Advertisement
ಸುದ್ದಿಗಳು

ಭಾರತದಲ್ಲಿ AI ತಂತ್ರಜ್ಞಾನದ ಕಡೆಗೆ ಲಕ್ಷ್ಯ | Artificial Intelligence ನಿಯಂತ್ರಣದ ಕಡೆಗೂ ಗಮನ |

Share

ಪ್ರಪಂಚದ ಹಲವು ಕಡೆಗಳಲ್ಲಿ  ಇಂದು AI (Artificial Intelligence) ತಂತ್ರಜ್ಞಾನ ಬೆಳೆಯುತ್ತಿದೆ. ಕೃಷಿಯಿಂದ ತೊಡಗಿ ಎಲ್ಲಾ ಕ್ಷೇತ್ರಗಳಲ್ಲೂ AI ಬಳಕೆ ಹೆಚ್ಚಾಗುತ್ತಿದೆ. ಭಾರತದಲ್ಲಿ ಇನ್ನೂ ಈ ಕ್ಷೇತ್ರ ಬೆಳವಣಿಗೆಯ ಹಂತದಲ್ಲಿದೆ. ಭಾರತದಲ್ಲಿ ಈ ಕ್ಷೇತ್ರದ ಬೆಳವಣಿಗೆಗೆ ಅವಕಾಶ ಇರುವುರಿಂದ ಹೆಚ್ಚು ಗಮನ ನೀಡಲಾಗುತ್ತಿದೆ. ಇದೇ ವೇಳೆ AI ತಂತ್ರಜ್ಞಾನಗಳ ಮೂಲಕ ನಡೆಯಬಹುದಾದ ಅನಾಹುತಗಳ ಕಡೆಗೂ ಗಮನಹರಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಭಾರತದಲ್ಲೂ ನಿಯಂತ್ರಣ ಮಾಡಲಾಗುತ್ತಿದೆ. ನಾವು ಮಾಡಿದ ರೀತಿಯಲ್ಲೇ ನಡೆಯುವ ಕಾರ್ಯಗಳ ನಿಯಂತ್ರಂಣ ಮಾಡಲಾಗುತ್ತದೆ ಎಂದು ಮಾಹಿತಿ ಮತ್ತು ತಂತ್ರಜ್ಞಾನ ವಿಭಾಗ ಹೇಳಿದೆ.

ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು AI (Artificial Intelligence) ಮೂಲಕ ಉಂಟಾಗಬಹುದಾದ ಹಾಗೂ ಉಂಟಾದ ಸಂಭಾವ್ಯ ಹಾನಿಯಿಂದ ಜನರನ್ನು ರಕ್ಷಿಸಲು ಸರ್ಕಾರವು ನಿಯಮಗಳನ್ನು ಜಾರಿಗೆ ತರಲಿದೆ ಎಂದು ಘೋಷಿಸಿದ್ದಾರೆ. ಯಾವುದೇ ಹೊಸದಾದ ತಂತ್ರಜ್ಞಾನವನ್ನು ನಿಯಂತ್ರಿಸುವ ರೀತಿಯಲ್ಲಿಯೇ ಕೇಂದ್ರವು AI (Artificial Intelligence)  ನಿಯಂತ್ರಿಸುತ್ತದೆ ಎಂದು ಸಚಿವ ರಾಜೀವ್ ಚಂದ್ರಶೇಖರ್ ಶುಕ್ರವಾರ ಹೇಳಿದ್ದಾರೆ .

ಅಂತರ್ಜಾಲದಲ್ಲಿ ಹೆಚ್ಚುತ್ತಿರುವ ಅಪರಾಧದ ಬಗ್ಗೆ ಇದೇ ವೇಳೆ ಅವರು ಕಳವಳ ವ್ಯಕ್ತಪಡಿಸಿದರು.   ಭಾರತದಲ್ಲಿ ಸುಮಾರು 85 ಕೋಟಿ ಭಾರತೀಯರು ಪ್ರಸ್ತುತ ಇಂಟರ್ನೆಟ್ ಬಳಸುತ್ತಿದ್ದಾರೆ, 2025 ರ ವೇಳೆಗೆ ಈ ಸಂಖ್ಯೆ 120 ಕೋಟಿಗೆ ಏರುವ ನಿರೀಕ್ಷೆಯಿದೆ. ಇದೇ ವೇಳೆ  AI (Artificial Intelligence) ತಂತ್ರಜ್ಞಾನವೂ ವೇಗವಾಗಿ ಬೆಳೆಯುತ್ತಿದೆ.

AI (Artificial Intelligence) ತಂತ್ರಜ್ಞಾನದ ಬಗ್ಗೆ  ಓಪನ್‌ಎಐ  ಸಿಇಒ ಸ್ಯಾಮ್ ಆಲ್ಟ್‌ಮನ್  ಜೊತೆ  ನಡೆದ ಸಂವಾದದಲ್ಲಿ , ಈ ತಂತ್ರಜ್ಞಾನ ಹೆಚ್ಚು ಬಳಕೆಗೊಂಡರೆ ಕೆಲವು ಉದ್ಯೋಗಗಳು ಬಳಕೆಯಲ್ಲಿಲ್ಲದ ಸಾಧ್ಯತೆಯನ್ನು ಅವರು ಒಪ್ಪಿಕೊಂಡರು. ಆದರೆ ಇದೇ ವೇಳೆ  ಹೊಸ ಉದ್ಯೋಗಾವಕಾಶಗಳ ಹೊರಹೊಮ್ಮುವಿಕೆ ಸಾಧ್ಯವಿದೆ. ಹೊಸ ತಂತ್ರಜ್ಞಾನಗಳು ತಳಮಟ್ಟದವರೆಗೆ ತಲುಪಲಿದೆ ಎಂದೂ ಅವರು ಹೇಳಿದರು. AI (Artificial Intelligence)  ಸಂಪೂರ್ಣವಾಗಿ ಬದಲಿಸುವ ಬದಲು ಮಾನವ ಸಾಮರ್ಥ್ಯಗಳನ್ನು ಹೆಚ್ಚಿಸುವ ಸಾಧನವಾಗಿ ಗ್ರಹಿಸಬೇಕು ಎಂದು ಆಲ್ಟ್‌ಮ್ಯಾನ್ ಪ್ರತಿಪಾದಿಸಿದರು. ದೇಶದಲ್ಲಿ AI (Artificial Intelligence) ಹೆಚ್ಚಿಸಲು ಭಾರತೀಯ ಸ್ಟಾರ್ಟ್‌ಅಪ್‌ಗಳಿಗೆ ಧನಸಹಾಯ ನೀಡುವುದಾಗಿ ಆಲ್ಟ್‌ಮ್ಯಾನ್ ಘೋಷಿಸಿದರು.

ಭಾರತದ ಬಲಿಷ್ಠ AI (Artificial Intelligence) ಉದ್ಯಮ ಮತ್ತು ದತ್ತಾಂಶದ ದೊಡ್ಡ ಸಮೂಹವನ್ನು ನೀಡಿದರೆ,AI (Artificial Intelligence) ಆಧಾರಿತ ಉಪಯುಕ್ತತೆಗಳು ದೇಶದಲ್ಲಿ ಬೃಹತ್ ಸಾಮರ್ಥ್ಯವನ್ನು ಬಳಸಿಕೊಳ್ಳಬಹುದು.ಭಾರತದಲ್ಲಿ ಇನ್ನೂ ಆರಂಭಿಕ ಹಂತದಲ್ಲಿದೆ ಈ ಕ್ಷೇತ್ರ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

2 days ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

2 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

2 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

3 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

3 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

3 days ago