ರೈತರಿಗೆ ಆಯಾ ಪ್ರದೇಶ-ನಿರ್ದಿಷ್ಟ ಸಲಹೆಗಳು ಮತ್ತು ನೈಜ ಸಮಯದ ಮಾಹಿತಿಯನ್ನು ಒದಗಿಸುವ ದೃಷ್ಟಿಯಲ್ಲಿ ದೇಶದಲ್ಲಿಯೇ ಮೊದಲ ಬಾರಿಗೆ ಕರ್ನಾಟಕ ಕೃಷಿ ಇಲಾಖೆಯು ಕೃತಕ ಬುದ್ಧಿಮತ್ತೆ-ಚಾಲಿಯತ (Artificial intelligence) ವೇದಿಕೆಯನ್ನು ಪರಿಚಯಿಸಲು ಸಿದ್ಧತೆ ನಡೆಸುತ್ತಿದ್ದು, 2026 ರ ಖಾರಿಫ್ ವೇಳೆಗೆ ಪ್ರಾರಂಭವಾಗುವ ನಿರೀಕ್ಷೆಯಿದೆ. ಮಾತ್ರವಲ್ಲ, ಈ ವ್ಯವಸ್ಥೆಯು ರಾಜ್ಯಾದ್ಯಂತ ಒಂದು ಕೋಟಿಗೂ ಹೆಚ್ಚು ರೈತರಿಗೆ ಪ್ರಯೋಜನ ನೀಡುವ ಗುರಿಯನ್ನು ಇದು ಹೊಂದಿದೆ.
ಎಐ ವೇದಿಕೆಯನ್ನು ಇಸ್ರೋ, ಕರ್ನಾಟಕ ರಾಜ್ಯ ರಿಮೋಟ್ ಸೆನ್ಸಿಂಗ್ ಅಪ್ಲಿಕೇಶನ್ಸ್ ಸೆಂಟರ್ ಮತ್ತು ಬಿಇಎಲ್ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಲಾಗುತ್ತಿದ್ದು, ಇದು ರೈತರ ಫೋನ್ಗಳಿಗೆ ಕನ್ನಡದಲ್ಲಿ ಸಮಗ್ರ ಸಂದೇಶವನ್ನು ಕಳುಹಿಸುತ್ತಿದೆ. ಇದರಿಂದ ರೈತರು ಬೆಳೆ ಬೆಳೆಯುವ ಹಂತದಲ್ಲಿ ಅಥವಾ ಯಾವುದೇ ಪ್ರತಿಕೂಲ ಹವಾಮಾನ ಪರಿಸ್ಥಿತಿ ಇದ್ದರೆ, ಈ ವ್ಯವಸ್ಥೆಯು ಸೂಕ್ತವಾದ ಕೀಟನಾಶಕ ಬಳಕೆಯ ಕುರಿತ ಸಲಹೆಗಳನ್ನು ಕಳುಹಿಸುತ್ತದೆ. ಅದೇ ರೀತಿ, ಕೊಯ್ಲು ಅವಧಿಯಲ್ಲಿ ರೈತರು ಕೊಯ್ಲು ವಿಳಂಬ ಮಾಡಬೇಕೆ ಅಥವಾ ತಮ್ಮ ಕೊಯ್ಲು ಮಾಡಿದ ಬೆಳೆಯನ್ನು ರಕ್ಷಿಸಲು ಕ್ರಮಗಳನ್ನು ತೆಗೆದುಕೊಳ್ಳಬೇಕೇ ಎಂಬುದರ ಕುರಿತು ಮಾರ್ಗದರ್ಶನದೊಂದಿಗೆ ಹವಾಮಾನ ಎಚ್ಚರಿಕೆಯನ್ನು ಸ್ವೀಕರಿಸುತ್ತಾರೆ.
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…