ರೈತರಿಗಾಗಿ ಕೃಷಿ ಇಲಾಖೆಯಿಂದ ಎಐ ವೇದಿಕೆ

November 25, 2025
1:20 PM

ರೈತರಿಗೆ ಆಯಾ ಪ್ರದೇಶ-ನಿರ್ದಿಷ್ಟ ಸಲಹೆಗಳು ಮತ್ತು ನೈಜ ಸಮಯದ ಮಾಹಿತಿಯನ್ನು ಒದಗಿಸುವ ದೃಷ್ಟಿಯಲ್ಲಿ ದೇಶದಲ್ಲಿಯೇ ಮೊದಲ ಬಾರಿಗೆ ಕರ್ನಾಟಕ ಕೃಷಿ ಇಲಾಖೆಯು ಕೃತಕ ಬುದ್ಧಿಮತ್ತೆ-ಚಾಲಿಯತ (Artificial intelligence) ವೇದಿಕೆಯನ್ನು ಪರಿಚಯಿಸಲು ಸಿದ್ಧತೆ ನಡೆಸುತ್ತಿದ್ದು, 2026 ರ ಖಾರಿಫ್ ವೇಳೆಗೆ ಪ್ರಾರಂಭವಾಗುವ ನಿರೀಕ್ಷೆಯಿದೆ. ಮಾತ್ರವಲ್ಲ, ಈ ವ್ಯವಸ್ಥೆಯು ರಾಜ್ಯಾದ್ಯಂತ ಒಂದು ಕೋಟಿಗೂ ಹೆಚ್ಚು ರೈತರಿಗೆ ಪ್ರಯೋಜನ ನೀಡುವ ಗುರಿಯನ್ನು ಇದು ಹೊಂದಿದೆ.

ಎಐ ವೇದಿಕೆಯನ್ನು ಇಸ್ರೋ, ಕರ್ನಾಟಕ ರಾಜ್ಯ ರಿಮೋಟ್ ಸೆನ್ಸಿಂಗ್ ಅಪ್ಲಿಕೇಶನ್ಸ್ ಸೆಂಟರ್ ಮತ್ತು ಬಿಇಎಲ್ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಲಾಗುತ್ತಿದ್ದು, ಇದು ರೈತರ ಫೋನ್‍ಗಳಿಗೆ ಕನ್ನಡದಲ್ಲಿ ಸಮಗ್ರ ಸಂದೇಶವನ್ನು ಕಳುಹಿಸುತ್ತಿದೆ. ಇದರಿಂದ ರೈತರು ಬೆಳೆ ಬೆಳೆಯುವ ಹಂತದಲ್ಲಿ ಅಥವಾ ಯಾವುದೇ ಪ್ರತಿಕೂಲ ಹವಾಮಾನ ಪರಿಸ್ಥಿತಿ ಇದ್ದರೆ, ಈ ವ್ಯವಸ್ಥೆಯು ಸೂಕ್ತವಾದ ಕೀಟನಾಶಕ ಬಳಕೆಯ ಕುರಿತ ಸಲಹೆಗಳನ್ನು ಕಳುಹಿಸುತ್ತದೆ. ಅದೇ ರೀತಿ, ಕೊಯ್ಲು ಅವಧಿಯಲ್ಲಿ ರೈತರು ಕೊಯ್ಲು ವಿಳಂಬ ಮಾಡಬೇಕೆ ಅಥವಾ ತಮ್ಮ ಕೊಯ್ಲು ಮಾಡಿದ ಬೆಳೆಯನ್ನು ರಕ್ಷಿಸಲು ಕ್ರಮಗಳನ್ನು ತೆಗೆದುಕೊಳ್ಳಬೇಕೇ ಎಂಬುದರ ಕುರಿತು ಮಾರ್ಗದರ್ಶನದೊಂದಿಗೆ ಹವಾಮಾನ ಎಚ್ಚರಿಕೆಯನ್ನು ಸ್ವೀಕರಿಸುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ
August 2, 2026
9:50 PM
by: ದ ರೂರಲ್ ಮಿರರ್.ಕಾಂ
ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ
August 2, 2026
9:41 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು
August 2, 2026
8:39 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?
August 2, 2026
6:59 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror