Advertisement
MIRROR FOCUS

ಕೃಷಿಯಲ್ಲಿ ಹೆಚ್ಚಿನ ಇಳುವರಿಗಾಗಿ ಎಐ ಕೃಷಿ ನೀತಿ | ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ಮೀಸಲು

Share

ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್‌ಗಳು ಮತ್ತು ರೊಬೊಟಿಕ್ಸ್ ಅನ್ನು ಪರಿಚಯಿಸುವ ಗುರಿಯನ್ನು ಹೊಂದಿರುವ  ಮಹಾಅಗ್ರಿ-ಎಐ ನೀತಿಯನ್ನು ಮಹಾರಾಷ್ಟ್ರದಲ್ಲಿ ಜಾರಿಗೆ ತರಲು ಸಿದ್ಧತೆ ನಡೆಸಲಾಗುತ್ತಿದೆ. ಈ ಬಗ್ಗೆ ಈಗಾಗಲೇ ಸಂಪುಟದಲ್ಲೂ ಅನುಮೋದನೆ ನೀಡಲಾಗಿದೆ.

Advertisement

ಡಿಜಿಟಲ್ ಯುಗದಲ್ಲಿ ಕೃಷಿ ವಲಯವನ್ನು ಕೂಡಾ ಶಕ್ತಿಶಾಲಿಯಾಗಿಸಲು ಮತ್ತು ರೈತರು ಕೃಷಿಯಲ್ಲಿ ಕೃತಕ ಬುದ್ಧಿಮತ್ತೆ(AI),  ಡ್ರೋನ್‌ಗಳು, ಕಂಪ್ಯೂಟರ್ ವಿಷನ್, ರೊಬೊಟಿಕ್ಸ್ ಮತ್ತು  ಹವಾಮಾನ ವಿಶ್ಲೇಷಣೆಯಂತಹ  ತಂತ್ರಜ್ಞಾನಗಳನ್ನು ಬಳಸಿಕೊಳ್ಳಲು ಪ್ರೋತ್ಸಾಹಿಸಲು ಮಹಾರಾಷ್ಟ್ರ ಸರ್ಕಾರ ಯೋಜನೆ ರೂಪಿಸಿದೆ, ಈ ನೀತಿಯ ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ರೂ.ಗಳನ್ನುಕೂಡಾ ಮೀಸಲಿಟ್ಟಿದೆ.

ಸಾಂಪ್ರದಾಯಿಕ ಕೃಷಿಗಿಂತ ಭಿನ್ನವಾಗಿ, ತಂತ್ರಜ್ಞಾನದಿಂದ ರೈತರಿಗೆ ಲಾಭ ಪಡೆಯಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಈ ನೀತಿ ಅಗತ್ಯವಿದೆ ಎಂದು ಸರ್ಕಾರ ಹೇಳಿದೆ.

ಇಲ್ಲಿAI  ಸಹಾಯದಿಂದ, ಮರಾಠಿ ಭಾಷೆಯಲ್ಲಿ ಚಾಟ್‌ಬಾಟ್‌ಗಳು ಮತ್ತು ಧ್ವನಿ ಸಹಾಯಕಗಳನ್ನು ಬಳಸಿಕೊಂಡು ರೈತರಿಗೆ  ಸಲಹೆಯನ್ನು ನೀಡಲಾಗುವುದು. ಇದು ಬೆಳೆ ಉತ್ಪಾದನೆ, ರೋಗ ಮತ್ತು ಕೀಟ ನಿರ್ವಹಣೆ, ಹವಾಮಾನ ಮುನ್ಸೂಚನೆಗಳು, ಮಾರುಕಟ್ಟೆ ಬೆಲೆಗಳು ಮತ್ತು ಸರ್ಕಾರಿ ಯೋಜನೆಗಳ ಕುರಿತು ಮಾಹಿತಿಯನ್ನು ಒದಗಿಸುತ್ತದೆ.

ಇದರ ಜೊತೆಗೆ ಈ ವೇದಿಕೆಯು ಕೃಷಿ ಭೂಮಿಯಿಂದ ಗ್ರಾಹಕರವರೆಗಿನ ಎಲ್ಲಾ ಮಾಹಿತಿಯನ್ನು , ಬೆಳೆಗಳಿಗೆ ಬಳಸಲಾದ ರಸಗೊಬ್ಬರಗಳು ಮತ್ತು ಕೀಟನಾಶಕಗಳು, ಕೃಷಿ ಪದ್ಧತಿಗಳು, ಕೊಯ್ಲಿನ ನಂತರದ ಸಂಸ್ಕರಣೆ ಮತ್ತು ಗುಣಮಟ್ಟದ ಪ್ರಮಾಣಪತ್ರಗಳು ಸೇರಿದಂತೆ ಇತರ ವಿವರಗಳ ಡಿಜಿಟಲ್ ಮತ್ತು ಜಿಯೋ-ಟ್ಯಾಗ್ ಮಾಡಿದ ದಾಖಲೆಯನ್ನು ಕೂಡಾ ಸಹ ರಚಿಸುತ್ತದೆ. ಇದು ಮಾರುಕಟ್ಟೆಗೂ ಅನುಕೂಲವಾಗಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

4 hours ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

4 hours ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

4 hours ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

4 hours ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

14 hours ago

ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ

ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…

1 day ago