಸಲು ಚಿಂತನೆ |

ಇತಿಹಾಸದಲ್ಲಿ ಮೊದಲ ಬಾರಿಗೆ ಕೇರಳ ಕೊಬ್ಬರಿ ಆಮದು ಮಾಡಿಕೊಳ್ಳುವ ಸಾಧ್ಯತೆ ಇದೆ.ತೆಂಗಿನಕಾಯಿ ಉತ್ಪಾದನೆಯಲ್ಲಿ…

4 hours ago

ಶ್ರಾವಣ ಮಾಸದಲ್ಲಿ ಮೊಸರನ್ನು ತಿನ್ನಬಾರದಂತೆ ಯಾಕೆ?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

5 hours ago

ಹೆದ್ದಾರಿಗಳಲ್ಲಿ ಹಸಿರು ಅಭಿಯಾನ | 4.78 ಕೋಟಿಗೂ ಹೆಚ್ಚು ಗಿಡಗಳ ನಾಟಿ

ದೇಶದಲ್ಲಿ ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ಹೆಚ್ಚು ಪರಿಸರ…

14 hours ago

ಪ್ರತಿಯೊಂದು  ಗ್ರಾಮ ಪಂಚಾಯಿತಿಯಲ್ಲಿ  ಕರ್ನಾಟಕ ಪಬ್ಲಿಕ್ ಶಾಲೆ ನಿರ್ಮಾಣ

ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಆಧುನಿಕ ಮೂಲಭೂತ…

15 hours ago

ದಾವಣಗೆರೆ ನಗರ ಸೇರಿದಂತೆ ಜಿಲ್ಲೆಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ನಿಷೇಧ

ದಾವಣಗೆರೆ ನಗರ ಸೇರಿದಂತೆ ಜಿಲ್ಲಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟವನ್ನು…

15 hours ago